Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

28 ಬಾರಿ ಕೋಲಾರದಿಂದಾನೇ ಸಂಸದರಾದ್ರೂ ಹೈಕಮಾಂಡ್ ನಿಂದ ಮುನಿಯಪ್ಪಗೆ ಸಿಗಲಿಲ್ಲ ಕೋಲಾರ ಟಿಕೆಟ್..!

Facebook
Twitter
Telegram
WhatsApp

ಕೋಲಾರ: ಈ ಬಾರಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧೆ ಮಾಡುತ್ತೀನಿ ಅಂತ ಹಲವು ಬಾರಿ ಕೋಲಾರಕ್ಕೆ ಭೇಟಿ ನೀಡಿ, ಅಲ್ಲಿನ ಜನರ ಜೊತೆಗೆ ಸಭೆಗಳನ್ನು ನಡೆಸಿ, ಜನರ ಜೊತೆಗೆ ಸಂಪರ್ಕ ಸಾಧಿಸುವ ಕೆಲಸ ಮಾಡಿದ್ದರು. ಆದ್ರೆ ವರದಿಗಳ ಪ್ರಕಾರ, ಸಿದ್ದರಾಮಯ್ಯ ಅವರೇ ಮಾಡಿಸಿದ ಸರ್ವೇ ಪ್ರಕಾರ ಕೋಲಾರ ಸೇಫ್ ಅಲ್ಲ ಎಂಬ ಸತ್ಯ ಗೊತ್ತಾಗಿತ್ತು. ಹೀಗಾಗಿ ಹೈಕಮಾಂಡ್ ಕೂಡ ಇದಕ್ಕೆ ರೆಡ್ ಸಿಗ್ನಲ್ ಕೊಟ್ಟಿತ್ತು. ಇದೀಗ ಕೆ ಎಚ್ ಮುನಿಯಪ್ಪ ಅವರಿಗೂ ಕೋಲಾರ ಕೈತಪ್ಪಿದೆ.

ಸತತವಾಗಿ ಕೋಲಾರದಿಂದಾನೇ 28 ಬಾರಿ ಸಂಸದರಾಗಿದ್ದ ಮುನಿಯಪ್ಪ ಅವರು ಈ ಬಾರಿ ರಾಜ್ಯ ರಾಜಕಾರಣಕ್ಕೆ ಬರುವುದಕ್ಕೆ ತಯಾರಿ ನಡೆಸಿದ್ದಾರೆ. ಅಷ್ಟು ವರ್ಷ ಗೆಲ್ಲಿಸಿದ್ದ ಕೋಲಾರದಿಂದಾನೇ ನಿಲ್ಲಬೇಕು ಎಂಬುದು ಮುನಿಯಪ್ಪ ಅವರ ಆಸೆಯಾಗಿತ್ತು. ಅದಕ್ಕಾಗಿಯೇ ಕೋಲಾರದ ಟಿಕೆಟ್ ನೀಡಿ ಎಂದು ಹೈಕಮಾಂಡ್ ಬಳಿ ಮನವಿ ಕೂಡ ಮಾಡಿದ್ದರು. ಸಿದ್ದರಾಮಯ್ಯ ಕೋಲಾರಕ್ಕೆ ಎಂಟ್ರಿಯಾದಾಗ ಮುನಿಯಪ್ಪ ಅವರು ಮುನಿಸಿಕೊಂಡಿದ್ದರು. ಆದ್ರೆ ಈಗ ಹೈಕಮಾಂಡ್ ನಡೆ ಗೊಂದಲ ಮೂಡಿಸಿದೆ.

ಮುನಿಯಪ್ಪ ಅವರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಗೆ ದೇವನಹಳ್ಳಿಗೆ ಟಿಕೆಟ್ ನೀಡಲಾಗಿದೆ. ದೇವನಹಳ್ಳಿಯಲ್ಲಿ ಮುನಿಯಪ್ಪ ವಿರುದ್ಧ ಬಂಡಾಯವೂ ಇದೆ. ಈ ಮಧ್ಯೆ ಅಲ್ಲಿ ಮುನಿಯಪ್ಪ ಮ್ಯಾಜಿಕ್ ಮಾಡಿ ಗೆಲ್ಲಬೇಕಿದೆ. ಇನ್ನು ಕೂಡ ಕೋಲಾರವನ್ನು ಯಾರಿಗೂ ಘೋಷಣೆ ಮಾಡಿಲ್ಲ. ಸಿದ್ದರಾಮಯ್ಯ ಅವರು ಹೈಕಮಾಂಡ್ ಮುಂದೆ ಕೋಲಾರ, ಬಾದಾಮಿ, ವರುಣಾ ಕ್ಷೇತ್ರವನ್ನು ಮುಂದಿಟ್ಟಿದ್ದಾರೆ. ಹೀಗಾಗಿ ಆ ಕ್ಷೇತ್ರಕ್ಕೆ ಇನ್ನು ಯಾರನ್ನು ಘೋಷಣೆ ಮಾಡದೆ ಕಾಯ್ದಿರಿಸಲಾಘಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!