Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅನಾಥ ಮಕ್ಕಳ ತಾಯಿ ಇನ್ನಿಲ್ಲ : ಅನಾರೋಗ್ಯದಿಂದ ಸಿಂಧೂತಾಯಿ‌ ನಿಧನ..!

Facebook
Twitter
Telegram
WhatsApp

 

ನವದೆಹಲಿ: ಸಾವಿರಾರು ಅನಾಥ ಮಕ್ಕಳನ್ನ ಸಾಕುತ್ತಿದ್ದ ಸಿಂಧೂತಾಯಿ ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರನ್ನ ಅನಾಥ ಮಕ್ಕಳ ತಾಯಿ ಎಂದೇ ಕರೆಯಲಾಗುತ್ತಿತ್ತು. ಆದ್ರೆ ಅವರು ಇಂದು ಎಲ್ಲರನ್ನ ಬಿಟ್ಟು ಬಾರದೂರಿಗೆ ಹೋಗಿದ್ದಾರೆ. ಸಾವಿರಾರು ಮಕ್ಕಳನ್ನು ಭಿಕ್ಷೆ ಬೇಡಿ ಸಾಕಿದ್ದರು. ಅದರ ಜೊತೆಗೆ ಆ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿದ್ದರು.

ಡಾ.ಸಿಂಧೂತಾಯಿಗೆ 75 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಡಿ. 24ರಿಂದಲೂ ಆಸ್ಪತದರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ನಿನ್ನೆ ರಾತ್ರಿ ಅವರಿಗೆ ಹೃದಯಾಘಾತವೂ ಸಂಭವಿಸಿ, ಇಂದು ನಿಧನರಾಗಿದ್ದಾರೆ. ಇಂದು ಮಧ್ಯಾಹ್ನವೇ ತೋಸರ್ ಪಾಗಾ ರುದ್ರಭೂಮಿಯಲ್ಲಿ ಇವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಆಶ್ರಮದ ಮೂಲಗಳು ತಿಳಿಸಿವೆ.

ಸಿಂಧೂತಾಯಿ ಮದುವೆಯಾದ ಹೊಸತರಲ್ಲಿ ಸಾಕಷ್ಟು ದೌರ್ಜನ್ಯಕ್ಕೆ ಒಳಗಾಗಿದ್ದವರು. ಮನೆಯಿಂದ ಹೊರದೂಡಲ್ಪಟ್ಟವರು. ಬಳಿಕ ಭಿಕ್ಷಾಟನೆ ಮಾಡಿ ಸಾವಿರಾರು ಅನಾಥ ಮಕ್ಕಳಿಗೆ ತಾಯಿಯಾಗಿದ್ದವರು. ಗಂಡ ವಾಪಾಸ್ ಬರ್ತೇನೆ ಎಂದಾಗ ಗಂಡನಾಗಿ ಬೇಡ, ಮಗುವಾಗಿ ಬಂದರೆ ಸ್ವೀಕರಿಸುತ್ತೇನೆ ಎಂದು ಗಂಡನನ್ನ ಮಗುವಂತೆ ನೋಡಿಕೊಂಡಿದ್ದ ಮಹಾತಾಯಿ ಇವರು. ಇವರ ಸೇವೆ 750 ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. 2021ರಲ್ಲಿ ಕೇಂದ್ರ ಸರ್ಕಾರದಿಂದ ಪದ್ಮಶ್ರೀ ಪ್ರಶಸ್ತಿಯೂ ಸಿಕ್ಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!