Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಸದ ತೇಜಸ್ವಿ ಸೂರ್ಯ ಮಾಡಿದ ಎಡವಟ್ಟಿಗೆ 2 ಗಂಟೆ ವಿಮಾನ ಲೇಟ್..!

Facebook
Twitter
Telegram
WhatsApp

ಹೊಸದಾಗಿ ಏನನ್ನಾದರೂ ನೋಡಿದರೆ ಅದರ ಬಗ್ಗೆ ಕುತೂಹಲ ಬರುವುದು ಸಹಜ. ಕುತೂಹಲವಿದ್ದಾಗ ಮಾಡಬೇಡಿ ಎಂಬ ಕೆಲಸವನ್ನೇ ಮಾಡುವುದು ಹೆಚ್ಚು. ಇದೀಗ ಸಂಸದ ಸೂರ್ಯ ಅವರು ಅಂತದ್ದೇ ಕೆಲಸವನ್ನು ಮಾಡಿದ್ದಾರೆ ಎನ್ನಲಾಗಿದೆ. ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುವಾಗ ಮಾಡಿದ ಎಡವಟ್ಟಿನಿಂದಾಗಿ ಸುಮಾರು ಎರಡು ಗಂಟೆಗಳ ಕಾಲ ವಿಮಾನ ತಡವಾಗಿರುವ ಘಟನೆ ನಡೆದಿದೆ.

ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುವಾಗ ತುರ್ತು ದ್ವಾರವನ್ನು ತೆಗೆದಿದ್ದು, ಎರಡು ಗಂಟೆಗಳ ಕಾಲ ವಿಮಾನ ತಡವಾಗಿದೆ. ಆದರೆ ಈ ಘಟನೆ ನಡೆದಿರುವುದು ಡಿಸೆಂಬರ್ 10ರಂದು. ಚೆನ್ನೈ ಏರ್ಪೋರ್ಟ್ ನಲ್ಲಿ ನಡೆದ ಘಟನೆ, ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಏರ್ ಇಂಡಿಯಾ ಅಧಿಕೃತ ಮಾಹಿತಿ ಬಿಡುಗಡೆ ಮಾಡಿಲ್ಲ. ಆದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ತನಿಖೆ ನಡೆಸುವುದಕ್ಕೆ ಸೂಚನೆ ನೀಡಿದೆ.

ಘಟನೆ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರು ಹೇಳಿಕೆ ನೀಡಿರುವ ಪ್ರಕಾರ, ವಿಮಾನದ ಒಳಗೆ ಕ್ಯಾಬಿನ್ ಸಿಬ್ಬಂದಿಗಳು ಪ್ರಯಾಣಿಕರಿಗೆ ಮಾಹಿತಿಯನ್ನು ನೀಡುತ್ತಿದ್ದರು. ತುರ್ತು ಪರಿಸ್ಥಿತಿ ಬಂದಾಗ ಅನುಸರಿಸಬೇಕಾದ ಮಾಹಿತಿಯನ್ನು ನೀಡುತ್ತಿದ್ದರು. ಸಂಸದ ತೇಜಸ್ವಿ ಸೂರ್ಯ ಅವರು ತುರ್ತು ದ್ವಾರದ ಬಳಿಯೇ ಕೂತಿದ್ದರು. ಸಿಬ್ಬಂದಿಗಳು ಹೇಳಿದ್ದನ್ನು ಅವರು ಸಹ ಆಲಿಸುತ್ತಿದ್ದರು. ಆದರೆ ಕೆಲವೇ ನಿಮಿಷಗಳ ಬಳಿಕ ಅವರೇ ದ್ವಾರದ ಲಿವರ್ ಎಳೆದಿದ್ದಾರೆ. ತಕ್ಷಣ ತುರ್ತು ನಿರ್ಗಮನದ ದ್ವಾರ ತೆರೆದುಕೊಂಡಿತ್ತು. ಪ್ರಯಾಣಿಕರನ್ನೆಲ್ಲಾ ಬಸ್ಸಿನಲ್ಲಿ ಕುಳಿತುಕೊಳ್ಳಲು ಹೇಳಿದರು. ಎರಡು ಗಂಟೆಗಳ ಬಳಿಕ ವಿಮಾನ ಹೊರಟಿತ್ತು ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!