Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಗರಸಭೆ ನಿರ್ಲಕ್ಷ್ಯ : ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿಯಿಂದ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 19 : ವಸತಿಯಿಲ್ಲದವರ ಸರ್ವೆ ನಡೆಸಿ ವರದಿ ನೀಡುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆದೇಶಿಸಿ ಒಂದು ವರ್ಷಗಳಾಗಿದ್ದರೂ ನಗರಸಭೆ ಉದಾಸೀನ ಮಾಡುತ್ತಿರುವುದನ್ನು ವಿರೋಧಿಸಿ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿಯಿಂದ ಮಂಗಳವಾರ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.

 

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಆಗಮಿಸಿದ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ನಗರಸಭೆ ಎದುರು ಧಿಕ್ಕಾರಗಳನ್ನು ಕೂಗಿದರು.
ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಹಾಗೂ ಸಿ.ಪಿ.ಐ. ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಕಳೆದ ವರ್ಷ ಮಾರ್ಚ್ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ವಸತಿ ರಹಿತರಿಗೆ ಮನೆಗಳನ್ನು ಕಟ್ಟಿಸಿಕೊಡುವಂತೆ ಒತ್ತಾಯಿಸಿದ್ದೆವು. ಆಗ ಸರ್ವೆ ನಡೆಸಿ ವರದಿ ಕೊಡುವಂತೆ ಸೂಚಿಸಿದ್ದರು. ಇಲ್ಲಿಯವರೆಗೂ ನಗರಸಭೆಯವರು ಗಮನ ಹರಿಸುತ್ತಿಲ್ಲ. ನಗರಸಭೆಗೆ ಅರ್ಜಿಗಳನ್ನು ಸಲ್ಲಿಸಿ ಒಂದು ವರ್ಷವಾಗಿದೆ. ಅಪ್‍ಲೋಡ್ ಮಾಡಿ ಓ.ಟಿ.ಪಿ. ಕೊಡುವತನಕ ಜಾಗ ಬಿಟ್ಟು ಕದಲುವುದಿಲ್ಲವೆಂದು ಪಟ್ಟು ಹಿಡಿದರು.

 

ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸರ್ವರಿಗೂ ಸಮಪಾಲು, ಸಮಬಾಳು ಎಂದು ಹೇಳಿದ್ದಾರೆ. ಜನರ ತೆರಿಗೆಯಲ್ಲಿ ನಗರಸಭೆ ನಡೆಯುತ್ತಿದೆ. ಕೂಡಲೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿವೇಶನ ಮತ್ತು ವಸತಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ರಾಜೀವ್‍ಗಾಂಧಿ ವಸತಿ ನಿಗಮ ನಿಯಮಿತದ ನಿವೇಶನ ಮತ್ತು ವಸತಿ ರಹಿತರ ಸಮೀಕ್ಷಾ ಪಟ್ಟಿಗೆ ಸೇರ್ಪಡೆ ಮಾಡಬೇಕು. ನಿವೇಶನಕ್ಕೆ ಅಗತ್ಯ ಸರ್ಕಾರಿ ಭೂಮಿಯನ್ನು ಪ್ರತಿ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಗುರುತಿಸಬೇಕು.

 

ಈಗಾಗಲೆ ಮಂಜೂರಾಗಿರುವ ವಸತಿ ಯೋಜನೆಗಳಿಗೆ ಸರ್ಕಾರ ಅನುದಾನ ಮಂಜೂರು ಮಾಡಬೇಕು. ಹಾಲಿ ಇರುವ ನಿವೇಶನದ ವಿಸ್ತೀರ್ಣವನ್ನು ಹೆಚ್ಚಿಸಿ ಅಂಗಳ ಮತ್ತು ಹಿತ್ತಲು ಇರುವಂತೆ ಕನಿಷ್ಟ ಒಂದು ಸಾವಿರ ಚದರ ಅಡಿ ನಿವೇಶನ ನೀಡಬೇಕು. ವಸತಿ ಯೋಜನೆಯ ಫಲಾನುಭವಿಗಳಿಗೆ ಸರ್ಕಾರ ಒದಗಿಸುವ ಸಹಾಯಧನ ಮೊತ್ತವನ್ನು ಕನಿಷ್ಟ ಐದು ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಜಿ.ಸಿ.ಸುರೇಶ್‍ಬಾಬು ಆಗ್ರಹಿಸಿದರು.

 

ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಕಾಂ.ಸಾ.ತಿ.ಸುಂದರೇಶ್, ರಾಜ್ಯ ಉಪಾಧ್ಯಕ್ಷ ಕಾಂ.ಟಿ.ಆರ್.ಉಮಾಪತಿ, ತಾಲ್ಲೂಕು ಅಧ್ಯಕ್ಷ ಡಾ.ಬಿ.ಹೆಚ್. ಹನುಮಂತಪ್ಪ, ಕಾಂ.ಬಿ.ಬಸವರಾಜಪ್ಪ, ಕಾಂ.ಎಂ.ಬಿ.ಜಯದೇವಮೂರ್ತಿ, ಕಾಂ.ಈ.ಸತ್ಯಕೀರ್ತಿ, ಕಾಂ.ಎಸ್.ಬಾಬು ಸೇರಿದಂತೆ ವಸತಿ ರಹಿತ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now