Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್.ಎಂ.ಕೃಷ್ಣ ನಿಧನಕ್ಕೆ ಸಂಸದ ಗೋವಿಂದ ಕಾರಜೋಳ ಸಂತಾಪ

---Advertisement---

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 10 : ಎಸ್.ಎಂ.ಕೃಷ್ಣ ಅವರು ಸಾಕಷ್ಟು ನಾಯಕರಿಗೆ ರಾಜಕೀಯದ ಪಾಠ ಹೇಳಿಕೊಟ್ಟಿದ್ದರು. ಬೆಂಗಳೂರನ್ನ ಐಟಿ ಹಬ್ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಹಲವರನ್ನು ರಾಜಕಾರಣದಲ್ಲಿ ಬೆಳೆಯುವಂತೆ ಮಾಡಿದ್ದರು. ಅವರು ನೀಡಿದ ಕೊಡುಗೆ ಅಪಾರ, ಮಾಡಿರುವ ಸೇವೆ ಸಾಗರದಷ್ಟು. ಅವರ ನಿಧನದಿಂದ ರಾಜ್ಯ ರಾಜಕಾರಣ ದುಃಖದಲ್ಲಿದೆ.

ವಯೋ ಸಹಜ ಅನಾರೋಗ್ಯದಿಂದ ನಿಧನರಾದ ಎಸ್.ಎಂ.ಕೃಷ್ಣ ಅವರಿಗೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಬಿಜೆಪಿ ಸಂಸದ ಗೋವಿಂದ ಕಾರಜೋಳ ಅವರು ಕೂಡ ಸಂತಾಪ ಸೂಚಿಸಿದ್ದಾರೆ.

ಎಸ್ ಎಂ ಕೃಷ್ಣ ನಿಧನಕ್ಕೆ ಬಿಜೆಪಿ ಸಂಸದ ಗೋವಿಂದ ಕಾರಜೋಳ ಸಂತಾಪ ಸೂಚಿಸಿದ್ದು, ಕೆಂಗಲ್ ಹನುಮಂತಯ್ಯ ಕಟ್ಟಿಸಿದ ವಿಧಾನಸೌಧ ಏಕೀಕರಣದ ಸಂಕೇತ ಅವರು. ಎಸ್ ಎಂ ಕೃಷ್ಣ ಆಡಳಿತದಲ್ಲಿ ವಿಕಾಸಸೌಧ ನಿರ್ಮಾಣವಾಯ್ತು. ವಿಕಾಸಸೌಧ ಆಧುನೀಕರಣ, ಜಾಗತೀಕರಣದ ಸಂಕೇತ ಆಗಿದೆ. ಬೆಂಗಳೂರು ಸಿಲಿಕಾನ್ ಸಿಟಿಯಾಗಿಸಿದ ಕೀರ್ತಿ, ಗೌರವ ಎಸ್ ಎಂ ಕೃಷ್ಣಗೆ ಸಲ್ಲುತ್ತದೆ.

ಪ್ರಪಂಚದ ಗಣ್ಯ ವ್ಯಕ್ತಿಗಳು ಮೊದಲು ಬೆಂಗಳೂರಿಗೆ ಬರುವ ರೂಡಿ ಮಾಡಿಕೊಂಡಿದ್ದಾರೆ. ಬೆಂಗಳೂರು ಭೇಟಿ ಬಳಿಕ ದೆಹಲಿಗೆ ತೆರಳುವ ಕಾಲ ಎಸ್ ಎಂ ಕೃಷ್ಣರ ಕಾಲದಲ್ಲಿ ಬಂತು. ಸಾರ್ವಜನಿಕ ಜೀವನದಿ ಕೀರ್ತಿ, ಗೌರವ ಹೆಚ್ಚಿಸಿದ ಸುಸಂಸ್ಕೃತ ರಾಜಕಾರಣಿ. ಎಸ್ ಎಂ ಕೃಷ್ಣರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ. ಕುಟುಂಬಕ್ಕಾದ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಸಾಮಾಜಿಕ ಜಾಲತಾಣದ ಮೂಲಕ ಸಂಸದ ಕಾರಜೋಳ ಸಂತಾಪ ಸೂಚಿಸಿದ್ದಾರೆ.

ಇಂದು ಮಂಡ್ಯ ಜಿಲ್ಲೆಯ ಹುಟ್ಟೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಅಂತ್ಯ ಸಂಸ್ಕಾರ ನಡೆಯಲಿದೆ. ಸರ್ಕಾರಿ ಸಕಲ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...