Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಹಗರಣ : ರಾಜ್ಯಪಾಲರ ಮೊರೆ ಹೋದ ವಿಪಕ್ಷ ನಾಯಕರು..!

---Advertisement---

ಬೆಂಗಳೂರು: ಸದನದಲ್ಲಿ ಮೂಡಾ ಹಗರಣ ಸಾಕಷ್ಟು ಸದ್ದು ಮಾಡಿದೆ. ವಿಪಕ್ಷ ನಾಯಕರು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಸದನದಲ್ಲಿ ಮೂಡಾ ವಿಚಾರವಾಗಿ ಚರ್ಚೆಗೆ ಅವಕಾಶ ಕೇಳಿದ್ದಾರೆ. ಆದರೆ ಅವಕಾಶ ಸಿಗದ ಕಾರಣ ವಿಪಕ್ಷ ನಾಯಕರು ರೊಚ್ಚಿಗೆದ್ದಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದಾರೆ.

ಬಳಿಕ ಘೋಷಣೆಗಳನ್ನು ಕೂಗುತ್ತಲೇ ರಾಜ್ಯಪಾಲರತ್ತ ಹೊರಟಿದ್ದಾರೆ. ಆರ್.ಅಶೋಕ್ ನೇತೃತ್ವದಲ್ಲಿ ರಾಜಭವನಕ್ಕೆ ಪ್ರಯಾಣ ಬೆಳೆಸಿದ್ದರು. ಶಾಸಕರು ಹಾಗೂ ಪರಿಷತ್ ಸದಸ್ಯರು ಜಾಥಾ ನಡೆಸಿದ್ದಾರೆ. ದಲಿತರ ಹಣ ತಿಂದು ತೇಗಿದ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ. ಮೂಡಾ ಹಗರಣದ ರುವಾರಿ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ ಎಂಬ ಘೋಷಣೆ ಕೂಗಿದ್ದಾರೆ.

ಪ್ರತಿಭಟನಾಕಾರರ ಕೈನಲ್ಲಿ ಬೋರ್ಡ್ ಗಳು ಕೂಡ ಕಂಡು ಬಂದಿವೆ. ಆ ಬೋರ್ಡ್ ಗಳಲ್ಲಿ ‘ಅತ್ತ ದಲಿತರ ಹಣವೂ ಲೂಟಿ. ಇತ್ತ ಮೂಡಾ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿರುವ ಸಚಿವ ಭೈರತಿ ಸುರೇಶ್ ಗೆ ಧಿಕ್ಕಾರ’ ಎಂದು ಕೂಗುವ ಬೋರ್ಡ್ ಗಳು ಕಂಡು ಬಂದಿವೆ.

ಈ ಎರಡು ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆಯನ್ನು ನೀಡಿದ್ದಾರೆ. ಮೂಡಾ ಹಗರಣದಲ್ಲಿ ನಮ್ಮ ಕೈವಾಡವಿಲ್ಲ. ಜಮೀನಿನ ಪರಿಹಾರಕ್ಕಾಗಿ ಸೈಟ್ ಗಳನ್ನು ನೀಡಿದ್ದಾರೆವೆಂದು. ಹಾಗೇ ವಾಲ್ಮೀಕಿ ಹಗರಣದಲ್ಲೂ ಸ್ಪಷ್ಟನೆ ನೀಡಿದ್ದು ಈ ಹಗರಣಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ. ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದಿದ್ದಾರೆ. ಆದರೆ ಬಿಜೆಪಿ ನಾಯಕರು ಸದನ ಆರಂಭವಾದಾಗಿನಿಂದಲೂ ಹಗರಣಗಳ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...