ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ಉಪಾಧ್ಯಕ್ಷರಾಗಿ ಚಿತ್ರದುರ್ಗದ ಶ್ರೀಮತಿ ಆರ್.ರಜನಿ ಲೇಪಾಕ್ಷ ಅವಿರೋಧ ಆಯ್ಕೆ

 

ಸುದ್ದಿಒನ್, ಬೆಂಗಳೂರು, ಅಕ್ಟೋಬರ್.13 : ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ಉಪಾಧ್ಯಕ್ಷರಾಗಿ ಚಿತ್ರದುರ್ಗದ  ಶ್ರೀಮತಿ ಆರ್.ರಜನಿ ಲೇಪಾಕ್ಷ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಗಾಂಧಿನಗರದಲ್ಲಿರುವ ಕೇಂದ್ರ ಕಛೇರಿಯಲ್ಲಿ ಗುರುವಾರ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಚಿತ್ರದುರ್ಗದಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಆರ್.ರಜನಿ ಲೇಪಾಕ್ಷ, ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಚುನಾವಣಾ ಅಧಿಕಾರಿಯಾಗಿದ್ದ ಹಾಗೂ ಹಿರಿಯ ನಿರೀಕ್ಷಕರು, ಸಹಕಾರ ಸಂಘಗಳ ಉಪನಿಬಂಧಕರ ಕಛೇರಿ, 4 ನೇ ವಲಯ ಬೆಂಗಳೂರು ನಗರ ಜಿಲ್ಲೆಯ ಶಶಿಧರ ಡಿ. ಪ್ಯಾಟಿಸಿಂಗಿ ಅವರು ಘೋಷಿಸಿದರು.

ಇದೇ ವೇಳೆ ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ನೂತನ ರಾಜ್ಯಾಧ್ಯಕ್ಷರಾಗಿ, ಈರಣ್ಣ ಮಾನ್ವಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸೋಮಶೇಖರ್ ಆಯ್ಕೆಯಾಗಿದ್ದಾರೆ.

ಆಯ್ಕೆಗೆ ಸಹಕರಿಸಿದ ಬಿ.ಜಿ.ಗೋವಿಂದಪ್ಪ , ಶಾಸಕರು ಹೊಸದುರ್ಗ ಮತ್ತು ಶ್ರೀ ಕನಕ ಗುರುಪೀಠ ಆಡಳಿತಾಧಿಕಾರಿಗಳು, ಸುಬ್ಬಣ್ಣ, ನಿಕಟಪೂರ್ವ ರಾಜ್ಯಾಧ್ಯಕ್ಷರು, ವೆಂಕಟೇಶ್, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ, ರಾಮಚಂದ್ರಪ್ಪನವರು, ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ಚಿತ್ರದುರ್ಗ ಜಿಲ್ಲೆಯ ಬಿ.ಟಿ.ಜಗದೀಶ್, ನಿಕಟಪೂರ್ವ ಹಿರಿಯ ಉಪಾಧ್ಯಕ್ಷರು, ಹಾಗೂ ಡಾ.ಎಂ.ಹೆಚ್.ಕೃಷ್ಣ ಮೂರ್ತಿ, ಡಾ.ಸಿದ್ದರಾಮಪ್ಪ, ಜಿಲ್ಲೆಯ ಸಮಾಜದ ಬಂಧುಗಳು ಮತ್ತು ರಾಜ್ಯದ ಎಲ್ಲಾ ನಿರ್ದೇಶಕರುಗಳಿಗೆ ಸಮಾಜದ ಬಾಂಧವರಿಗೆ ಶ್ರೀಮತಿ ಆರ್.ರಜನಿ ಲೇಪಾಕ್ಷ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಸಮಾಜದ ಹಿರಿಯರ ಸಹಕಾರದಿಂದ ಮತ್ತು ಎಲ್ಲಾ ನಿರ್ದೇಶಕರ ಮಾರ್ಗದರ್ಶನ ಪಡೆದು ಕಾರ್ಯನಿರ್ವಹಿಸುವುದಾಗಿ ನೂತನವಾಗಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಆರ್.ರಜನಿ ಲೇಪಾಕ್ಷ ಅವರು ತಿಳಿಸಿದ್ದಾರೆ.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

53 minutes ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

2 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

2 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

2 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago