ಕಡೆಗೂ ತಾಯಿ ಚಾಮುಂಡೇಶ್ವರಿ ಭಕ್ತರ ಕ್ಷಮೆ ಕೇಳಿದ ರಕ್ಷಕ್ ಬುಲೆಟ್..!

ಬೆಂಗಳೂರು; ವಿರೋಧ ಹೆಚ್ಚಾಗುತ್ತಲೆ, ರಕ್ಷಕ್ ಮುಖಕ್ಕೆ ಮಸಿ ಬಳಿಯುತ್ತೇವೆಂದೆಲ್ಲಾ ಮಾತುಗಳು ಬಂದ ಮೇಲೆ ಈಗ ಕ್ಷಮೆ ಕೇಳಿದ್ದಾರೆ. ಚಾಮುಂಡೇಶ್ವರಿ ಭಕ್ತರಿಗೆ ರಕ್ಷಕ್ ಬುಲೆಟ್ ಕ್ಷಮೆ ಕೇಳಿದ್ದಾರೆ. ರಿಯಾಲಿಟಿ ಶೋ ಒಂದರಲ್ಲಿ ಹೇಳಿದ್ದ ಡೈಲಾಗ್ ನಿಂದ ರಕ್ಷಕ್ ಬುಲೆಟ್ ವಿರುದ್ಧ ಆಕ್ರೋಶ ಭುಗಿಲೆದ್ದಿತ್ತು. ಕಡೆಗೂ ಚಾಮುಂಡೇಶ್ವರಿ ಭಕ್ತರಿಗೆ ಕ್ಷಮೆಯಾಚಿಸಿದ್ದಾರೆ. ಹಾಗಾದ್ರೆ ಆಗಿದ್ದೇನು ಎಂಬ ಮಾಹಿತಿ ಇಲ್ಲಿದೆ ನೋಡಿ.

ಜೀ ಕನ್ನಡದಲ್ಲಿ ಭರ್ಜರಿ ಬ್ಯಾಚುಲರ್ ಎಂಬ ಶೋ ನಡೀತಾ ಇದೆ. ಅದರಲ್ಲಿ ರಕ್ಷಕ್ ಬುಲೆಟ್ ಹಾಗೂ ರಮೋಲಾ ಜೋಡಿಯಾಗಿದ್ದಾರೆ. ಹುಡುಗಿಯನ್ನ ಇಂಪ್ರೆಸ್ ಮಾಡಬೇಕಾದ ಟಾಸ್ಕ್ ಗಳು ಅಲ್ಲಿರುತ್ತವೆ. ಅಂದು ದರ್ಶನ್ ಅವರ ಬುಲ್ ಬುಲ್ ಸಿನಿಮಾದ ದೃಶ್ಯವನ್ನ ರಿಕ್ರಿಯೇಟ್ ಮಾಡಲಾಗಿತ್ತು. ಆದರೆ ಸಿನಿಮಾದಲ್ಲಿ ಇಲ್ಲದೆ ಇರುವ ಡೈಲಾಗ್ ಅಂದು ಸ್ಟೇಜ್ ಮೇಲೆ ಬಂದಿತ್ತು. ತಾಯಿ ಚಾಮುಂಡೇಶ್ವರಿಯೇ ಬೆಟ್ಟದಿಂದ ಕೆಳಗಿಳಿದು, ಸೀರೆ, ಒಡವೆ ಬಿಚ್ಚಿಟ್ಟು ಜೀನ್ಸ್ ಧರಿಸಿ ಬಂದಂತೆ ಕಾಣಿಸುತ್ತಿದೆ ಎಂಬ ಡೈಲಾಗೆ ಹೊಡೆದಿದ್ದರು‌. ಈ ಡೈಲಾಗ್ ಚಾಮುಂಡೇಶ್ವರಿ ಭಕ್ತರು ಕೆಂಗಣ್ಣಿಗೆ ಗುರಿಯಾಗಿತ್ತು. ಅವರ ಭಾವನೆಗೆ ಧಕ್ಕೆ ತಂದಂತ ಫೀಲ್ ಆಗಿತ್ತು. ಹೀಗಾಗಿ ರಕ್ಷಕ್ ಬುಲೆಟ್ ವಿರುದ್ಧ ಆಕ್ರೋಶ ಭುಗಿಲೆದ್ದಿತ್ತು‌. ಈ ಬೆನ್ನಲ್ಲೇ ಈಗ ರಕ್ಷಕ್ ಕ್ಷಮೆ ಕೇಳಿದ್ದಾರೆ.

‘ನಾನು ನಿಮ್ಮ ರಕ್ಷಕ್. ಒಂದು ರಿಯಾಲಿಟಿ ಶೋನಲ್ಲಿ ಒಂದು ಸಿನಿಮಾದ ಡೈಲಾಗ್ ಹೇಳಿದ್ದೆ. ಅದು ಚರ್ಚೆಗೆ ಗ್ರಾಸವಾಗಿದೆ. ನಮ್ಮ ತಂದೆಯವರಾದ ದಿವಂಗತ ಬುಲರಟ್ ಪ್ರಕಾಶ್, ನನ್ನ ತಾಯಿಯವರು, ನಮ್ಮ ಮನೆಯವರೆಲ್ಲ ದೈವ ಭಕ್ತರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಮಾಡುತ್ತಾ ನಡೆದುಕೊಂಡು ಬಂದಿದ್ದೇವೆ. ಉದ್ದೇಶಪೂರ್ವಕವಾಗಿ ತಾಯಿ ಚಾಮುಂಡೇಶ್ವರಿ ಬಗ್ಗೆ ಹೇಳುವವನಲ್ಲ. ತಾಯೊ ಚಾಮುಂಡೇಶ್ವರಿ ಆಶೀರ್ವಾದದಿಂದ ಬೆಳೆಯುತ್ತಿದ್ದೇನೆ. ಯಾರಿಗಾದರೂ ಬೇಸರವಾಗಿದ್ದಲ್ಲಿ ಕ್ಷಮೆಕೋರುತ್ತೇನೆ ಎಂದಿದ್ದಾರೆ.

suddionenews

Recent Posts

ಚಿತ್ರದುರ್ಗ : ನಗರದ ಮದ್ಯ ಭಾಗದಲ್ಲಿ ಆಕಸ್ಮಿಕ ಅಗ್ನಿ ಅವಘಡ : ಹೊತ್ತಿ ಉರಿದ ಫೋಟೋ ಫ್ರೇಂ ಅಂಗಡಿ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 30 : ನಗರದ ಹೃದಯ ಭಾಗದಲ್ಲಿರುವ ಬಿ.ಡಿ. ರಸ್ತೆಯ ಎಸ್.ಬಿ.ಐ. ಬ್ಯಾಂಕ್ ಸಮೀಪ, ಶಾರ್ಟ್ ಸರ್ಕ್ಯೂಟ್…

8 hours ago

ರನ್ಯಾ ರಾವ್ ಕೇಸ್ ವರದಿ ಸಲ್ಲಿಕೆ ; ಯಾರೆಲ್ಲರ ಹೆಸರು ಬಹಿರಂಗ..?

ಬೆಂಗಳೂರು; ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಜೈಲು ವಾಸ ಅನಿಭವಿಸುತ್ತಿದ್ದಾರೆ. ಇದರ ನಡುವೆ ತನಿಖೆಯು ನಡೆಯುತ್ತಿದ್ದು, ಗೌರವ…

13 hours ago

ಕಳೆದ ಬಾರಿ ಮೋದಿ ಭವಿಷ್ಯ ನುಡಿದಿದ್ದ ಧಾರವಾಡ ಬೊಂಬೆಗಳು ಈ ಬಾರಿ ಹೇಳಿದ್ದೇನು..?

ಧಾರವಾಡ; ಇಲ್ಲಿನ ಹನುಮಕೊಪ್ಪ ಗೊಂಬೆಗಳು ಭವಿಷ್ಯ ನುಡಿದಿವೆ. ಯುಗಾದಿ ಹಬ್ಬದಂದು ಇಲ್ಲಿನ ಗೊಂಬೆಗಳ ಬಳಿ ಭವಿಷ್ಯ ಕೇಳುವ ಪ್ರತೀತಿ‌ ಇದೆ.…

17 hours ago

ಚಿತ್ರದುರ್ಗ : ಪ್ರಭಾಕರ ವರ್ಧನ ನಿಧನ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 30 : ನಗರದ ಬ್ಯಾಂಕ್ ಕಾಲೋನಿ ವಾಸಿ ಹಾಗೂ ದೊಡ್ಡ ಸಿದ್ದವ್ವನಹಳ್ಳಿ ಮೂಲದ ನಿವೈತ್ತ ಶಿಕ್ಷಕ…

17 hours ago

ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬಂದಿದೆ ; ಹಬ್ಬದ ಸಡಗರಕ್ಕೆ ಸುದ್ದಿಒನ್ ಶುಭಾಶಯಗಳು

ಇಂದು ಯುಗಾದಿ ಹಬ್ಬ. ಹಿಂದೂಗಳ ಹೊಸ ವರ್ಷಾರಂಭ. ಮರ ಗಿಡಗಳು ಹಳೆ ಎಲೆಗಳನ್ನ ಉದುರಿಸಿ ಹೊಸ ಚಿಗುರನ್ನ ಹೊತ್ತು, ಸುಂದರವಾಗಿ…

21 hours ago

ಈ ರಾಶಿಯವರಿಗೆ ಮದುವೆ ಸಂಭ್ರಮ, ಆರ್ಥಿಕ ಅಭಿವೃದ್ಧಿ, ಕೆಲಸ ಬದಲಾವಣೆ, ವಿದೇಶ ಯೋಗ, ಆಟದಲ್ಲಿ ಗೆಲವು

ಈ ರಾಶಿಯವರಿಗೆ ಮದುವೆ ಸಂಭ್ರಮ, ಆರ್ಥಿಕ ಅಭಿವೃದ್ಧಿ, ಕೆಲಸ ಬದಲಾವಣೆ, ವಿದೇಶ ಯೋಗ, ಆಟದಲ್ಲಿ ಗೆಲವು, ಭಾನುವಾರದ ರಾಶಿ ಭವಿಷ್ಯ…

24 hours ago