Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿರಿಯಾನಿ ತಿಂದು ಯುವತಿ ಸಾವು ಹಿನ್ನೆಲೆ : ಕೇರಳದ 547ಕ್ಕೂ ಹೆಚ್ಚು ಹೊಟೇಲ್ ಗಳು ಬಂದ್..!

Facebook
Twitter
Telegram
WhatsApp

ತಿರುವನಂತಪುರಂ: ನಿನ್ನೆ ಕಾಸರಗೋಡಿನಲ್ಲಿ ಘಟನೆಯೊಂದು ನಡೆದಿತ್ತು. ಇದು ಆನ್ಲೈನ್ ಜಮಾನವಾಗಿರುವ ಕಾತಣ, ಆನ್ಲೈನ್ ನಲ್ಲಿ ಬಿರಿಯಾನಿ ತರಿಸಿಕೊಂಡು ತಿಂದ ಯುವತಿ ಸಾವನ್ನಪ್ಪಿದ್ದಳು. ಇದೀಗ ಆ ಘಟನೆ ಸಂಬಂಧ ಕೇರಳದಲ್ಲಿ ಹೊಟೇಲ್ ಗಳು ಬಂದ್ ಆಗಿವೆ. ಅದು ಒಂದಲ್ಲ ಎರಡಲ್ಲ ಸುಮಾರು 547 ಕ್ಕೂ ಹೆಚ್ಚು ಹೊಟೇಲ್ ಗಳು ಬಂದ್ ಆಗಿವೆ.

 

ವಿಷಪೂರಿತ ಆಹಾರ ಸೇವಿಸಿ ಒಂದೇ ವಾರದಲ್ಲಿ ಇಬ್ಬರು ಸಾವನ್ನಪ್ಪಿರುವ ಹಿನ್ನೆಲೆ, ಆಹಾರ ಸುರಕ್ಷತಾ ಅಧಿಕಾರಿಗಳು, ಹೊಟೇಲ್ ಹಾಗೂ ರೆಸ್ಟೊರೆಂಟ್ ಗಳ ಮೇಲೆ ದಾಳಿ ನಡೆಸಿವೆ. ರೋಮಾನಿಸಾ ರೆಸ್ಟೊರೆಂಟ್ ನ ಬಿರಿಯಾನಿ ತಿಂದಿದ್ದ ಅಂಜುಶ್ರೀ ಪಾರ್ವತಿ ಎಂಬುವವರು ಸಾವನ್ನಪ್ಪಿದ್ದರು. ಜೊತೆಗೆ ಕಿಟ್ಟಾಯಂನ ವಿಷಪೂರಿತ ಆಹಾರ ಸೇವಿಸಿದ್ದ ವೃತ್ತಿಯಲ್ಲಿ ನರ್ಸ್ ಆಗಿದ್ದ ರಶ್ಮಿ ಎನ್ನುವವರು ಕೂಡ ಸಾವನ್ನಪ್ಪಿದ್ದರು. ಈ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಧಿಕಾರಿಗಳ ದಾಳಿ ವೇಳೆ ಸ್ವಚ್ಚತೆ ಇಲ್ಲದೆ ಇರುವುದು ಕಂಡು ಬಂದಿದೆ. ಆಹಾರದಲ್ಲಿ ಜಿರಲೆಗಳು ಪತ್ತೆಯಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ದಾಖಲೆಗಳು ಕೂಡ ಮಾಲೀಕರ ಬಳಿ ಇರಲಿಲ್ಲ. ಹೀಗಾಗಿ ಹೊಟೇಲ್, ರೆಸ್ಟೊರೆಂಟ್ ಗಳನ್ನಹ ಬಂದ್ ಮಾಡಿಸಿದ್ದಾರೆ. ಇನ್ನು ಅಂಜು ಪಾರ್ವತಿ ಸಾವಿಗೆ ಸಂಬಂಧಿಸಿದಂತೆ ಹೊಟೇಲ್ ಮಾಲೀಕರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!