Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜಕಾಲುವೆಯಲ್ಲಿ ಹೂಳೆತ್ತಿಸಿ ಸಾರ್ವಜನಿಕರ ಮನವಿಗೆ ಸ್ಪಂದಿಸಿದ ನಗರಸಭೆ ಪೌರಾಯುಕ್ತರು

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 22 : ಹೊಳಲ್ಕೆರೆ ರಸ್ತೆ ಕನಕ ವೃತ್ತದ ಹತ್ತಿರವಿರುವ ಹಳ್ಳದ ಏರಿಯಾದಲ್ಲಿ ಒತ್ತುವರಿಯಾಗಿರುವ ರಾಜಕಾಲುವೆಯಲ್ಲಿ ತುಂಬಿಕೊಂಡಿದ್ದ ಮಣ್ಣನ್ನು ಜೆ.ಸಿ.ಬಿ. ಮೂಲಕ ತೆಗೆಸಿ ಮಳೆ ನೀರು ಸರಾಗವಾಗಿ ಹರಿಯಲು ಅನುವು ಮಾಡಲಾಯಿತು.

ಅರಣ್ಯ ಇಲಾಖೆಯ ನಿವೃತ್ತ ನೌಕರರೊಬ್ಬರು ರಾಜ ಕಾಲುವೆಯನ್ನು ಒತ್ತುವರಿ ಮಾಡಿಕೊಂಡಿರುವುದರಿಂದ ಮಳೆ ಬಂದಾಗ ಸುಮಾರು ಐವತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗುತ್ತದೆ. ಸಾಕಷ್ಟು ಬಾರಿ ಹಳ್ಳದ ಏರಿಯಾ ನಿವಾಸಿಗಳು ರಾಜ ಕಾಲುವೆ ಒತ್ತುವರಿ ಮಾಡಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿಕ್ಕೂ ಮನವಿ ನೀಡಿದ್ದಾರೆ. ಇದುವರೆವಿಗೂ ಯಾವುದೇ ಕ್ರಮ ಕೈಗೊಂಡಿಲ್ಲ.

2022-23 ನೇ ಸಾಲಿನಲ್ಲಿಯೇ ಹಳ್ಳದ ಏರಿಯಾದಲ್ಲಿ ವಾಸಿಸುತ್ತಿರುವವರಿಗೆ ಹಕ್ಕುಪತ್ರಗಳನ್ನು ನೀಡಲಾಗಿದೆ. ರಾಜಕಾಲುವೆ ಒತ್ತುವರಿಯಾಗಿರುವುದನ್ನು ಪ್ರಶ್ನಿಸಿದರೆ ಬೆದರಿಕೆ ಹಾಕುತ್ತಾರೆ ಎನ್ನುವುದು ಅಲ್ಲಿನ ನಿವಾಸಿಗಳ ಅಳಲು.

ನಗರಸಭೆ ಪೌರಾಯುಕ್ತರ ಭೇಟಿ : ನಗರಸಭೆ ಪೌರಾಯುಕ್ತರಾದ ಶ್ರೀಮತಿ ರೇಣುಕಾರವರು ಹಳ್ಳದ ಏರಿಯಾದಲ್ಲಿ ಮುಂದೆ ನಿಂತು ಜೆಸಿಬಿ ಸಹಾಯದಿಂದ ರಾಜ ಕಾಲುವೆಯಲ್ಲಿನ ಮಣ್ಣನ್ನು ತೆಗೆಸಿದರು.

ಚಂದ್ರವಳ್ಳಿ ಕೆರೆ ತುಂಬಿ ಕೋಡಿ ಬಿದ್ದರೆ ನೀರು ನುಗ್ಗಿ ಅನಾಹುತವಾಗುವುದನ್ನು ತಪ್ಪಿಸುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ರಾಜ ಕಾಲುವೆ ಒತ್ತುವರಿಯಾಗಿರುವುದರ ಕುರಿತು ಸರ್ವೆ ನಡೆಸುವಂತೆ ಸರ್ವೆ ಇಲಾಖೆಗೆ ಕೇಳಿಕೊಂಡಿದ್ದೇವೆ. ಇದುವರೆವಿಗೂ ಅವರಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹಾಗಾಗಿ ರಾಜಕಾಲುವೆಯಲ್ಲಿನ ಮಣ್ಣನ್ನು ತೆಗೆಸುತ್ತಿದ್ದೇವೆ. ಮುಂದೆ ಸರ್ವೆ ಆದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರಿಸರ ಇಂಜಿನಿಯರ್ ಜಾಫರ್, ಬಾಳೆಕಾಯಿ ಶ್ರೀನಿವಾಸ್, ಸುಭಾನುಲ್ಲ ಇನ್ನು ಮುಂತಾದವರು ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Petrol, Diesel Prices: ವಾಹನ ಸವಾರರಿಗೆ ಶಾಕ್ :  ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆ

ಸುದ್ದಿಒನ್, ಬೆಂಗಳೂರು : ಕಳೆದ ಕೆಲವು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ. ಈ ಹಿಂದೆ 100 ರೂಪಾಯಿಗಿಂತಲೂ ಹೆಚ್ಚಾಗಿದ್ದ ಪೆಟ್ರೋಲ್ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಚುನಾವಣೆಗೂ ಮೊದಲು ನಿರ್ಧಾರ ಕೈಗೊಂಡಿತ್ತು.

ಈ ರಾಶಿಯವರಿಗೆ ಏನು ಮುಟ್ಟಿದರು ಚಿನ್ನ, ಧನ ಲಾಭದ ಜೊತೆಗೆ ಸಾಲದಿಂದ ಮುಕ್ತಿ

ಈ ರಾಶಿಯವರಿಗೆ ಏನು ಮುಟ್ಟಿದರು ಚಿನ್ನ, ಧನ ಲಾಭದ ಜೊತೆಗೆ ಸಾಲದಿಂದ ಮುಕ್ತಿ, ಭಾನುವಾರ ರಾಶಿ ಭವಿಷ್ಯ -ಜೂನ್-16,2024 ಸೂರ್ಯೋದಯ: 05:46, ಸೂರ್ಯಾಸ್ತ : 06:47 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ

ನಿಮ್ಮ ಕಣ್ಣಿನಲ್ಲಿ ಚಿಕ್ಕ ವ್ಯತ್ಯಾಸ ಕಂಡುಬಂದರೂ ನಿರ್ಲಕ್ಷಿಸಬೇಡಿ : ಕ್ಯಾನ್ಸರ್ ರೋಗಲಕ್ಷಣಗಳಿರಬಹುದು…!

ಸುದ್ದಿಒನ್ : ಭಾರತ ಈಗ ಎದುರಿಸುತ್ತಿರುವ ದೊಡ್ಡ ಆರೋಗ್ಯ ಸಮಸ್ಯೆಯೆಂದರೆ ಅದು ಕ್ಯಾನ್ಸರ್. ಈ ಸಾಂಕ್ರಾಮಿಕ ರೋಗವು ವಯಸ್ಸಿನ ಭೇದವಿಲ್ಲದೆ ಜನರ ಮೇಲೆ ದಾಳಿ ಮಾಡುತ್ತಿದೆ. ಈಗ ಆಧುನಿಕ ಕಾಲದಲ್ಲಿಯೂ ಔಷಧ ಲಭ್ಯವಿದ್ದರೂ ಸಕಾಲದಲ್ಲಿ

error: Content is protected !!