ಬೆಂಗಳೂರು; ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಯುವ ಸಂಸದ ತೇಜಸ್ವಿ ಸೂರ್ಯ ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಅದ್ದೂರಿಯಾಗಿ ಗಾಯಿಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಕೈಹಿಡಿದಿದ್ದಾರೆ. ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಶಾಸ್ತ್ರೋಕ್ತವಾಗಿ ನೆರವೇರಿದೆ. ಈ ಮದುವೆಗೆ ಎರಡು ಕಡೆಯ ಕುಟುಂಬಸ್ಥರು ಹಾಗೂ ರಾಜಕೀಯ ಗಣ್ಯರು, ಸ್ನೇಹಿತರು ಮಾತ್ರ ಭಾಗಿಯಾಗಿದ್ದರು.
ಶಿವಶ್ರೀ ಸ್ಕಂದ ಪ್ರಸಾದ್ ಮೂಲತಃ ಚೆನ್ನೈನವರು. ಗಾಯಕಿಯಾಗಿ ಸಾಕಷ್ಟು ಖ್ಯಾತಿ ಪಡೆದಿದ್ದಾರೆ. ಪ್ರಧಾನಿ ಮೋದಿ ಅವರು ಕೂಡ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರನ್ನ ಹೊಗಳಿದ್ದರು. ಟ್ವಿಟ್ಟರ್ ನಲ್ಲಿ ಹಾಕಿದ್ದರು. ಸಂಸದ ತೇಜಸ್ವಿ ಸೂರ್ಯ ಅವರನ್ನೇ ಮದುವೆ ಆಗಿದ್ದಾರೆ. ನೂತನ ದಂಪತಿಗೆ ಬಂಧು ಬಳಗ, ರಾಜಕಾರಣಿಗಳು ಹಾರೈಸಿದ್ದಾರೆ.
ಮಾರ್ಚ್ 5ರ ಬುಧವಾರ ಸಂಜೆ ವರ ಪೂಜೆ ಕಾರ್ಯಕ್ರಮ ನಡೆದಿದೆ. ಇಂದು ಮಾರ್ಚ್ 6, ಮುಹೂರ್ತ ಕಾರ್ಯಕ್ರಮ ನೆರವೇರಿದ್ದು, ಬೆಳಗ್ಗೆ 9.30 ರಿಂದ 10.15 ರ ನಡುವಿನ ತುಲಾ ಲಗ್ನದಲ್ಲಿ ಮದುವೆ ನಡೆದಿದೆ. ಇಂದು ಗಿರಿನಗರದ ನಿವಾಸದಲ್ಲಿ ವಧುವನ್ನು ಮನೆ ತುಂಬಿಸಿಕೊಳ್ಳುವ ಶಾಸ್ತ್ರ ನೆರವೇರಲಿದೆ.
ಸಂಸದ ತೇಜಸ್ವಿ ಸೂರ್ಯ ಅವರ ಮದುವೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ತುಮಕೂರು ಸಂಸದ ವಿ.ಸೋಮಣ್ಣ, ಕೇಂದ್ರ ಸಚುವೆ ಶೋಭಾ ಕರಂದ್ಲಾಜೆ, ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಭಟ್, ಬಿಜೆಪಿ ಶಾಸಕರು, ಸಂಸದರು, ಹಿಂದೂಪರ ನಾಯಕರು, ಸಂಘ ಪರಿವಾರದ ಮುಖಂಡರು ಭಾಗವಹಿಸಿ, ನವಜೋಡಿಗೆ ಹಾರೈಸಿದ್ದಾರೆ. ಇನ್ನು ಮಾರ್ಚ್ 9ರಂದು ಭಾನುವಾರ ಆರತಕ್ಷತೆ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನೆರವೇರಲಿದೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






