ಅಧಿಕಾರಿ ಪ್ರತಿಮಾ ಕೊಲೆ ಕೇಸಲ್ಲಿ ಮುನಿರತ್ನ ಹೆಸರು : ಆರ್ ಆರ್ ನಗರ ಶಾಸಕ ಏನಂದ್ರು..?

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಪ್ರತಿಮಾ ಕೊಲೆಗೆ ಸಂಬಂಧಿಸಿದಂತೆ, ಪೊಲೀಸರು ಅಲರ್ಟ್ ಆಗಿದ್ದು, ಕಾರು ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದರ ನಡುವೆ ಮಾಜಿ ಸಚಿವ ಮುನಿರತ್ನ ಅವರ ಹೆಸರು ಕೂಡ ತಳುಕು ಹಾಕುತ್ತಿದೆ. ಕಾಂಗ್ರೆಸ್ ನವರ ಆರೋಪಕ್ಕೆ ಇದೀಗ ಶಾಸಕ ಮುನಿರತ್ನ ಪ್ರತಿಕ್ರಿಯೆ ನೀಡಿದ್ದಾರೆ.

 

‘ಲೋಕಸಭಾ ಚುನಾವಣೆ ಹೊತ್ತಿಗೆ ಮುನಿರತ್ನ ಹೊರಗೆ ಇರಬಾರದು. ತಿಹಾರ್ ಜೈಲಿಗೆ ಕಳುಹಿಸಬೇಕು ಅನ್ನೋದು ಅವರ ಆಲೋಚನೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ನಾನೂ ಈಗ ಎದ್ದು ಬಂದಿದ್ದೇನೆ. ಬೆಳಗ್ಗೆಯಿಂದ ಮಧ್ಯಾಹ್ನದ ವೇಳೆಗೆ ಏನಾಗಿದೆ ಎಂಬುದು ನಿಮಗೆ ಗೊತ್ತು. ನನ್ನ ಮನೆ ಮುಂದೆ ಆಕ್ಸಿಡೆಂಟ್ ಆದರೂ ಅದಕ್ಕೆ‌ ಕಾರಣ ಮುನಿರತ್ನ ಎನ್ನುತ್ತಾರೆ.

 

ಸರ್ಕಾರಿ ಅಧಿಕಾರಿ ಪ್ರತಿಮಾ ಅವರ ಕೊಲೆ ಪ್ರಕರಣ ಸಂಪೂರ್ಣವಾಗಿ ತನಿಖೆ ನಡೆಯುತ್ತಿದೆ. ಅದರ ಎಲ್ಲಾ ವರದಿ ಹಪರಗೆ ಬರಲಿ. ಸ್ವಾರ್ಥಕ್ಕೆ, ದುರುದ್ದೇಶಕ್ಕೆ ಹೇಳಿಕೆಗಳನ್ನು ಕೊಡುವುದು ಅಲ್ಲ. ಪ್ರತಿಮಾ ಅವರ ಕೊಲೆಗೆ ಕಾರಣವಾದ ಡ್ರೈವರ್ ಅನ್ನು ಬಂಧಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಬಂಧಿಸಿ, ಕರೆ ತಂದಿದ್ದಾರೆ. ಮಹದೇಶ್ವರನೇ ನ್ಯಾಯ ಕೊಟ್ಟ ಎನಿಸುತ್ತದೆ ಎಂದಿದ್ದಾರೆ.

ಪ್ರತಿಮಾ ಕೊಲೆ ಕೇಸಿನಲ್ಲಿ ಕಾಂಗ್ರೆಸ್ ಮುನಿರತ್ನ ಮೇಲೆ ಆರೋಪ ಮಾಡಿದೆ. ಹಣಸೆಮಾರನಹಳ್ಳಿಯ ಪರವಾನಗಿ ಪಡೆಯದೆ ಬಂಡೆಗಳನ್ನು ಬ್ಲಾಸ್ಟ್ ಮಾಡಲಾಗಿತ್ತು. ಪ್ರತಿಮಾ ಅವರು ಈ ಸಂಬಂಧ ವರದಿಯನ್ನು ಜಿಲ್ಲಾಧಿಅಕರಿಗೆ ನೀಡಿದ್ದರು. ಈ ಪ್ರಕರಣದಲ್ಲಿ ಮುನಿರತ್ನ ಅವರನ್ನು A2 ಆರೋಪಿಯಾಗಿ ಮಾಡಿದ್ದರು. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲಾಗಿತ್ತು. ಈ ಸಂಬಂಧ ಮುನಿರತ್ನಗೂ ನೋಟೀಸ್ ನೀಡಿ, ವಿಚಾರಣೆ ನಡೆಸಿ ಎಂಬುದು ಕೆಪಿಸಿಸಿ ಕಾನೂನು ಘಟಕದ ಮುಖಂಡ ಸೂರ್ಯ ಮುಖುಂದರಾಜ್ ಒತ್ತಾಯಿಸಿದ್ದರು.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

3 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

4 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago