Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅತ್ಯಾಚಾರ ಕೇಸಲ್ಲಿ ಮತ್ತೆ ಅರೆಸ್ಟ್ ಆದ ಮುನಿರತ್ನ..!

---Advertisement---

 

ಬೆಂಗಳೂರು: ಜಾತಿ ನಿಂದನೆ ಹಾಗೂ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕ ಮುನಿರತ್ನ ಅವರಿಗೆ ನಿನ್ನೆಯಷ್ಟೇ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಆದರೆ ಮುನಿರತ್ನ ಹೊರಗೆ ಬಂದು, ಮಾಮೂಲಿಯಂತೆ ಇರಲು ಸಾಧ್ಯವಾಗಲೇ ಇಲ್ಲ. ಅದರ ಹಿಂದೆಯೇ ಅತ್ಯಾಚಾರ ಕೇಸ್ ಕೂಡ ದಾಖಲಾಗಿದ್ದ ಕಾರಣ, ಇಂದು ಮತ್ತೆ ಅರೆಸ್ಟ್ ಆಗಿದ್ದಾರೆ. ರಾಮನಗರದ ಕಗ್ಗಲೀಪುರ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಸಂತ್ರಸ್ತೆ ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 2020ರಿಂದ 2022ರವರೆಗೂ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಈಗ ಮುಬಿರತ್ನ ಅವರನ್ನು ಬಂಧಿಸಿದ್ದಾರೆ.

ಮುನಿರತ್ನ ಬಗ್ಗೆ ಈಗ ಹಲವು ಸ್ಪೋಟಕ ವಿಚಾರಗಳು ಬೆಳಕಿಗೆ ಬಂದಿವೆ. ಸಂತ್ರಸ್ತೆಯೇ ದಾಖಲಿಸಿರುವಂತೆ ಮುನಿರತ್ನ ಬಳಿ ಹಲವರ ಖಾಸಗಿ ಅಶ್ಲೀಲ ವಿಡಿಯೋಗಳು ಇವೆಯಂತೆ. ರಾಜಕೀಯ ಎದುರಾಳಿಗಳನ್ನು ಹಣಿಯಲು ಮುನಿರತ್ನ ಹನಿಟ್ರ್ಯಾಪ್ ಮಾಡುವ ಷಡ್ಯಂತ್ರ ಹೂಡಿದ್ದರಂತೆ. ಅಷ್ಟೇ ಅಲ್ಲ, ಹೆಚ್ಐವಿ ಸೋಂಕಿತರನ್ನು ಬಳಸಿಕೊಳ್ಳುತ್ತಿದ್ದರಂತೆ. ಜೊತೆಗೆ ಅಟ್ರಾಸಿಟಿ ಕೇಸುಗಳ ದುರ್ಬಳಕೆಯನ್ನು ಮಾಡಿಕೊಳ್ಳುತ್ತಿದ್ದರು ಎಂಬ ಗಂಭೀರ ಆರೋಪಗಳನ್ನು ಸಂತ್ರಸ್ತೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಹಣ ಕೊಟ್ಟು, ಪ್ರಭಾವ ಬಳಸಿ ಕೆಲವರ ಮೇಲೆ ಅಟ್ರಾಸಿಟಿ ಕೇಸ್ ಗಳನ್ನು ಹಾಕಿಸುತ್ತಿದ್ದರಂತೆ‌. ಈ ಹಿಂದೆ ಆರ್ ಆರ್ ನಗರದಲ್ಲಿ ಹಲವರ ವಿರುದ್ಧ ಅಟ್ರಾಸಿಟಿ ಕೇಸ್ ಗಳನ್ನು ದಾಖಲಿಸಿದ್ದಾರೆ ಎಂದು ದೂರಿದ್ದಾರೆ. ಮುನಿರತ್ನ ಬಗ್ಗೆ ಇಷ್ಟೊಂದು ವಿಚಾರ ತಿಳಿದು ರಾಜಕಾರಣಿಗಳೇ ಶಾಕ್ ಆಗಿದ್ದಾರೆ. ಸದ್ಯ ಅತ್ಯಾಚಾರ ಆರೋಪದಲ್ಲಿ ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...