Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುನಿರತ್ನ ಕೇಸ್: ಎಂಸಿ ಸುಧಾಕರ್ ಸೇರಿದಂತೆ ಹಲವರಿಂದ ಸಿಎಂಗೆ ಮನವಿ : ನಿಯೋಗಕ್ಕೆ ಸಿಎಂ ಉತ್ತಮ ಸ್ಪಂದನೆ

Facebook
Twitter
Telegram
WhatsApp

 

 

ಬೆಂಗಳೂರು: ಶಾಸಕ ಮುನಿರತ್ನ ಅವರನ್ನ ಪೊಲೀಸರು ಬಂಧಿಸಿದ್ದಾರೆ. ದಲಿತರು ಹಾಗೂ ಒಕ್ಕಲಿಗರ ವಿರುದ್ಧ ತೀರಾ ಕೆಟ್ಟದಾಗಿ ಮಾತನಾಡಿರುವ ಮುನಿರತ್ನ ವಿರುದ್ಧ ಸೂಕ್ತ ಕ್ರಮಕ್ಕೆ ಸಚಿವರು ಹಾಗೂ ಶಾಸಕರ ನಿಯೋಗ ಒತ್ತಾಯಿಸಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಕಾವೇರಿ ನಿವಾಸದಲ್ಲಿ ಭೇಟಿಯಾಗಿದೆ. ಸಚಿವರಾದ ಚೆಲುವರಾಯಸ್ವಾಮಿ, ಎಂ.ಸಿ.ಸುಧಾಕರ್, ಶರತ್ ಬಚ್ಚೇಗೌಡ, ಮಾಗಡಿ ಬಾಲಕೃಷ್ಣ, ಮಾಲೂರು ಮಂಜೇಗೌಡ, ಕುಣಿಗಲ್ ರಂಗನಾಥ್ ಎಸ್.ರವಿ ಸೇರಿದಂತೆ ಇನ್ನಿತರರು ಜೊತೆಗೂಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಕೂಡ ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮನವಿಯ ಬಳಿಕ ಮಾತನಾಡಿದ ಸಚಿವ ಎಂಸಿ ಸುಧಾಕರ್, ಕಾಂಗ್ರೆಸ್ ನ ಒಕ್ಕಲಿಗ ಸಮುದಾಯದ ಶಾಸಕರು, ಸಚಿವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೇವೆ. ಮುನಿರತ್ನ ಅವರು ಮಾತನಾಡಿರುವ ಆಡಿಯೋ ಬಂದಿದೆ. ಅದರಲ್ಲಿ ಒಕ್ಕಲಿಗರ ಹಾಗೂ ದಲಿತರ ಕುರಿತಾಗಿ ಮಾತನಾಡಿರುವುದು ಖಂಡನೀಯ.

ಅವರ ಮಾತುಗಳು ಬಹಳ ನೋವುಂಟು ಮಾಡಿವೆ. ಸರ್ಕಾರ ಈಗಾಗಲೇ ಅವರನ್ನು ಬಂಧಿಸಿದೆ. ಈಗ ಒಂದು ಆಡಿಯೋ ಮಾತ್ರ ಬೆಳಕಿಗೆ ಬಂದಿದೆ. ಆದರೆ ಈ ಹಿಂದೆ ಹಲವು ಬಾರಿ ಈ ರೀತಿ ಮಾತನಾಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಸಿಎಂ ಅವರಿಗೆ ಮನವಿ ಮಾಡಿಕೊಂಡಿದ್ದೇವೆ. ಮುನಿರತ್ನ ಅವರ ವಿರುದ್ಧ ಕಾನೂನು ರೀತಿಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಕೇಳಿಕೊಂಡಿದ್ದೇವೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ಇದಕ್ಕೆ ಉತ್ತಮ ರೆಸ್ಪಾನ್ಸ್ ಮಾಡಿದ್ದಾರೆ. ಬಿಜೆಪಿ ಅವರು ಏನು ಬೇಕಾದರೂ ಮಾಡುತ್ತಾರೆ. ಈ ಹಿಂದೆ ದೇಶದ ಪ್ರಧಾನಿಗಳೇ ಆರ್ ಆರ್ ನಗರದಲ್ಲಿ ನಕಲಿ ಮತದ ಬಗ್ಗೆ ಮಾತನಾಡಿದ್ದರು. ಈಗ ಅವರು ಬಿಜೆಪಿಗೆ ಸೇರಿದ ಮೇಲೆ ಎಲ್ಲಾ ಆರೋಪಗಳಿಂದ ಮುಕ್ತವಾಗಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!