Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಕ್ಕಲಿಗ ನಾಯಕರಿಗೆ ಖಡಕ್ ಸೂಚನೆ ನೀಡಿದ ನಿರ್ಮಲಾನಂದ ಶ್ರೀಗಳು : ಏನು ಗೊತ್ತಾ..?

---Advertisement---

ತುಮಕೂರು: ಲೋಕಸಭಾ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯದ ಪಾಲಿಟಿಕ್ಸ್ ಜೋರಾಗಿದೆ. ಅದರಲ್ಲೂ ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮಿಗಳ ಹೆಸರೇ ಹೆಚ್ಚು ಚಾಲ್ತಿಯಲ್ಲಿದೆ. ಹೀಗಾಗಿ ಸ್ವಾಮೀಜಿಗಳು ಈ ವಿಚಾರದಲ್ಲಿ ಮೌನ ಮುರಿದಿದ್ದಾರೆ. ನಿಮ್ಮ ರಾಜಕೀಯಕ್ಕೆ ಮಠ ಹಾಗೂ ನನ್ನ ಹೆಸರನ್ನು ಬಳಸಿಕೊಳ್ಳಬೇಡಿ ಎಂದಿದ್ದಾರೆ.

ನಿಮ್ಮ ವೈಯಕ್ತಿಕ ಆರೋಪಗಳ ನಡುವೆ ಮಠವನ್ನು ಹಾಗೂ ತಮ್ಮ ಹೆಸರನ್ನು ಎಳೆದು ತರಬೇಡಿ. ನಿಮ್ಮ ಮಾತುಗಳಿಗೆ ಮಠದ ಹೆಸರನ್ನು ಏಕೆ ಬಳಕೆ ಮಾಡಿಕೊಳ್ಳುತ್ತೀರಿ. ಮಠಕ್ಕೆ ಅದರದ್ದೇ ಆದ ಘಟನೆ, ಗೌರವ ಇದೆ. ಹೀಗಾಗಿ ಇನ್ನು ಮುಂದೆ ಮಾತನಾಡುವಾಗ ಎಚ್ಚರ ವಹಿಸಿ ಎಂದು ಡಿಕೆ ಶಿವಕುಮಾರ್, ಹೆಚ್ ಡಿ ಕುಮಾರಸ್ವಾಮಿ ಹಾಗೂ ಎನ್ ಚಲುವರಾಯಸ್ವಾಮಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ನಿರ್ಮಲಾನಂದ ಸ್ವಾಮೀಜಿಗಳ ಫೋನ್ ಟ್ಯಾಪ್ ಮಾಡಿಸಿದ್ದರು ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದರು. ಈಗ ಅವರ ಬಳಿಗೆ ಹೋಗಿ ಹೇಗೆ ಆಶೀರ್ವಾದ ಕೇಳುತ್ತಿದ್ದಾರೆ. ಸ್ವಾಮೀಜಿಗಳು ಯಾರ ಪರ ಅಥವಾ ಯಾವ ಪಕ್ಷದ ಪರವೂ ಪ್ರಚಾರ ಮಾಡಲು ಆಗುವುದಿಲ್ಲ. ಚುಂಚನಗಿರಿ ಮಠವು ಒಕ್ಕಲಿಗ ಸಮುದಾಯದ ಮಠವಾಗಿದ್ದರು, ಎಲ್ಲಾ ಜಾತಿಯವರನ್ನು ಒಗ್ಗೂಡಿಸಿಕೊಂಡು ಹೋಗುತ್ತಿರುವ ಮಠವೆಂದು ಹೇಳಿದ್ದರು.

ಇದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದರು. ನಾನು ಫೋನ್ ಟ್ಯಾಪಿಂಗ್ ಮಾಡಿಸಿದ್ದರೆ ನನ್ನ ಸರ್ಕಾರವನ್ನೇ ನಾನೇಕೆ ಬೀಳಿಸಿಕೊಳ್ಳುತ್ತಿದ್ದೆ. ಬೇರೆ ಸಮುದಾಯಗಳಲ್ಲಿ ಎಷ್ಟು ಮಠಗಳಿಲ್ಲ. ನಮ್ಮ ಸಮುದಾಯದಲ್ಲೂ ಅಂಥ ಬೆಳವಣಿಗೆಯಾಗಲಿ ಎಂದು ಇನ್ನೊಬ್ಬರಿಗೂ ಸಹಾಯ ಮಾಡಿದ್ದೇವೆ. ಅದರಲ್ಲಿ ಏನಿದೆ ಎಂದಿದ್ದಾರೆ. ಈ ಎಲ್ಲಾ ಬೆಳವಣಿಗೆಯನ್ನು ಕಂಡ ನಿರ್ಮಲಾನಂದ ಸ್ವಾಮಿಗಳು ಗರಂ ಆಗಿದ್ದು, ಖಡಕ್ ಸೂಚನೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment