Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದಲ್ಲಿ ಸಂಭ್ರಮದ ಮೊಹರಂ : ಪ್ರಮುಖ ಬೀದಿಗಳಲ್ಲಿ ಮೆರವಣಿಗೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 17 : ಜಾತಿ ಧರ್ಮದ ಕಟ್ಟುಪಾಡುಗಳನ್ನು ಮೀರಿ ಹಿಂದೂ-ಮುಸಲ್ಮಾನರು ಕೂಡಿಕೊಂಡು ಭಾವೈಕ್ಯತೆಯ ಸಂಕೇತವಾಗಿ ಆಚರಿಸುವ ಮೊಹರಂ ಮೆರವಣಿಗೆ ನಗರದಲ್ಲಿ ಬುಧವಾರ ನಡೆಯಿತು.

ದುಃಖ, ಬಲಿದಾನ, ಶೋಕಾಚರಣೆಯ ದಿನವನ್ನಾಗಿ ಆಚರಿಸುವ ಮೊಹರಂ ಹಬ್ಬದಲ್ಲಿ ದೇಹಕ್ಕೆ ಗಾಯ ಮಾಡಿಕೊಳ್ಳುವ ಸಂಪ್ರದಾಯ ಕೆಲವೆಡೆ ಈಗಲೂ ಇದೆ. ಅದಕ್ಕಾಗಿಯೇ ಮೊಹರಂ ಹಬ್ಬಕ್ಕೆ ತನ್ನದೆ ಆದ ಮಹತ್ವವಿದೆ. ಒಂಬತ್ತು ದಿನಗಳ ಕಾಲ ಆಚರಿಸುವ ಮೊಹರಂ ಹಬ್ಬದ ಕೊನೆ ಹತ್ತನೆ ದಿನವೇ ಪಂಜ ಮೆರವಣಿಗೆ ಹೊರಡುತ್ತದೆ. ಉಪವಾಸ ಆಚರಿಸುವ ಸಂಕಲ್ಪ ಮಾಡುವುದು ಹಬ್ಬದ ವಿಶೇಷ.

ಚೇಳುಗುಡ್ಡ, ಬುರುಜನಹಟ್ಟಿ, ಮಠದಕುರುಬರಹಟ್ಟಿಯಿಂದ ಮೆರವಣಿಗೆ ಮೂಲಕ ಬಂದ ಪಂಜಗಳು ಸೈಯದ್ ನಾ ಹಜರತ್ ಇಮಾಂ ಹಸ ಸೈಯದಾನಾ, ಹಜರತ್ ಇಮಾಂ ಹುಸೇನ್ ಅಶೋರಖಾನ ಇವರುಗಳ ದರ್ಗಾ ಬಳಿ ತೆರಳಿ ಪೂಜೆ ಸಲ್ಲಿಸಿದವು. ಗಾಂಧಿವೃತ್ತದಿಂದ ಹಿಡಿದು ದೊಡ್ಡಪೇಟೆಯವರೆಗೆ ರಸ್ತೆಯ ಎರಡು ಬದಿಗಳಲ್ಲಿ ಹಿಂದೂ-ಮುಸಲ್ಮಾನರು ಜಮಾಯಿಸಿ ಮೆರವಣಿಗೆ ವೀಕ್ಷಿಸಿದರು. ಮೆರವಣಿಗೆಯುದ್ದಕ್ಕೂ ಅಲ್ಲಲ್ಲಿ ಗುಂಪು ಗುಂಪಾಗಿ ಜಮಾಯಿಸಿದ್ದ ಯುವಕರು ಡೊಳ್ಳು ತಮಟೆಗಳನ್ನು ಬಾರಿಸಿ ಕುಣಿದು ಕುಪ್ಪಳಿಸುತ್ತಿದ್ದುದು ಕಂಡು ಬಂದಿತು.

ಬೃಹದಾಕಾರವಾದ ಹಾರ, ಹೂವು ಮತ್ತು ಸುನೇರಿಗಳಿಂದ ಅಲಂಕರಿಸಿದ್ದ ಪಂಜಗಳ ಮೇಲೆ ಜನ ಮಂಡಕ್ಕಿ ತೂರಿ ಭಕ್ತಿ ಸಮರ್ಪಿಸುತ್ತಿದ್ದರೆ ಇನ್ನು ಕೆಲವರು ಕೆಳಗೆ ಬಿದ್ದ ಮಂಡಕ್ಕಿಗಳನ್ನು ಆಯ್ದುಕೊಳ್ಳುತ್ತಿದ್ದುದು ಮೊಹರಂ ಹಬ್ಬದ ವಿಶೇಷವಾಗಿತ್ತು. ದರ್ಗಾಕ್ಕೆ ತೆರಳಿದ ಭಕ್ತರ ತಲೆಯ ಮೇಲೆ ನವಿಲುಗರಿಗಳನ್ನು ಮುಟ್ಟಿಸಲಾಗುತ್ತಿತ್ತು.
ದೊಡ್ಡಪೇಟೆ ಹಾಗೂ ಗಾಂಧಿವೃತ್ತದಲ್ಲಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment