ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 27 : ಸಂಗೀತ ಮಾನಸಿಕ ನೆಮ್ಮದಿ ನೀಡುವುದರ ಜೊತೆಗೆ ಭಾವನಾತ್ಮಕ ಸಂಬಂಧವನ್ನು ಗಟ್ಟಿಗೊಳಿಸುತ್ತದೆಂದು ವಿಮುಕ್ತಿ ವಿದ್ಯಾಸಂಸ್ಥೆಯ ಆರ್.ವಿಶ್ವಸಾಗರ್ ಹೇಳಿದರು.
ಮಠದ ಕುರುಬರಹಟ್ಟಿಯಲ್ಲಿರುವ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ವಿಶ್ವ ಸಂಗೀತ ದಿನಾಚರಣೆ ಅಂಗವಾಗಿ ಆಯಿತೋಳಿನ ಗಾನಯೋಗಿ ಸಂಗೀತ ಸಾಂಸ್ಕøತಿಕ ಕಲಾ ಸಂಘದ ವತಿಯಿಂದ ಭಾನುವಾರ ನಡೆದ ಸಂಗೀತೋತ್ಸವ ಉದ್ಘಾಟಿಸಿ ಮಾತನಾಡಿದರು.
ಇಡಿ ಜಗತ್ತಿನಲ್ಲಿ ಎಲ್ಲರಿಗೂ ಸುಲಭವಾಗಿ ಅರ್ಥವಾಗುವ ಏಕೈಕ ಭಾಷೆಯೆಂದರೆ ಸಂಗೀತ. ಸಂಗೀತಕ್ಕೆ ತಲೆದೂಗದವರಲ್ಲಿ ಎಂದು ತಿಳಿಸಿದರು.
ಬಸವೇಶ್ವರ ವಿದ್ಯಾಸಂಸ್ಥೆ ಅಧ್ಯಕ್ಷೆ ಪ್ರಭಾವತಿ ಶಂಕರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಗೀತ ನಮ್ಮ ನೆಲದ ಸಂಸ್ಕøತಿಯ ಪ್ರತೀಕವಾಗಿದ್ದು, ಶಾಸ್ತ್ರೀಯ ಸಂಗೀತ,
ವಚನ ಸಂಗೀತ, ಜಾನಪದ, ತತ್ವಪದ, ರಂಗಗೀತೆಗಳು ಗೀಗಿ ಪದ, ಲಾವಣಿಗಳು ಸೇರಿದಂತೆ ಮುಂತಾದ ಕಲಾ ಪ್ರಕಾರಗಳನ್ನು ಆಸ್ವಾದಿಸಿ ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸಿ ಬೆಳೆಸಬೇಕೆಂದು ಕರೆ ನೀಡಿದರು.
ಕಲಾ ಸಂಘದ ಅಧ್ಯಕ್ಷ ಆಯಿತೋಳು ಚಂದ್ರಪ್ಪ ಮಾತನಾಡಿ ಸಂಗೀತವು ಭಾರತೀಯ ಪರಂಪರೆಯ ಹೆಮ್ಮೆ. ಪ್ರತಿಯೊಬ್ಬರು ಸಂಗೀತ ಕಲೆಯನ್ನು ಗೌರವಿಸುವ ಗುಣ ಹೊಂದಬೇಕು. ಇಂದಿನ ಆಧುನಿಕ ಜಗತ್ತಿನಲ್ಲಿ ಯುವ ಜನಾಂಗ ಪಾಶ್ಚಾತ್ಯ ಸಂಸ್ಕøತಿಯ ಕಡೆ ಮಾರು ಹೋಗುತ್ತಿರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ಬಸವೇಶ್ವರ ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ.ಕೆ.ಶಂಕರಪ್ಪ, ಗಾನಯೋಗಿ ಕಲಾ ಸಂಘದ ಕಾರ್ಯದರ್ಶಿ ಜಗದೀಶ್ ಆಯಿತೋಳು, ಗಾಯಕರುಗಳಾದ ಅಂಜಿನಪ್ಪ, ಹೇಮಂತ್ರಾಜ್, ಅಮಕುಂದಿ ಕೆ.ಗಂಗಾಧರ್, ಗಾಯಕಿ ಭಾಗ್ಯಮ್ಮ ಕೆ.ಹೆಚ್. ನಿಲಯ ಪಾಲಕ ಮಹಾದೇವಪ್ಪ, ಶಾಂತಮ್ಮ ಇನ್ನು ಮುಂತಾದವರು ಕಾರ್ಯಕ್ರಮದಲ್ಲಿ
ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












