ಉಡುಪಿ: ಮದ್ಯಪಾನ ಮಾಡುವ ವಯಸ್ಸು ಈ ಮುಂಚೆ 2 ಇತ್ತು. ಆದರೆ ಈಗ ಅದನ್ನು 18ಕ್ಕೆ ಸರ್ಕಾರ ಇಳಿಸಿದೆ. ಈ ನಿರ್ಧಾರವನ್ನು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಖಂಡಿಸಿದ್ದಾರೆ. ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಮದ್ಯಪಾನದ ವಯಸ್ಸು 21ರಿಂದ 18ಕ್ಕೆ ಇಳಿಸಿದ್ದು ಖಂಡನೀಯ. ಮದ್ಯಪಾನಕ್ಕೆ ಕಡಿವಾಣ ಹಾಕಬೇಕಾಗಿರುವುದು. ಆದರೆ ಸರ್ಕಾರ ಇದನ್ನು ಪ್ರೋತ್ಸಾಹಿಸುತ್ತಿದೆ ಎಂದಿದ್ದಾರೆ.
ರಾಜ್ಯ ಸರ್ಕಾರ ಈ ಕೂಡಲೇ ಈ ಆದೇಶವನ್ನು ಹಿಂಡೆಯಬೇಕು. ಕಾರ್ಮಿಕರು, ವಿದ್ಯಾರ್ಥಿಗಳು ಈ ಮದ್ಯಪಾನಕ್ಕೆ ಬಲಿಯಾಗುತ್ತಿದ್ದಾರೆ. ದೇಶಾದ್ಯಂತ ಈ ಮದ್ಯಪಾನವನ್ನು ನಿಷೇಧಿಸಬೇಕು. ಮದ್ಯಪಾನ ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಮಹಾತ್ಮ ಗಾಂಧೀಜಿ ಅವರು 75 ವರ್ಷದ ಹಿಂದೆಯೇ ಸಲಹೆ ನೀಡಿದ್ದರು.
ಸರ್ಕಾರಗಳು ಅಸಹ್ಯ ಪರಿಸ್ಥಿತಿಯನ್ನು ನಿರ್ಮಿಸಿವೆ. ಮದ್ಯಪಾನವನ್ನೇ ಅನುಸರಿಸಿ ಸರ್ಕಾರ ರಾಜಕಾರಣ ಮಾಡುತ್ತಿದೆ. ರಾಜ್ಯ ಸರ್ಕಾರ ಈ ರೀತಿಯ ಆದೇಶದಿಂದ ಯುವಕರನ್ನು ತಪ್ಪು ದಾರಿಗೆ ಎಳೆಯುತ್ತಿದೆ. ರಾಜ್ಯ ಸರ್ಕಾರ ಈ ಆದೇಶವನ್ನು ಹಿಂಪಡೆಯದೆ ಇದ್ದರೆ ಶ್ರೀರಾಮಸೇನೆ ಸೇರಿದಂತೆ ಮಹಿಳಾ ಸಂಘಟನೆಗಳು ಕೂಡ ಪ್ರತಿಭಟನೆ ನಡೆಸುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…