Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀಮತಿ ಕೆ.ಮಂಜುಳ ಚಿತ್ರದುರ್ಗ ನಗರಸಭೆಯ ನೂತನ ಉಪಾಧ್ಯಕ್ಷರಾಗಿ ಆಯ್ಕೆ

Facebook
Twitter
Telegram
WhatsApp

 

ಚಿತ್ರದುರ್ಗ(ಜೂ .22) : ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಚಿತ್ರದುರ್ಗ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ 6ನೇ ವಾರ್ಡ್ ನಗರಸಭೆ ಸದಸ್ಯೆ ಕೆ.ಮಂಜುಳಾ ಅವರು ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಅವರು ಚಿತ್ರದುರ್ಗ ನಗರಸಭೆ ಉಪಾಧ್ಯಕ್ಷೆಯಾಗಿ ಕೆ.ಮಂಜುಳಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

ಈ ಹಿಂದೆ ನಗರಸಭೆಯ ಉಪಾಧ್ಯಕ್ಷರಾಗಿದ್ದ ಅನುರಾಧಾ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷ ಸ್ಥಾನವು ಹಿಂದುಳಿದ ವರ್ಗಗಳ “ಎ” ಮೀಸಲಾಗಿದೆ.

ಬುಧವಾರ ಬೆಳಿಗ್ಗೆ 10 ರಿಂದ 11 ರವೆರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ನಗರಸಭೆಯ 6ನೇ ವಾರ್ಡ್ ಸದಸ್ಯೆ ಕೆ.ಮಂಜುಳಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಮಧ್ಯಾಹ್ನ 1ಕ್ಕೆ ಚುನಾವಣಾಧಿಕಾರಿಗಳು ನಾಮಪತ್ರ ಸಲ್ಲಿಕೆಯು ಕ್ರಮಬದ್ಧವಾಗಿದ್ದು, ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಕರ್ನಾಟಕ ಪೌರಸಭೆ ಹಾಗೂ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗಳು-1977 ನಿಯಮಗಳ ಸೆಕ್ಷನ್-1ರ ಅಡಿ ಕೇವಲ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ ಚುನಾವಣೆ ಅವಶ್ಯಕತೆ ಇರುವುದಿಲ್ಲ. ಹಾಗಾಗಿ ಉಪಾಧ್ಯಕ್ಷರ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದರು.

35 ಮಂದಿ ಚುನಾಯಿತ ನಗರಸಭೆ ಸದಸ್ಯರು, ಶಾಸಕರು ಹಾಗೂ ಸಂಸದರು ಸೇರಿ ಒಟ್ಟು 37 ಜನ ಮತದಾನದ ಹಕ್ಕನ್ನು ಹೊಂದಿದ್ದು, ಉಪಾಧ್ಯಕ್ಷರ ಚುನಾವಣಾ ಸಭೆಯಲ್ಲಿ 26 ಮಂದಿ ಸದಸ್ಯರು ಹಾಜರಾಗಿದ್ದರು. 11 ಸದಸ್ಯರು ಗೈರಾಗಿದ್ದರು.

ನಗರಸಭೆ ನೂತನ ಉಪಾಧ್ಯಕ್ಷೆ ಕೆ.ಮಂಜುಳಾ ಮಾತನಾಡಿ, ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವುದಕ್ಕೆ ಸಂತೋಷವಾಗಿದೆ. ಆಯ್ಕೆಯಾಗಲು ಸಹಕರಿಸಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹಾಗೂ ನಗರಸಭೆ ಸದಸ್ಯರಿಗೆ ಧನ್ಯವಾದ ಸಲ್ಲಿಸಿದ ಅವರು, ಚಿತ್ರದುರ್ಗ ನಗರದ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುವುದರ ಮೂಲಕ ನಗರದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು, ವ್ಯವಸ್ಥಾಪಕಿ ಮಂಜುಳಾ, ಕಂದಾಯ ಅಧಿಕಾರಿ ಚಂದ್ರಶೇಖರ್ ಚುನಾವಣಾ ಪ್ರಕ್ರಿಯೆಯ ಕಾರ್ಯನಿರ್ವಹಿಸಿದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

error: Content is protected !!