Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಸ್ತೆ ಕಾಮಗಾರಿ : ಅಧಿಕಾರಿಗಳ ಮೇಲೆ ಕೆರಳಿದ ನಗರಸಭೆ ಸದಸ್ಯರು

---Advertisement---

 

ಹಿರಿಯೂರು: ಶಾಸಕರ ವಿಶೇಷ ಅನುದಾನದ ಕೆಲಸಗಳನ್ನು ನಗರಸಭೆ ಅಧ್ಯಕ್ಷರ, ಸದಸ್ಯರ ಗಮನಕ್ಕೆ ತರದೇ ಕೆಲಸ ಮಾಡಲಾಗುತ್ತಿದೆ ಎಂದು ನಗರಸಭೆಯ ಕೆಲ ಸದಸ್ಯರು ಆರೋಪಿಸಿದರು.

ನಗರದ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ನಗರಸಭೆ ಅಧ್ಯಕ್ಷ ಅಜಯ್ ಕುಮಾರ್ ನೇತೃತ್ವದಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ನಗರಸಭೆ
ಸದಸ್ಯ ಜಿಎಸ್ ತಿಪ್ಪೇಸ್ವಾಮಿ ಮಾತನಾಡಿ ನಗರದ ಟಿಬಿ ವೃತ್ತದಿಂದ ಗಾಂಧಿ ಸರ್ಕಲ್ ವರೆಗೆ ಹಾಗೂ ಹುಳಿಯಾರು ರಸ್ತೆ ಅಗಲೀಕರಣ ಕಾಮಗಾರಿ ವಿಳಂಬವಾಗಿದ್ದು ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ನಗರಸಭೆ ವ್ಯಾಪ್ತಿಯಲ್ಲಿನ ಕೆಲಸಗಳನ್ನು ಬೇಗ ಪೂರ್ಣಗೊಳಿಸಿ ಎಂದು ಅಧಿಕಾರಿಗಳ ಬಳಿ ಭಿಕ್ಷೆ ಬೇಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಅಗಲೀಕರಣ ವಿಷಯದಲ್ಲಿ ಅಧಿಕಾರಿಗಳು ಸದಸ್ಯರು ಹಾಗೂ ಸಾರ್ವಜನಿಕರ ಪರವಾಗಿ ನಿಲ್ಲದೆ ಕಾಮಗಾರಿ ಕಂಟ್ರಾಕ್ಟರ್ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೌರಾಯುಕ್ತ ಎ. ವಾಸೀಂ ಅವರು ಸದಸ್ಯರ ಮಾತಿಗೆ ಉತ್ತರಿಸಿ ಮಳೆ ಬಂದ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗುತ್ತಿದೆ. ಸಂಬಂಧಪಟ್ಟವರಿಗೆ ಸೂಚನೆ ನೀಡಿ ಕಾಮಗಾರಿಗೆ ವೇಗ ನೀಡಲಾಗುವುದು ಎಂದರು.

ವಿಶೇಷ ಸಾಮಾನ್ಯ ಸಭೆಯಲ್ಲಿ 2025-26 ನೇ ಸಾಲಿಗೆ ಎಸ್ ಎಫ್ ಸಿ ಮುಕ್ತ ನಿಧಿ ಯೋಜನೆಯಲ್ಲಿ ಹಂಚಿಕೆಯಾಗಿರುವ ಅನುದಾನಕ್ಕೆ ದಿನಾಂಕ 25-04-2025ರೊಳಗಾಗಿ ಕ್ರಿಯಾಯೋಜನೆ ಸಿದ್ಧಪಡಿಸಿ ಸಲ್ಲಿಸಲು ಸೂಚಿಸಿರುವಂತೆ ನಗರಸಭೆಗೆ ಹಂಚಿಕೆಯಾಗಿರುವ ಅನುದಾನ 17 ಲಕ್ಷಗಳಿಗೆ ಬಂಡವಾಳ ಆಸ್ತಿಗಳ ಅವತರಣೆ ಶೇ 24.10 ಯೋಜನೆಯಲ್ಲಿ ಎಸ್.ಸಿಎಸ್ ಪಿ ಯೋಜನೆಗೆ 27ಲಕ್ಷ ರೂಗಳು ಹಾಗೂ ಟಿಎಸ್ ಪಿ ಯೋಜನೆಗೆ 11 ಲಕ್ಷ ರೂಗಳಿಗೆ ಕ್ರಿಯಾ ಯೋಜನೆ ತಯಾರಿಸುವ ಬಗ್ಗೆ ವಿಷಯ ಮಂಡಿಸಲಾಯಿತು. 2025-2026 ನೇ ಸಾಲಿಗೆ ಎಸ್.ಎಫ್.ಸಿ ಕುಡಿಯುವ ನೀರು ಯೋಜನೆಯಲ್ಲಿ ಹಂಚಿಕೆಯಾಗಿರುವ ಅನುದಾನಕ್ಕೆ 25-04-2025 ರೊಳಗೆ ಹಂಚಿಕೆಯಾಗಿರುವ 9.32‌ ಲಕ್ಪ ಅನುದಾನಕ್ಕೆ ಕ್ರಿಯಾ ಯೋಜನೆ ಸಿದ್ದಪಡಿಸುವುದು. 2025 -26 ನೇ ಸಾಲಿನ 15 ನೇ ಹಣಕಾಸು ಯೋಜನೆಯಲ್ಲಿ ಹಂಚಿಕೆಯಾಗಿರುವ ಅನುದಾನಕ್ಕೆ 25-04-25 ರೊಳಗೆ ಯೋಜನೆ ಸಿದ್ಧಪಡಿಸಿ 351ಲಕ್ಷಗಳಿಗೆ ಕ್ರಿಯಾ ಯೋಜನೆ ತಯಾರಿಸುವ ಬಗ್ಗೆ ವಿಷಯ ಮಂಡಿಸಲಾಯಿತು.
2025 -26 ನೇ ಸಾಲಿನ ಅವಧಿಗೆ ನಗರಸಭೆ ಸಾಮಾನ್ಯ ನಿಧಿಯಲ್ಲಿ ಶೇ 24.10 ರಷ್ಟು ಯೋಜನೆಗಳಿಗೆ 30 ಲಕ್ಷ ರೂಗಳು, ಶೇ 7.25 ರ ಯೋಜನೆಗಳಿಗೆ 9 ಲಕ್ಷ ರೂ ಹಾಗೂ ಶೇ 5 ರ ಯೋಜನೆಗಳಿಗೆ 7 ಲಕ್ಷ ರೂಗಳನ್ನು ಕಾಯ್ದಿರಿಸಿದ್ದು ಕಾಯ್ದಿರಿಸಲಾದ ಮೊತ್ತಕ್ಕೆ ಕ್ರಿಯಾ ಯೋಜನೆಗಳ ಕಾರ್ಯಕ್ರಮಗಳನ್ನು ರೂಪಿಸಲು ಚರ್ಚಿಸಲಾಯಿತು.
ನಗರಸಭೆ ವ್ಯಾಪ್ತಿಯಲ್ಲಿನ ಕಟ್ಟಡ ನೆಲಸಮಗೊಳಿಸಲು ಅನುಮತಿ ನೀಡುವ ಸಂದರ್ಭದಲ್ಲಿ ವಾಸೋಪಯೋಗದ ಕಟ್ಟಡಗಳಿಗೆ 1500,ವಾಣಿಜ್ಯ ಉದ್ದೇಶದ ಕಟ್ಟಡಗಳಿಗೆ 3000 ಶುಲ್ಕ ಪಾವತಿಸಿಕೊಳ್ಳುತ್ತಿದ್ದು ಅಳತೆ ಆಧಾರದ ಮೇಲೆ ಶುಲ್ಕ ನಿಗದಿಪಡಿಸಿ ಪಾವತಿಸಿಕೊಳ್ಳುವ ಬಗೆಗಿನ ವಿಷಯಗಳನ್ನು ಸಭೆಯಲ್ಲಿ ಮಂಡಿಸಲಾಯಿತು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಅಜಯ್ ಕುಮಾರ್,ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಸದಸ್ಯರಾದ ಈ. ಮಂಜುನಾಥ್, ಗುಂಡೇಶ್ ಕುಮಾರ್, ಎಂಡಿ ಸಣ್ಣಪ್ಪ,ವಿಠ್ಠಲ ಪಾಂಡುರಂಗ, ಜಗದೀಶ್,ಮಹೇಶ್ ಪಲ್ಲವ, ಬಾಲಕೃಷ್ಣ, ವೈಪಿಡಿ ದಾದಾಪೀರ್, ಚಿತ್ರ ಜಿತ್ ಯಾದವ್, ಶಿವರಂಜನಿ,ಶಂಷುನ್ನಿಸಾ,ವಿ ಶಿವಕುಮಾರ್, ಗಿರೀಶ್ ಸೇರಿದಂತೆ ಹಲವು ಸದಸ್ಯರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment