Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೂಡಾ ದಾಖಲೆಗಳನ್ನು ಹೆಲಿಕಾಪ್ಟರ್ ನಲ್ಲಿ ಸಾಗಾಟ ಮಾಡಿದರಾ..? ಬಿಜೆಪಿ-ಜೆಡಿಎಸ್ ನಾಯಕರ ಆರೋಪಗಳೇನು..?

Facebook
Twitter
Telegram
WhatsApp

 

ಬೆಂಗಳೂರು: ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಡಿ ತನಿಖೆ ಚುರುಕುಗೊಂಡಿದೆ. ಇದರ ನಡುವೆ ವಿಧಾನ ಪರಿಷತ್ ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಶಾಕಿಂಗ್ ಹೇಳಿಕೆಯೊಂದನ್ನ ನೀಡಿದ್ದಾರೆ. ಮೂಡಾಗೆ ಸಂಬಂಧಿಸಿದ ದಾಖಲೆಗಳು ಹೆಲಿಕಾಪ್ಟರ್ ನಲ್ಲಿ ಹೋದವಾ ಎಂಬುದನ್ನು ತನಿಖೆ ನಡೆಸಿ, ಭೈರತಿ ಸುರೇಶ್ ಅವರನ್ನು ಬಂಧಿಸಿ ಎಂದಿದ್ದಾರೆ.

ಮೂರು ಬಾರಿ ಮೂಡಾ ಕಡತಗಳನ್ನು ಕೇಳಿದ್ದರು ಅಧಿಕಾರಿಗಳು ಸ್ಪಂದಿಸದಿರುವುದೇ ದಾಳಿಗೆ ಕಾರಣವಾಗಿದೆ. ಹಗರಣದಲ್ಲಿ ಸತ್ಯಾಂಶ ಹೊರಬರುವುದು ಸರ್ಕಾರಕ್ಕೆ ಬೇಕಿಲ್ಲ. ಆ ದಾಖಲೆಗಳೆಲ್ಲಾ ಬೆಂಗಳೂರಿನಲ್ಲಿ ಎಲ್ಲಿವೆ. ಹೆಲಿಕಾಪ್ಟರ್ ನಲ್ಲಿ ಮೂಡಾ ಕಡತಗಳನ್ನು ಹೊತ್ತೊಯ್ದ ಸಚಿವ ಭೈರತಿ ಸುರೇಶ್ ಹಾಗೂ ಸಿಎಂ ಅವರನ್ನು ಇಡಿ ಅಧಿಕಾರಿಗಳು ಬಂಧಿಸಲಿ ಬಳಿಕ ಎಲ್ಲಾ ವಿಚಾರಗಳು ಹೊರಗೆ ಬರಲಿವೆ ಎಂದಿದ್ದಾರೆ.

ಇನ್ನು ಮೂಡಾದಲ್ಲಿ ಬರೋಬ್ಬರಿ 5 ಸಾವಿರ ಕೋಟಿ ಅವ್ಯವಹಾರ ನಡೆದಿದೆ ಎಂದು ಅರಕಲಗೂಡು ಶಾಸಕ ಎ ಮಂಜು ಶಾಕಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಮೂಡಾ ಹಗರಣ ಸರಿಯಾಗಿ ತನಿಖೆಯಾಗಬೇಕು, ಮುಚ್ಚಿಟ್ಟ ವಿಚಾರಗಳೆಲ್ಲಾ ಹೊರಗೆ ಬರಬೇಕು. ಆಗ ಮಾತ್ರ ನ್ಯಾಯ ಸಿಗಲಿದೆ. ಸದ್ಯಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಕೊಟ್ಟಿದ್ದಾರೆ, ಎಫ್ಐಆರ್ ಆಗಿದೆ ರಾಜೀನಾಮೆ ಕೊಡಬೇಕು ಅಲ್ವಾ ಎಂದು ಪ್ರಶ್ನಿಸಿದ್ದಾರೆ. ನಾನು ಲಾಯರ್ ನಂದು ಒಂದು ಕಾನೂನಿದೆ ಎನ್ನುತ್ತಿದ್ದವರು ಸಿದ್ದರಾಮಯ್ಯ ಅವರು. ಸಿದ್ದರಾಮಯ್ಯ ಅವರು ಮೊದಲು ರಾಜೀನಾಮೆ ಕೊಡಲಿ ತಪ್ಪಿಲ್ಲ ಎಂದು ಪದರೂವ್ ಆದರೆ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಎ ಮಂಜು ಆಗ್ರಹಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂಡಾ ದಾಖಲೆಗಳನ್ನು ಹೆಲಿಕಾಪ್ಟರ್ ನಲ್ಲಿ ಸಾಗಾಟ ಮಾಡಿದರಾ..? ಬಿಜೆಪಿ-ಜೆಡಿಎಸ್ ನಾಯಕರ ಆರೋಪಗಳೇನು..?

  ಬೆಂಗಳೂರು: ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಡಿ ತನಿಖೆ ಚುರುಕುಗೊಂಡಿದೆ. ಇದರ ನಡುವೆ ವಿಧಾನ ಪರಿಷತ್ ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಶಾಕಿಂಗ್ ಹೇಳಿಕೆಯೊಂದನ್ನ ನೀಡಿದ್ದಾರೆ. ಮೂಡಾಗೆ ಸಂಬಂಧಿಸಿದ ದಾಖಲೆಗಳು

Soaked Dates: ಬೆಳಿಗ್ಗೆ ನೀರಿನಲ್ಲಿ ನೆನೆಸಿದ ಖರ್ಜೂರ ತಿಂದರೆ ಏನಾಗುತ್ತೆ ಗೊತ್ತಾ?

    ಸುದ್ದಿಒನ್ : ಅನೇಕ ಜನರು ತಮ್ಮ ಸಿಹಿತಿಂಡಿಗಳಲ್ಲಿ ಸಕ್ಕರೆಯ ಬದಲು ಖರ್ಜೂರವನ್ನು ಬಳಸುತ್ತಾರೆ. ಇದು ಸಿಹಿ ರುಚಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಖರ್ಜೂರವನ್ನು ನಿಯಮಿತವಾಗಿ ಸೇವಿಸುವುದರಿಂದ ವಿವಿಧ

ಮಿಥುನ ರಾಶಿಯವರಿಗೆ ಗುರು ದ್ವಾದಶ ಸ್ಥಾನದಲ್ಲಿರುವನು ದಂಪತಿಗಳಿಗೆ ಸಂತಾನ ಫಲ

ಮಿಥುನ ರಾಶಿಯವರಿಗೆ ಗುರು ದ್ವಾದಶ ಸ್ಥಾನದಲ್ಲಿರುವನು ದಂಪತಿಗಳಿಗೆ ಸಂತಾನ ಫಲ, ಕರ್ಕ ರಾಶಿಯವರಿಗೆ ಗುರು ಶುಕ್ರ ಶುಭ ಇದ್ದು ಮದುವೆ ಯೋಗ ಪ್ರಾಪ್ತಿ, ಶನಿವಾರ ರಾಶಿ ಭವಿಷ್ಯ -ಅಕ್ಟೋಬರ್-19,2024 ಸೂರ್ಯೋದಯ: 06:14, ಸೂರ್ಯಾಸ್ತ :

error: Content is protected !!