Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊರಾರ್ಜಿ ದೇಸಾಯಿ ಶಾಲೆ ಪ್ರಕರಣ :ಕೇಂದ್ರ ಸಚಿವ ನಾರಾಯಣ ಸ್ವಾಮಿ ಹೇಳಿದ್ದೇನು ?

---Advertisement---

 

ಕೋಲಾರ : ಮೊರಾರ್ಜಿ ದೇಶಾಯಿ ಶಾಲೆಯಲ್ಲಿ ಮಲದ ಗುಂಡಿಯನ್ನು ಸ್ವಚ್ಛಗೊಳಿಸುವುದಕ್ಕೆ ಮಕ್ಕಳನ್ನೇ ಬಳಕೆ ಮಾಡಿಕೊಳ್ಳಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ವಿಡಿಯೋ ವೈರಲ್ ಆಗುತ್ತಿದೆ. ಈ ಸಂಬಂಧ ರಾಜ್ಯ ಸರ್ಕಾರ ಸರಿಯಾದ ಕ್ರಮ ಕೈಗೊಂಡಿಲ್ಲವೆಂದು ಕೇಂದ್ರ ಸಚಿವ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಅಧಿಕಾರಿಗಳು ಉತ್ತರ ಕೊಡುವುದಕ್ಕೆ ಎಲ್ಲಾ ದಾಖಲೆ ಇದೆ. ಯಾರು ಮಾಡಿದರು, ಪ್ರಾಂಶುಪಾಲರು ಎಲ್ಲಿದ್ದರು, ಯಾವ ಮಕ್ಕಳನ್ನು ಇಳಿಸಿದರು ಎಂಬುದೆಲ್ಲಾ ಮಾಹಿತಿ ಇದೆ. ಮಕ್ಕಳು ಕೂಡ ಎಲ್ಲಾ ಮಾಹಿತಿ ನೀಡುತ್ತಿದ್ದಾರೆ. ಇದನ್ನು ಯಾರು ಮುಚ್ಚಿಡುವುದಕ್ಕೆ ಆಗುವುದಿಲ್ಲ. ಬರೀ ಸಮಾಜ ಮಾತ್ರವಲ್ಲ, ಇಡೀ ಸರ್ಕಾರವೇ ತಲೆ ತಗ್ಗಿಸುವಂತ ಕೆಲಸ ಇದು.

ಮುಖ್ಯಮಂತ್ರಿಗಳು ಗಂಭೀರವಾಗಿ ಈ ಘಟನೆಯನ್ನು  ತೆಗೆದುಕೊಳ್ಳಬೇಕಾಗಿದೆ. ಕೇಂದ್ರ ಸರ್ಕಾರದಿಂದ ಒಂದು ತಂಡವನ್ನು ಕಳುಹಿಸುತ್ತೇವೆ. ಆ ತಂಡ ನಮಗೂ ಹಾಗೂ ರಾಜ್ಯ ಸರ್ಕಾರಕ್ಕೂ ವರದಿ ನೀಡುತ್ತದೆ ಎಂದು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment