Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮದ್ಯಪಾನದ ವಯಸ್ಸು ಇಳಿಸಿದ ಸರ್ಕಾರದ ವಿರುದ್ಧ ಮುತಾಲಿಕ್ ಕೆಂಡಾಮಂಡಲ..!

---Advertisement---

ಉಡುಪಿ: ಮದ್ಯಪಾನ ಮಾಡುವ ವಯಸ್ಸು ಈ ಮುಂಚೆ 2 ಇತ್ತು. ಆದರೆ ಈಗ ಅದನ್ನು 18ಕ್ಕೆ ಸರ್ಕಾರ ಇಳಿಸಿದೆ. ಈ ನಿರ್ಧಾರವನ್ನು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಖಂಡಿಸಿದ್ದಾರೆ. ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಮದ್ಯಪಾನದ ವಯಸ್ಸು 21ರಿಂದ 18ಕ್ಕೆ ಇಳಿಸಿದ್ದು ಖಂಡನೀಯ. ಮದ್ಯಪಾನಕ್ಕೆ ಕಡಿವಾಣ ಹಾಕಬೇಕಾಗಿರುವುದು. ಆದರೆ ಸರ್ಕಾರ ಇದನ್ನು ಪ್ರೋತ್ಸಾಹಿಸುತ್ತಿದೆ ಎಂದಿದ್ದಾರೆ.

ರಾಜ್ಯ ಸರ್ಕಾರ ಈ ಕೂಡಲೇ ಈ ಆದೇಶವನ್ನು ಹಿಂಡೆಯಬೇಕು. ಕಾರ್ಮಿಕರು, ವಿದ್ಯಾರ್ಥಿಗಳು ಈ ಮದ್ಯಪಾನಕ್ಕೆ ಬಲಿಯಾಗುತ್ತಿದ್ದಾರೆ. ದೇಶಾದ್ಯಂತ ಈ ಮದ್ಯಪಾನವನ್ನು ನಿಷೇಧಿಸಬೇಕು. ಮದ್ಯಪಾನ ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಮಹಾತ್ಮ ಗಾಂಧೀಜಿ ಅವರು 75 ವರ್ಷದ ಹಿಂದೆಯೇ ಸಲಹೆ ನೀಡಿದ್ದರು.

ಸರ್ಕಾರಗಳು ಅಸಹ್ಯ ಪರಿಸ್ಥಿತಿಯನ್ನು ನಿರ್ಮಿಸಿವೆ. ಮದ್ಯಪಾನವನ್ನೇ ಅನುಸರಿಸಿ ಸರ್ಕಾರ ರಾಜಕಾರಣ ಮಾಡುತ್ತಿದೆ. ರಾಜ್ಯ ಸರ್ಕಾರ ಈ ರೀತಿಯ ಆದೇಶದಿಂದ ಯುವಕರನ್ನು ತಪ್ಪು ದಾರಿಗೆ ಎಳೆಯುತ್ತಿದೆ. ರಾಜ್ಯ ಸರ್ಕಾರ ಈ ಆದೇಶವನ್ನು ಹಿಂಪಡೆಯದೆ ಇದ್ದರೆ ಶ್ರೀರಾಮಸೇನೆ ಸೇರಿದಂತೆ ಮಹಿಳಾ ಸಂಘಟನೆಗಳು ಕೂಡ ಪ್ರತಿಭಟನೆ ನಡೆಸುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...