Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ 10 ಸಾವಿರಕ್ಕೂ ಅಧಿಕ BPL ಕಾರ್ಡ್ ರದ್ದು..!

---Advertisement---

ಬೆಂಗಳೂರು: ಈ ಮೊದಲೇ ರಾಜ್ಯ ಸರ್ಕಾರ ನಕಲಿ ಬಿಪಿಎಲ್ ಕಾರ್ಡುದಾರರಿಗೆ ಎಚ್ಚರಿಕೆ ನೀಡಿತ್ತು. ರದ್ದು ಮಾಡುವ ಸೂಚನೆಯನ್ನು ನೀಡಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ 10 ಸಾವಿರಕ್ಕೂ ಹೆಚ್ಚು ಬಿಪಿಎಲ್ ಕಾರ್ಡು ರದ್ದಾಗಿದೆ. ಆದರೆ ವಿಚಿತ್ರ ಎಂದರೆ ಆದಾಯ ತೆರಿಗೆ ಪಾವತಿಸದ, ಜಿಎಸ್ಟಿ ಕಟ್ಟದ, ಬಡತನ ರೇಖೆಗಿಂತ ಕೆಳಗಿರುವವರ ಬಿಪಿಎಲ್ ಕಾರ್ಡುಗಳೇ ರದ್ದಾಗಿವೆ. ಇದು ತಾಂತ್ರಿಕ ಕಾರಣದಿಂದಾಗಿ ರದ್ದಾಗಿವೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಬಿಜೆಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಗರಂ ಆಗಿದ್ದಾರೆ. ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ನಡೆಸುವಾಗ ಆಕ್ರೋಶ ಹೊರ ಹಾಕಿದ ಕೋಟ ಶ್ರೀನಿವಾಸ್ ಪೂಜಾರಿ, ಸಿದ್ದರಾಮಯ್ಯ ಅವರೇ 12 ಲಕ್ಷ ಬಿಪಿಎಲ್ ಕಾರ್ಡು ರದ್ದು ಮಾಡುವುದನ್ನು ತಕ್ಷಣವೇ ತಡೆಯಬೇಕು. ತಡೆಯದೆ ಇದ್ದರೆ ನಿಖಿಲ್ ಕುಮಾರಸ್ವಾಮಿ ಗೆಲ್ತಾರೆ, ವಿಧಾನಸಭೆಯಲ್ಲಿ ಘರ್ಜಿಸುತ್ತಾರೆ. ಬಡವರ ರೇಷನ್ ಕಾರ್ಡ್ ರದ್ದಾದರೆ ಅದನ್ನು ವಾಪಸು ತರುವ ತಾಕತ್ತು ನಿಖಿಲ್ ಕುಮಾರಸ್ವಾಮಿಗೆ ಇದೆ.

ಈ ಸರ್ಕಾರ ಏನು ಬೇಕಾದರೂ ಮಾಡಿಕೊಳ್ಳಲಿ ಆದರೆ ಬಿಪಿಎಲ್ ಕಾರ್ಡ್ ರದ್ದಾದರೆ ನರೇಂದ್ರ ಮೋದಿಯವರು ಕೊಡುತ್ತಿರುವ 5 ಕೆಜಿ ಅಕ್ಕಿ ರದ್ದಾಗುತ್ತದೆ. ಆಯುಷ್ಮಾನ್ ಭಾರತ್ ಯೋಜನೆ ರದ್ದಾಗುತ್ತದೆ‌. ಶಾಲಾ ಮಕ್ಕಳಿಗೆ ಕೊಡುವ ಯೋಜನೆ ರದ್ದಾಗುತ್ತದೆ. ಈ ಸರ್ಕಾರ ಎಂಥಾ ದುಸ್ಥಿತಿಗೆ ಬಂದಿದೆ. ಇವತ್ತು ಸಿದ್ದರಾಮಯ್ಯ ಕೈಯಲ್ಲಿ ಅಧಿಕಾರ ಇಲ್ಲ. ಆಡಳಿತ ನಡೆಸುತ್ತಿರುವುದು ಜಮೀರ್ ಅವರು ಎಂದು ಬಿಪಿಎಲ್ ಕಾರ್ಡ್ ರದ್ದತಿ ಹಾಗೂ ವಕ್ಫ್ ವಿವಾದ ಬಗ್ಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಕ್ರೋಶ ಹೊರ ಹಾಕಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment