ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಲೋಕಾಯುಕ್ತದಿಂದ ಫೈನಲ್ ರಿಪೋರ್ಟ್ ಸಲ್ಲಿಕೆಯಾಗಿದೆ. ಲೋಕಾಯುಕ್ತ ಎಸ್ಪಿ ಉದೇಶ್ ಅವರು, ಐಜಿಪಿ ಸುಬ್ರಮಣ್ಯೇಶ್ವರ್ ರಾವ್ ಗೆ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ಸುಮಾರು 2,500 ಪುಟಗಳಷ್ಟು ವರದಿ ಸಲ್ಲಿಕೆಯಾಗಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ವರಸಿಯಲ್ಲಿ ಏನಿದೆ ಎಂಬುದನ್ನು ನೋಡೋದಾದ್ರೆ.
* ಸಿಎಂ ಪತ್ನಿ ಹೆಸರಿಗೆ ಹೇಗೆ ಜಮೀನು ವರ್ಗಾವಣೆಯಾಗಿದೆ ಎಂಬುದರ ವಿಚಾರಕ್ಕೆ ಸಂಬಂಧಸಿದಂತೆ ಸುಮಾರು 25ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಿದ್ದು, ಆ ಹೇಳಿಕೆಯನ್ನು ವರದಿಯಲ್ಲಿ ಉಲ್ಲೇಖ ಮಾಡಿದ್ದಾರೆ.
* ದೂರುದಾರ ಸ್ನೇಹಮಯಿ ಕೃಷ್ಣ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ಮಾಡಿದ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.
* ಜೊತೆಗೆ ಸ್ನೇಹಮಯಿ ಕೃಷ್ಣ ಅವರ ಹೇಳಿಕೆಗಳನ್ನು ನಮೂದು ಮಾಡಲಾಗಿದೆ. ಸ್ನೇಹಮಯಿ ಕೃಷ್ಣ ಅವರು ನೀಡಿದ ಹಲವು ದಾಖಲೆಗಳನ್ನು ಸಹ ಅಟ್ಯಾಚ್ ಮಾಡಲಾಗಿದೆ.
* ಕೆಸರೆ ಸರ್ವೆ ನಂಬರ್ 464ರ 3.16 ಎಕರೆ ಜಮೀನಿನ ದಾಖಲೆಗಳು
* ವಿಜಯನಗರದಲ್ಲಿ ಬದಲಿಯಾಗಿ ನೀಡಿದ್ದ 14 ಸೈಟ್ ಗಳ ದಾಖಲೆ
* ಮೂಡಾ ಪ್ರಕರಣದ ನಾಲ್ಕು ಆರೋಪಿಗಳ ಹೇಳಿಕೆ, ಮೂಡಾ ಹಾಲಿ ಅಧಿಕಾರಿಗಳ ಹೇಳಿಕೆಗಳು, ಮೂಡಾ ಮಾಜಿ ಅಧ್ಯಕ್ಷರು, ಕಾರ್ಯದರ್ಶಿಗಳ ಹೇಳಿಕೆಗಳನ್ನು ಇದರಲ್ಲಿ ದಾಖಲಿಸಲಾಗಿದೆ.
ಇನ್ನು ಈ ಕೇಸ್ ನಲ್ಲಿ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ಮೂಡಾ ಅಕ್ರಮದಲ್ಲಿ ಅಧಿಜಾರಿಗಳದ್ದೇ ದೊಡ್ಡ ಲೋಪವಾಗಿದೆ. ಸಿದ್ದರಾಮಯ್ಯ ಅವರದ್ದೂ ಏನೂ ಪಾತ್ರವಿಲ್ಲ. ರಾಜಕೀಯ ಒತ್ತಡಕ್ಕೆ ಮಣಿದು ಸಿಎಂ ಧರ್ಮಪತ್ನಿ ಪಾರ್ವತಿ ಅವರಿಗೆ ಸೈಟ್ ಗಳನ್ನ ನೀಡಿಲ್ಲ. ಅಧಿಕಾರಿಗಳೇ ಮಾಡಿದ ದೊಡ್ಡ ತಪ್ಪು ಇದಾಗಿದೆ ಎಂದು ಲೋಕಾಯುಕ್ತ ಪೊಲೀಸರು ನೀಡಿರುವ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು; ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಫ್ಯಾಮಿಲಿ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸುತ್ತಲೆ ಇರುತ್ತಾರೆ. ಇದೀಗ…
ಬೆಂಗಳೂರು, ಮಾ. 14: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ…
ಭಗವದ್ಗೀತೆಯಿಂದ ಕಲಿಯಬೇಕಾದ ವಿಷಯಗಳು ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಯಶಸ್ಸನ್ನು ಬಯಸುತ್ತಾನೆ. ಅದಕ್ಕಾಗಿ ನಿರಂತರವಾಗಿ ಅಭ್ಯಾಸ ಮಾಡುತ್ತಿದ್ದಾನೆ ಮತ್ತು ಶ್ರಮಿಸುತ್ತಾನೆ.…
ಈ ರಾಶಿಯವರಿಗೆ ಹಣಕಾಸಿನ ತೀವ್ರ ಅಡಚಣೆ, ಈ ರಾಶಿಯವರಿಗೆ ಕೆಲಸದಲ್ಲಿ ಅಭದ್ರತೆ, ಸಂಗಾತಿಯಿಂದ ಮೋಸ ಸಂಭವ, ಶುಕ್ರವಾರದ ರಾಶಿ ಭವಿಷ್ಯ…
ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…