ಚಿತ್ರದುರ್ಗ | ಮುರುಘಾ ಶರಣರು ನಿರ್ದೋಷಿ : ಕೋರ್ಟ್ ತೀರ್ಪು…!

1 Min Read

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 26 : ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಸ್ಕೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ನಿರ್ದೋಷಿ ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್‌ ನ್ಯಾಯಾಲಯ ಆದೇಶಿಸಿದೆ.

ಮುರುಘಾ ಶ್ರೀಗಳು ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ದಾಖಲಾಗಿರುವ ಆರೋಪಗಳಲ್ಲಿ ಸಾಕ್ಷ್ಯಧಾರಗಳು ಸಾಬೀತುಪಡಿಸಲು ವಿಫಲರಾಗಿದ್ದಾರೆ ಎಂದು ನ್ಯಾಯಮೂರ್ತಿ ಗಂಗಾಧರಪ್ಪ ಚೆನ್ನಬಸಪ್ಪ ಹಡಪದ ಅವರು ತೀರ್ಪು ನೀಡಿದ್ದಾರೆ.

ಮೊದಲ ಪೋಸ್ಕೊ ಪ್ರಕರಣದಲ್ಲಿ ಅವರನ್ನು ಖುಲಾಸೆ ಗೊಳಿಸಲಾಗಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ. ಮುರುಘಾ ಶರಣರು, ವಾರ್ಡನ್ ರಶ್ಮಿ, ಪರಮಶಿವಯ್ಯ ಅವರು ನಿರ್ದೋಷಿಗಳು ಎಂದು ನ್ಯಾಯಾಲಯ ಪರಿಗಣಿಸಿದೆ.

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಬಿಡುಗಡೆಗೂ ಕೋರ್ಟ್ ಆದೇಶ ನೀಡಿದೆ. ಇಬ್ಬರು ಸಂತ್ರಸ್ಥೆಯರ ದೂರು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿತ್ತು. ಮೊದಲ ಕೇಸ್ ನಲ್ಲಿ ಪೊಲೀಸರು ಎರಡು ಚಾರ್ಜ್ ಷೀಟ್ ಸಲ್ಲಿಸಿದ್ದರು. ಮೊದಲ ಕೇಸ್ ನಲ್ಲಿ ಈಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಇದು ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಸಿಕ್ಕ ದೊಡ್ಡ ರೀಲೀಫ್‌ ಸಿಕ್ಕಿದೆ.

Share This Article