Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯುತ್ ದರ ಏರಿಕೆಗೆ ಸಂಸದೆ ಸುಮಲತಾ ಆಕ್ರೋಶ…!

Facebook
Twitter
Telegram
WhatsApp

 

 

ಬೆಂಗಳೂರು: ಈಗಂತೂ ವಿದ್ಯುತ್ ದರ ಏರಿಕೆಯ ವಿಚಾರವಾಗಿಯೇ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.‌ ಒಂದು ಕಡೆ ಉಚಿತ ಅಂತ ಹೇಳುತ್ತಿರುವಾಗಲೇ ಮತ್ತೊಂದು ಕಡೆ ಏರಿಕೆಯ ಬಿಸಿಯೂ ತಟ್ಟಿದೆ. ಜನಸಾಮಾನ್ಯರ ಬೇಸರದ ನಡುವೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದೆ ಸುಮಲತಾ ಕೂಡ ಆಕ್ರೋಶ ಹೊರ ಹಾಕಿದ್ದಾರೆ.

“ವಿದ್ಯುತ್ ದರ ಏರಿಕೆಯಿಂದಾಗಿ ಮಧ್ಯಮ ವರ್ಗದ ಜನರಿಗೆ, ಕೈಗಾರಿಕೋದ್ಯಮಿಗಳಿಗೆ, ವರ್ತಕರು ಮತ್ತು ಸಣ್ಣ ಸಣ್ಣ ಉದ್ಯಮವನ್ನು ಅವಲಂಬಿಸಿರುವವರ ಮೇಲೆ ಸಾಕಷ್ಟು ಕೆಟ್ಟ ಪರಿಣಾಮ ಬೀರಿದೆ.

 

ವಿದ್ಯುತ್ ದರದ ಹೊಡೆತಕ್ಕೆ ನಲುಗಿರುವ ಉದ್ಯಮಿಗಳು ಮತ್ತು ವರ್ತಕರು ದುಬಾರಿ ಬಿಲ್ ನಿಂದಾಗಿ ಕೈಗಾರಿಕೆಗಳನ್ನೇ ಮುಚ್ಚುವ ಪರಿಸ್ಥಿತಿ ಬರಲಿದೆ ಎಂದು ತಮ್ಮ ನೋವನ್ನು ಹೇಳಿಕೊಂಡಿದ್ದಾರೆ. ಕೈಗಾರಿಕೆಗಳು ಮುಚ್ಚಿದರೆ ಅದರ ಪರಿಣಾಮ ಇನ್ನೂ ಘೋರ.
ಉದ್ಯಮಿಗಳ, ವರ್ತಕರು, ಸಾಮಾನ್ಯ ಜನರೂ ನಡೆಸುತ್ತಿರುವ ಪ್ರತಿಭಟನೆಯು ನ್ಯಾಯಯುತವಾಗಿದೆ. ಸರಕಾರ ಕೂಡಲೇ ಮಧ್ಯ ಪ್ರವೇಶಿಸಿ, ವಿದ್ಯುತ್ ನಿಗಮಕ್ಕೆ ದರ ಇಳಿಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿಯೊಂದಿಗೆ ಒತ್ತಾಯಿಸುವೆ” ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮದಕರಿಪುರದಲ್ಲಿ ಕೊಲ್ಲಾಪುರದಮ್ಮ ಜಾತ್ರೆ | ಕೋಣ ಗುದ್ದಿ ಓರ್ವ ಮೃತ

  ಸುದ್ದಿಒನ್, ಚಿತ್ರದುರ್ಗ, ಮೇ. 01 : ಜಾತ್ರೆಯಲ್ಲಿ ದೇವಿಗೆ ಕೋಣ ಬಲಿ ಕೊಡುವ ವೇಳೆ ಕೊಣ ಗುದ್ದಿ ಕೊಲ್ಲಪ್ಪ (53 ವರ್ಷ) ಎಂಬಾತ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಮದಕರಿ ಪುರ ಗ್ರಾಮದಲ್ಲಿ ಇಂದು

ರಾಹುಲ್ ಚೌದ್ರಿ ನಿಧನ

  ಹಿರಿಯೂರು, ಸುದ್ದಿಒನ್, ಮೇ. 01 : ತಾಲ್ಲೂಕಿನ ಮರಡಿಹಳ್ಳಿ ಗ್ರಾಮದ ರಾಹುಲ್ ಚೌದ್ರಿ (34) ಅವರು ಅನಾರೋಗ್ಯದಿಂದ ಇಂದು(ಬುಧವಾರ) ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು

ಹೆಚ್ಚು ನೀರು ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ : ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಅದಕ್ಕಾಗಿಯೇ ವೈದ್ಯರು ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯಲು ಹೇಳುತ್ತಾರೆ. ಹೆಚ್ಚು ನೀರು ಇರುವ ಹಣ್ಣುಗಳು ಮತ್ತು ಆಹಾರಗಳನ್ನು

error: Content is protected !!