Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಸಂಸದರ ಭೇಟಿ : ಪ್ರಾಂಶುಪಾಲರಿಗೆ ನೋಟೀಸ್ ಜಾರಿ : ತೀವ್ರ ಖಂಡನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮಾ, 01: ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ಮಕ್ಕಳಿಗೆ ಸಂಸದ ಕಾರಜೋಳ ಶುಭ ಹಾರೈಕೆ ಸಂಭಂಧಪಟ್ಟಂತೆ ಕಾಲೇಜಿನ ಬಳಿ ಸಂಸದ ಕಾರಜೋಳ ಭೇಟಿ ಕೊಟ್ಟಿದ್ದಕ್ಕೆ ಪ್ರಾಂಶುಪಾಲರಿಗೆ ನೋಟೀಸ್ ಜಾರಿ ಮಾಡಿರುವುದನ್ನು ಜಿಲ್ಲಾ ಭಂಜಾರ
(ಲಂಭಾಣಿ) ಸಮಾಜ ತೀವ್ರವಾಗಿ ಖಂಡಿಸಿದ್ದು ನೋಟಿಸ್ ನೀಡಿದ ಪಿಯು ಡಿಡಿಯನ್ನು ಅಮಾನತು ಮಾಡುವಂತೆ ಸರ್ಕಾರವನ್ನು ಅಧ್ಯಕ್ಷರಾದ ಸತೀಶ್ ಕುಮಾರ್ ಆಗ್ರಹಿಸಿದ್ದಾರೆ.


ಚಿತ್ರದುರ್ಗ ನಗರದಲ್ಲಿ ಇರುವ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ನಿನ್ನೆಯಿಂದ ಪ್ರಾರಂಭವಾದ  ಪಿಯು ಪರೀಕ್ಷೆ ಗೆ ಸಂಸದರಾದ ಗೋವಿಂದ ಕಾರಜೋಳರವರು ಶುಭ ಕೋರಲು ಆಗಮಿಸಿದ್ದು ಈ
ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಪ್ರಾಂಶು
ಪಾಲರಿಗೆ ಎನ್.ದೊಡ್ಡಪ್ಪಗೆ ನೋಟೀಸ್ ನೀಡಲಾಗಿದೆ.

ಪರೀಕ್ಷಾ ನಿಯಮಾವಳಿಗಳ ಉಲ್ಲಂಘನೆ ಇಲಾಖೆಗೆ ಮುಜುಗರ ಎಂದು ಕಾರಣ ಕೇಳಿ ನೋಟೀಸ್ ನೀಡಿದ್ದು, ನಿಷೆದಾಜ್ಞೆ ಹಾಗೂ ಅನಧಿಕೃತ ಪ್ರವೇಶ ಹಿನ್ನೆಲೆ ಪ್ರಾಂಶು
ಪಾಲರಿಗೆ ನೋಟೀಸ್ ನೀಡಲಾಗಿದೆ.

ಸಂಸದ ಕಾರಜೋಳ ನಿಷೇದಾಜ್ಞೆ ಉಲ್ಲಂಘಿಸಿ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ್ದಕ್ಕೆ ನೋಟೀಸ್ ನ್ನು ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ  (ಪದವಿ ಪೂರ್ವ) ಇಲಾಖೆ ವತಿಯಿಂದ ನೋಟೀಸ್ ನೀಡಲಾಗಿದೆ.

ಉಪನಿರ್ದೇಶಕರಿಂದ ಕಾಲೇಜು ಪ್ರಾಂಶುಪಾಲ ದೊಡ್ಡಪ್ಪ ಗೆ ನೋಟೀಸ್ ಜಾರಿ ಮಾಡಿದ್ದಕ್ಕೆPU DDಯ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಕಿಡಿಕಾರಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now