Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಡಾ ನಿವೇಶನ ಹಂಚಿಕೆ: ರಾಜಕೀಯ ಪ್ರೇರಿತ ಆರೋಪಗಳು; ಮುಖ್ಯಮಂತ್ರಿ ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು, ಜುಲೈ 04: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ.ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ.ರೂ.ಗಳನ್ನು ಕೊಟ್ಟುಬಿಡಲಿ. ನಮ್ಮ ಜಮೀನು ಒತ್ತುವರಿ ಮಾಡಿಕೊಂಡಿರುವುದನ್ನು ಅವರೇ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ನಿವೇಶನಗಳನ್ನು 50:50 ಅನುಪಾತದಲ್ಲಿ ನೀಡಿದ್ದಾರೆ. ಅದಕ್ಕೆ ನಾವು ಒಪ್ಪಿದ್ದೇವೆ. ಇಂಥ ಕಡೆಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ ಎಂದರು.

ಬಿಜೆಪಿ ಅಧಿಕಾರದಲ್ಲಿತ್ತು ನಿವೇಶನ ನೀಡಿದಾಗ 2021 ನೇ ಇಸವಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ನಿವೇಶನಗಳನ್ನು ಹಂಚಿ ಈಗ ಕಾನೂನುಬಾಹಿರ ಎಂದರೆ ಹೇಗೆ? ವಿಜಯನಗರ 3 ನೇ ಅಥವಾ 4 ನೇ ಹಂತದಲ್ಲಿ ಕೊಡಿ ಎಂದು ಕೇಳಲಿಲ್ಲ. ನಮಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಕೊಡಲು ಒಪ್ಪಿದಂತೆ ಕೊಡಿ ಎಂದು ಹೇಳಿದ್ದೇವೆ. ಇದು ರಾಜಕೀಯ ಪ್ರೇರಿತ ಆಪಾದನೆ ಎಂದರು.

ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ ನಿಯಮವಿದೆ ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ನಾವು ಇಂಥ ಕಡೆಯೇ ನಿವೇಶನ ಕೊಡಿ ಎಂದು ಕೇಳಿಲ್ಲ. ಜಾಗ ಕೊಟ್ಟಿರುವುದು ತಪ್ಪು ಎನ್ನುವುದಾದರೆ ನಮಗೆ ಪರಿಹಾರ ಕೊಡಲಿ. ಅಕ್ಟೋಬರ್ 2023 ರಲ್ಲಿ ಸಚಿವರು 50:50 ಅನುಪಾತದಲ್ಲಿ ಜಮೀನು ಕೊಡುವುದನ್ನು ರದ್ದು ಮಾಡಿ ಎಂದು ಬರೆದಿದ್ದಾರೆ. ಬರೆಯದೇ ಹೋದರೂ ಕೂಡ 62 ಕೋಟಿ ರೂ.ಗಳನ್ನು ಕಾನೂನಿನ ಪ್ರಕಾರ ಕೊಟ್ಟುಬಿಡಲಿ. ನಮಗೆ ಕೊಟ್ಟಿರುವ 14 ನಿವೇಶನಗಳ ಬೆಲೆ ಇದಕ್ಕಿಂತಲೂ ಕಡಿಮೆ ಇದೆ. ಒಂದು ಎಕರೆಗೆ 44 ಸಾವಿರ ಚದರ ಅಡಿಯಾದರೆ ನನಗೆ ಕೊಟ್ಟಿರುವುದು 38.264 ಚದರ ಅಡಿ. ಒಂದು ಎಕರೆಗಿಂತ ಕಡಿಮೆಯಾಗಿದೆ. ಪರಿಹಾರವಾಗಿ ಕೊಟ್ಟಿರುವ ಜಮೀನಿನ ಬೆಲೆ ಎಷ್ಟಿದೆ ಎಂದು ನನಗೆ ತಿಳಿದಿಲ್ಲ. ನನಗೆ 62 ಸಾವಿರ ಕೋಟಿ ಕೊಟ್ಟುಬಿಡಲಿ ಎಂದರು.

ನಗರಾಭಿವೃದ್ಧಿ ಸಚಿವರು ನಿವೇಶನ ಹಂಚಿಕೆಗೆ ಸಂಬಂಧಿಸಿದ ಕಡತವನ್ನು ತೆಗೆದುಕೊಂಡು ಬಂದಿದ್ದಾರೆ ಎಂಬ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿ ಕಡತ ತಂದಿಲ್ಲ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Dengue fever : ಡೆಂಗ್ಯೂ ಜ್ವರ ಇದ್ದರೆ, ನೀವು ಯಾವ ಹಣ್ಣುಗಳನ್ನು ತಿನ್ನಬೇಕು ? ಎಳ ನೀರು ಒಳ್ಳೆಯದೇ ?

  ಸುದ್ದಿಒನ್ : ಮಳೆಗಾಲ ರೋಗಗಳ ಕಾಲ. ಮಳೆಗಾಲದಲ್ಲಿ ಡೆಂಗ್ಯೂ ಭೀತಿ ಹೆಚ್ಚು. ಮಳೆಗಾಲದಲ್ಲಿ ಹಲವೆಡೆ ನೀರು ನಿಂತು ಸೊಳ್ಳೆಗಳ ಕಾಟ ಹೆಚ್ಚುತ್ತದೆ. ಈ ಸೊಳ್ಳೆಗಳು ಮಲೇರಿಯಾ, ಚಿಕೂನ್‌ಗುನ್ಯಾ, ಡೆಂಗ್ಯೂ ಮುಂತಾದ ಅಪಾಯಕಾರಿ ರೋಗಗಳನ್ನು

ಈ ರಾಶಿಯ ವ್ಯಾಪಾರಸ್ಥರಿಗೆ ಕೃಷಿಕರಿಗೆ ಉತ್ತಮ ಕಾಲಾವಧಿ, ಆದರೆ ಈ ರಾಶಿಗಳಿಗೆ ಕುಜ ಕೇತು ಗೃಹಗಳಿಂದ ಒಂದು ರೀತಿಯ ಆತಂಕ

ಈ ರಾಶಿಯ ವ್ಯಾಪಾರಸ್ಥರಿಗೆ ಕೃಷಿಕರಿಗೆ ಉತ್ತಮ ಕಾಲಾವಧಿ, ಆದರೆ ಈ ರಾಶಿಗಳಿಗೆ ಕುಜ ಕೇತು ಗೃಹಗಳಿಂದ ಒಂದು ರೀತಿಯ ಆತಂಕ. ಭಾನುವಾರ- ರಾಶಿ ಭವಿಷ್ಯ ಜುಲೈ-7,2024 ಸೂರ್ಯೋದಯ: 05:51, ಸೂರ್ಯಾಸ್ತ : 06:50 ಶಾಲಿವಾಹನ

INDIA Vs ZIMBABWE : 13 ರನ್‌ಗಳ ಅಂತರದಿಂದ ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಸೋಲು

  ಸುದ್ದಿಒನ್ : ಟಿ20 ವಿಶ್ವಕಪ್ ಗೆದ್ದ ಭಾರತ ಆ ಬಳಿಕ ಮೊದಲ ಸರಣಿಯನ್ನು ಸೋಲಿನೊಂದಿಗೆ ಆರಂಭಿಸಿದೆ.  ಜಿಂಬಾಬ್ವೆ ವಿರುದ್ಧ 13 ರನ್‌ಗಳಿಂದ ಸೋತಿತು. ಜಿಂಬಾಬ್ವೆಯ ಹರಾರೆಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್

error: Content is protected !!