ಮೈಸೂರು.ಜುಲೈ.12: ಭಾರತೀಯ ಚಿತ್ರರಂಗದ ಹೆಮ್ಮೆಯ ಗಾಯಕಿ, ‘ಗಾನಕೋಗಿಲೆ’ ಎಸ್. ಜಾನಕಿ ಅವರ ನಿಧನರಾಗಿದ್ದು, ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಾಗರವೇ ಹರಿದುಬರುತ್ತಿದ್ದು, ನೆಚ್ಚಿನ ಗಾಯಕಿಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಅಭಿಮಾನಿಗಳು, ಚಿತ್ರರಂಗದ ಗಣ್ಯರು ಹಾಗೂ ಸಂಗೀತ ದಿಗ್ಗಜರು ಸಾಲುಗಟ್ಟಿ ನಿಂತಿದ್ದಾರೆ.
ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ನಾದಬ್ರಹ್ಮ ಹಂಸಲೇಖ ಅವರು ಭಾವುಕರಾದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ. ಜಯಮಾಲಾ ಹಾಗೂ ರಾಜ್ಯ ಸರ್ಕಾರಕ್ಕೆ ತಕ್ಷಣವೇ ಕರೆ ಮಾಡಿದ ಅವರು, ಮೈಸೂರಿನಲ್ಲೇ ಜಾನಕಮ್ಮನವರ ನೆನಪಿನ ಸ್ಮಾರಕ ನಿರ್ಮಿಸಬೇಕು ಎಂದು ಮನವಿ ಮಾಡಿದರು.
ಎಸ್. ಜಾನಕಿ ಅವರು ಅಪಾರ ದೈವಭಕ್ತರಾಗಿದ್ದು, ತಮ್ಮ ದಿವ್ಯ ಕಂಠದ ಮೂಲಕವೇ ದೇವ ರಂಜನೆ ಮಾಡಿದ ಮಹಾನ್ ಚೇತನ. ಸುಮಾರು ಆರು ವರ್ಷಗಳ ಹಿಂದೆಯೇ ತಾವು ಕರ್ನಾಟಕದಲ್ಲೇ ನೆಲೆಸಲು ಬಯಸಿರುವುದಾಗಿ ಹೇಳಿಕೊಂಡಿದ್ದರು. ಅವರ ಈ ಕೊನೆಯ ಆಸೆಯನ್ನು ಗೌರವಿಸಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಸ್ಮಾರಕ ನಿರ್ಮಾಣದ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹಂಸಲೇಖ ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







