Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವರ್ಷಿತಾ ಕೊಲೆಗೈದ ಕಾಮುಕರಿಗೆ ಗಲ್ಲು ಶಿಕ್ಷೆಯಾಗಲಿ : ಮುಸ್ಲಿಂ ಯುವಕರಿಂದ ಕ್ಯಾಂಡಲ್ ಮೆರವಣಿಗೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 21 : ಭೀಕರವಾಗಿ ಹತ್ಯೆಗೀಡಾಗಿರುವ ವಿದ್ಯಾರ್ಥಿನಿ ವರ್ಷಿತಾಳ ಆತ್ಮಕ್ಕೆ ಶಾಂತಿ ಕೋರಿ ಮುಸ್ಲಿಂ ಸಮಾಜದ ಯುವಕರು ಗುರುವಾರ ಸಂಜೆ ನಗರದಲ್ಲಿ ಕ್ಯಾಂಡಲ್ ಮೆರವಣಿಗೆ ನಡೆಸಿದರು.

ಗಾಂಧಿ ವೃತ್ತದಿಂದ ಮೆರವಣಿಗೆ ಮೂಲಕ ಆಗಮಿಸಿದ ಯುವಕರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಹಾಗೂ ಒನಕೆ ಓಬವ್ವ ವೃತ್ತದ ಬಳಿ ಅತ್ಯಾಚಾರಿ ವಿರುದ್ದ ಧಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ ಮಾತನಾಡಿ ವರ್ಷಿತಾಳನ್ನು ಬರ್ಬರವಾಗಿ ಕೊಲೆಗೈದು ದೇಹವನ್ನು ಸುಟ್ಟು ಹಾಕಿರುವವರು ಯಾರೆ ಆಗಿರಲಿ ಕಠಿಣ ಶಿಕ್ಷೆ ವಿಧಿಸಬೇಕು. ಇದರ ಹಿಂದೆ ಯಾರ್ಯಾರಿದ್ದಾರೆನ್ನುವುದನ್ನು ಪತ್ತೆ ಹಚ್ಚಿ ಮೃತಳ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.

ಇಂತಹ ಘಟನೆ ಚಿತ್ರದುರ್ಗದಲ್ಲಿ ಮತ್ತೆ ಮರುಳಿಸಬಾರದೆಂದರೆ ವರ್ಷಿತಾಳನ್ನು ಹತ್ಯೆಗೈದವರಿಗೆ ಉಗ್ರ ಶಿಕ್ಷೆಯಾಗಬೇಕು. ನಿಸ್ಪಕ್ಷಪಾತ ತನಿಖೆ ನಡೆಸಿದರೆ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯ ಎಂದು ಸರ್ಕಾರವನ್ನು ಒತ್ತಾಯಿಸಿದರು. ಅಫಾನ್ ಮಾತನಾಡಿ ವರ್ಷಿತಾಳನ್ನು ಕ್ರೂರವಾಗಿ ಕೊಲೆಗೈದವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಯಾವುದೇ ವ್ಯತ್ಯಾಸವಾಗದೆ ಸಮಗ್ರ ತನಿಖೆ ನಡೆಸಿದಾಗ ಮಾತ್ರ ಅತ್ಯಾಚಾರದಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆನ್ನುವುದು ಬಯಲಿಗೆ ಬರಲಿದೆ. ಶಾಂತಿಗೆ ಹೆಸರುವಾಸಿಯಾಗಿರುವ ಚಿತ್ರದುರ್ಗದಲ್ಲಿ ಇಂತಹ ಪೈಶಾಚಿಕ ಕೃತ್ಯ ನಡೆದಿರುವುದು ಜನತೆಯನ್ನು ಬೆಚ್ಚಿ ಬೀಳಿಸಿದೆ. ಮೃತಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.

ಆರ್.ಕೆ.ನಯಾಜ್‍ಬಾಬು, ಅಲಿ, ಮುನಿರ್, ವಲಿ, ಮೆಹಬೂಬ್, ರಫಿಕ್, ಫೈರೋಜ್, ಯಾಸಿನ್, ಹೆಚ್.ಪ್ಯಾರೆಜಾನ್, ಸಯಿದು ಇನ್ನು ಅನೇಕರು ಕ್ಯಾಂಡಲ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment