Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಗೀತದಿಂದ ಮನಸ್ಸಿಗೆ ನೆಮ್ಮದಿ, ಸಂತೋಷ ಜೊತೆಗೆ ಮೌಲ್ಯ ವೃದ್ಧಿ : ಡಾ.ಬಿ.ಎಂ.ಗುರುನಾಥ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 18 : ಸಂಗೀತದಿಂದ ಮನಸ್ಸಿಗೆ ನೆಮ್ಮದಿ ಸಂತೋಷ ಸಿಗುವುದಲ್ಲದೆ ಮನುಷ್ಯನನ್ನು ಮೌಲ್ಯದ ಕಡೆ ಕೊಂಡೊಯ್ಯುತ್ತದೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ತಿಳಿಸಿದರು.

 

ಮದಕರಿನಾಯಕ ಸಾಂಸ್ಕøತಿಕ ಕೇಂದ್ರ(ರಿ) ಚಿತ್ರದುರ್ಗ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವುಗಳ ಸಹಯೋಗದೊಂದಿಗೆ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಸಂಗೀತೋತ್ಸವವನ್ನು ಹಾರ್ಮೊನಿಯಂ ನುಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಸಂಗೀತ, ಸಾಹಿತ್ಯ, ಕಲೆ ಇವುಗಳು ಅನೌಪಚಾರಿಕವಾಗಿ ವಿದ್ಯೆ ಕಲಿಸುವ ಮಾಧ್ಯಮ. ಸಂಗೀತ ಶಿಕ್ಷಣದ ಮೊದಲ ಮೆಟ್ಟಿಲು. ಜೀವನದ ತತ್ವ. ಹಾಗಾಗಿ ಸಂಗೀತಕ್ಕೆ ಎಲ್ಲರನ್ನು ಸಂವಹಗೊಳಿಸುವ ದೊಡ್ಡ ಶಕ್ತಿಯಿದೆ. ನೀರು ಹರಿಯುವಾಗ ಹೇಗೆ ರೋಮಾಂಚನಕಾರಿಯಾಗಿ ಸದ್ದು ಮಾಡುತ್ತದೋ ಅದೇ ರೀತಿ ಸಂಗೀತ ಕೂಡ ಲಯ, ತಾಳದ ಮೂಲಕ ಸದ್ದು ಮಾಡುತ್ತದೆಂದು ಹೇಳಿದರು.

 

ಸಂಗೀತವೆಂದರೆ ಮೂಲಭೂತ ಶಿಕ್ಷಣ. ವಾದ್ಯಗಳ ಜೊತೆ ತಾಂತ್ರಿಕತೆಯಿದೆ. ವಿದ್ಯೆ ಹೇಳಿಕೊಡುವ ಮೂಲಕ ಸಂಗೀತ ಮಾನವನನ್ನು ಜ್ಞಾನವಂತನನ್ನಾಗಿಸುತ್ತದೆ. ಎಲ್ಲರನ್ನು ಸಂವಹನಗೊಳಿಸುವ ದೊಡ್ಡ ಪ್ರಭಾವಿ ಮಾಧ್ಯಮ ಸಂಗೀತವನ್ನು ಬೇರೆ ಬೇರೆ ಮಗ್ಗಲುಗಳಿಂದ ನೋಡಬೇಕಿದೆ ಎಂದರು.

 

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಚಾರ್ಯರಾದ ಡಾ.ಶಿವಣ್ಣ ಮಾತನಾಡಿ ಸಂಗೀತ ಕಲಿಯುವುದರಿಂದ ಏಕಾಗ್ರತೆ ಮೂಡುತ್ತದೆ. ಮಾನಸಿಕವಾಗಿ ಉಲ್ಲಾಸ, ಶಾಂತಿಯಿಂದಿರಬಹುದು, ಶಿಸ್ತು, ತ್ಯಾಗ, ಸರಳತೆಯನ್ನು ಕಲಿಸಿ ವಿಧೇಯತೆ ಬೆಳೆಸುತ್ತದೆ. ಅದಕ್ಕಾಗಿ ಸಂಗೀತವನ್ನು ಪ್ರಭಾವಿ ಮಾಧ್ಯಮವೆನ್ನಬಹುದು ಎಂದರು.

 

ಆಂಗ್ಲ ವಿಭಾಗದ ಮುಖ್ಯಸ್ಥ ಡಾ.ಮಧುಸೂದನ ಪಿ.ಎನ್. ಮಾತನಾಡುತ್ತ ಸಂಗೀತ ಒಂದು ಧ್ಯಾನ, ತಪಸ್ಸಿದ್ದಂತೆ. ಸಂಗೀತ ಕಲಿಯಲು ವಯಸ್ಸಿನ ಮಿತಿಯಿಲ್ಲ. ಸಾಹಿತ್ಯ, ಶಿಕ್ಷಣಕ್ಕೆ ಎಷ್ಟು ಮಹತ್ವವಿದೆಯೋ ಸಂಗೀತಕ್ಕೂ ಕೂಡ ಅಷ್ಟೆ ಪ್ರಾಮುಖ್ಯತೆಯಿದೆ. ಸಂಗೀತದ ಸದಭಿರುಚಿ ಆರೋಗ್ಯಕ್ಕೆ ಒಳ್ಳೆಯ ಸಾಧನ ಎಂದು ನುಡಿದರು.

ಮದಕರಿನಾಯಕ ಸಾಂಸ್ಕøತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿ ನಾಯಕ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ವಿಜಯಲಕ್ಷ್ಮಿ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಜಯಲಕ್ಷ್ಮಮ್ಮ, ಐಕ್ಯುಎಸಿ. ಸಂಚಾಲಕ ಹಲಸಂದಿ ಸತೀಶ್, ಪತ್ರಾಂಕಿತ ವ್ಯವಸ್ಥಾಪಕ ವೆಂಕಟೇಶ್, ಸರಿಗಮ ಸಂಗೀತ ಪಾಠಶಾಲೆಯ ಶಾಸ್ತ್ರೀಯ ಸಂಗೀತಗಾರರಾದ ಸುಜಿತ್ ಕುಲಕರ್ಣಿ ಇವರುಗಳು ವೇದಿಕೆಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now