Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಹಗರಣ: ಕೋರ್ಟ್ ನಿಂದ ಇಂದು ಆದೇಶ : ದೆಹಲಿಯಲ್ಲಿ ಡಿಕೆಶಿ ಮಹತ್ವದ ಸಭೆ..!

ಡಿಕೆ ಶಿವಕುಮಾರ್
---Advertisement---

 

 

ಬೆಂಗಳೂರು: ಮೂಡಾ ಹಗರಣ ಸಾಕಷ್ಟು ಸದ್ದು ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿಯೇ ಮೈಸೂರು ತನಕ ಪಾದಯಾತ್ರೆ ಕೂಡ ಮಾಡಿದ್ದರು. ಇದೀಗ ಮೂಡಾ ಹಗರಣದ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಖಾಸಗಿ ದೂರಿನ ವಿಚಾರಣೆ ಇಂದು ಕೋರ್ಟ್ ನಲ್ಲಿ ನಡೆಯಲಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಈ ವಿಚಾರಣೆ ನಡೆಯಲಿದೆ. ಕೋರ್ಟ್ ತೀರ್ಮಾನವನ್ನು ಆಧರಿಸಿಯೇ ಸಿಎಂ ಸಿದ್ದರಾಮಯ್ಯ ಅವರು ವುಚಾರಣೆ ಎದುರಿಸಲಿದ್ದಾರೆಯೇ ಇಲ್ಲವೇ ಎಂಬುದು ತಿಳಿಯಲಿದೆ. ಜಿತೆಗೆ ರಾಜ್ಯಪಾಲರು ಕೂಡ ತಮ್ಮ ಮುಂದಿನ ನಡೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

ಇನ್ನು ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ ನಾಯಕರಿಂದ ಬುಲಾವ್ ಬಂದಿದೆ. ಮಲ್ಲಿಕಾರ್ಜುನ ಖರ್ಗೆ ಅವರಿಂದ ಕರೆ ಬಂದಿದ್ದು, ದೆಹಲಿಗೆ ಹೋಗಿರುವ ಡಿಸಿಎಂ ಡಿಕೆ ಶಿವಕುಮಾರ್, ಇಂದು ಎಲ್ಲಾ ರಾಜ್ಯಗಳ ಪಿಸಿಸಿ ಅಧ್ಯಕ್ಷರುಗಳು ಹಾಗುಹ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಈ ಸಭೆಯಲ್ಲಿ ದೇಶಾದ್ಯಂತ ಪಕ್ಷ ಸಂಘಟನೆ ಕುರಿತ, ಎಐಸಿಸಿ ಪುನರ್ ರಚನೆ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆಮ ಹಾಗೇ ರಾಜ್ಯದ ಯಾವ ನಾಯಕರನ್ನು ಎಐಸಿಸಿ ಪರಿಗಣಿಸಬೇಕು ಎಂಬ ಅಭಿಪ್ರಾಯ ಸಂಗ್ರಹ, ಕೇಂದ್ರ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ನಡೆಸುವ ರೂಪು ರೇಷೆಗಳು, ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಿದರೆ ಹೇಗೆ ಎದುರಿಸಬೇಕು, ಜಾತಿ ಜನಗಣತಿ, ಒಳ ಮೀಸಲಾತಿ ಸೇರಿದಂತೆ ಹಲವು ವಿಚಾರಗಳು ಚರ್ಚೆಯಾಗಲಿವೆ. ಈ ಸಭೆಯಲ್ಲಿ ಕೆಪಿಸಿಸಿಯ ನೂತನ ಸಾರಥಿಯ ಬಗ್ಗೆ ಚರ್ಚೆಯಾಗಲಿದೆ. ಈಗಾಗಲೇ ಈಸದ್ವರ್ ಖಂಡ್ರೆ, ಬಿಕೆ ಹರಿಪ್ರಸಾದ್, ಸತೀಶ್ ಜಾರಕಿಹೊಳಿ, ಶರಣು ಪ್ರಕಾಶ್ ಪಾಟೀಲ್ ಹೆಸರು ಮುನ್ನೆಲೆಯಲ್ಲಿ ನಿಂತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment