Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

26/11 ದಾಳಿಯಂತೆ ಮತ್ತೊಂದು ದಾಳಿ ಮಾಡುವುದಾಗಿ ಅಪರಿಚಿತ ವ್ಯಕ್ತಿಯ ಬೆದರಿಕೆ..!

---Advertisement---

ಮುಂಬೈ ದಾಳಿಯನ್ನ ಇಂದಿಗೂ ಯಾರು ಮರೆಯುವುದಕ್ಕೆ ಸಾಧ್ಯವಿಲ್ಲದ ಕರಾಳ ದಿನವದು. 2008ರ ನವೆಂಬರ್ 26ರಂದು ನಡೆದ ಮುಂಬೈ ದಾಳಿಯಲ್ಲಿ 166 ಜನ ಸಾವಿಗೆ ಈಡಾಗಿದ್ದರು. ಈಗ ಮುಂಬೈ ಪೊಲೀಸರಿಗೆ ಅಪರಿಚಿತ ವ್ಯಕ್ತಿಯೊಬ್ಬ ಅದೇ ಮಾದರಿಯ ದಾಳಿ ಮಾಡುವುದಾಗಿ ಬೆದರಿಕೆವೊಡ್ಡಿದ್ದಾನೆ.

ಟ್ರಾಫಿಕ್ ಕಂಟ್ರೋಲ್ ರೂಮ್ ಗೆ ಕರೆ ಮಾಡಿ, ಉರ್ದುವಿನಲ್ಲಿ ಮಾತನಾಡಿದ ವ್ಯಕ್ತಿ, ಸೀಮಾ ಹೈದರ್ ಹಿಂತಿರಿಗದೆ ಹೋದಲ್ಲಿ ಭಾರತ ನಾಶವಾಗುತ್ತದೆ ಎಂದು ಎಚ್ಚರಿಸಿದ್ದಾನೆ. ಜೊತೆಗೆ ದಾಳಿ ನಡೆದರೆ ಅದಕ್ಕೆ ಉತ್ತರ ಪ್ರದೇಶ ಸರ್ಕಾರವೇ ಹೊಣೆಯಾಗಲಿದೆ ಎಂದಿದ್ದಾನೆ.

ಮುಂಬೈ ಪೊಲೀಸ್  ಟ್ರಾಫಿಕ್ ಕಂಟ್ರೋಲ್ ರೂಂಗೆ ಜುಲೈ 12 ರಂದು ಈ ಕರೆ ಬಂದಿದೆ. ಮುಂಬೈ ಪೊಲೀಸರು ಮತ್ತು ಕ್ರೈಂ ಬ್ರಾಂಚ್ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆದರೆ, ಹಿರಿಯ ಅಧಿಕಾರಿಯೊಬ್ಬರು ಇದೊಂದು ಹುಸಿ ಕರೆ. ಯಾರು ಮಾಡಿದ್ದಾರೆಂಬುದನ್ನು ಪತ್ತೆ ಹಚ್ಚುತ್ತಿದ್ದೇವೆ ಎಂದಿದ್ದಾರೆ.

ಇನ್ನು ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ ಸೂಕ್ತ ದಾಖಲೆಗಳಿಲ್ಲದೆ ಗ್ರೇಟರ್ ನೋಯ್ಡಾದಲ್ಲಿ ತಂಗಿದ್ದಕ್ಕಾಗಿ ಈ ತಿಂಗಳ ಆರಂಭದಲ್ಲಿ ಆಕೆಯನ್ನು ಬಂಧಿಸಲಾಗಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...