Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಸಲ್ಮಾನ ವರ್ತಕರಿಂದ ಪೇಜಾವರ ಶ್ರೀಗಳ ಭೇಟಿ

Facebook
Twitter
Telegram
WhatsApp

ಉಡುಪಿ: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮುಸಲ್ಮಾನರ ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿದೆ. ಜಾತ್ರೆಗಳಲ್ಲಿ ಮುಸಲ್ಮಾನ ಸಮುದಾಯದವರಿಗೆ ನಿರ್ಬಂಧ ಹೇರಲಾಗಿದೆ. ಇದು ಉಡುಪಿ ಜಾತ್ರೆಯಲ್ಲಿ ಶುರುವಾದ ಸಂಪ್ರದಾಯ ಇದೀಗ ಇಡೀ ರಾಜ್ಯದಲ್ಲಿ ಅಲ್ಲಲ್ಲಿ ಶುರುವಾಗಿದೆ. ಈ ಹಿನ್ನೆಲೆ ಇಂದು ಮುಸಲ್ಮಾನ ವರ್ತಕರು ಪೇಜಾವರ ಶ್ರೀಗಳನ್ನ ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ.

ಶ್ರೀರಾಮ ವಿಠಲ ಭವನದಲ್ಲಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳನ್ನ ಭೇಟಿಯಾಗಿದ್ದಾರೆ. ಜಿಲ್ಲಾ ಸೌಹಾರ್ದ ಸಮಿತಿ, ಮುಸಲ್ಮಾನ ಮುಖಂಡರು, ಕ್ರೈಸ್ತ ಮುಖಂಡರು ಸೇರಿ ಸ್ವಾಮೀಜಿಗಳನ್ನ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಸದ್ಯದ ಸ್ಥಿತಿಯಲ್ಲಿ ಜಾತ್ರೆಗಳಲ್ಲಿ ಮುಸ್ಲಿಂರಿಗೂ ಅವಕಾಶ ನೀಡಲು ಮನವಿ ಪತ್ರ ಸಲ್ಲಿಸಿದ್ದಾರೆ. ಮನವಿ ಬಳಿಕ ಮಾತನಾಡಿದ ಶ್ರೀಗಳು, ಯಾರಿಂದ ಸಮಸ್ಯೆ ಆಗಿದೆ ಅವರೇ ಸಮಸ್ಯೆಯನ್ನ ಪರಿಹರಿಸಬೇಕು. ತಪ್ಪು ಮಾಡಿದವರನ್ನು ಶಿಕ್ಷಿಸಲಿ. ಆದರೆ ಒಬ್ಬರು‌ ಮಾಡಿದ ತಪ್ಪಿಗೆ ಇಡೀ ಸಮಾಜಕ್ಕೆ ಅನ್ಯಾಯವಾಗುತ್ತದೆ. ನಾಲ್ಕು‌ ಮುಖಂಡರು ಕುಳಿತು ಮಾತಾಡಿದರೆ ಸಮಸ್ಯೆ ಬಗೆಹರಿಯಲ್ಲ. ತಳಮಟ್ಟದಲ್ಲಿ ಇದಕ್ಕೆ ಪರಿಹಾರ ಹುಡುಕಬೇಕು. ಈ ಬೆಳವಣಿಗೆಗೆ ಕಾರಣ ಏನೆಂಬುದು ವೇದಿಕೆಯಲ್ಲಿ ಕೂತು ಚರ್ಚೆ ಮಾಡಬೇಕಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!