ರಾಮನಗರ; ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ಸದ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮಾತನಾಡಿರುವ ವಕೀಲ ನಾರಾಯಣಸ್ವಾಮಿ ಅವರು, ನಾನು ಆಸ್ಪತ್ರೆಗೆ ಹೋಗಿ ಆರೋಗ್ಯ ವಿಚಾರಿಸಿದ್ದೇನೆ. ಮೂಗಿನ ಭಾಗಕ್ಕೆ ಇಂಜುರಿ ಆಗಿದೆ. 10.30ರಿಂದ ಆಪರೇಷನ್ ಶುರು ಮಾಡಿದ್ದಾರೆ. ಸದ್ಯಕ್ಕೆ ಅವರು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ತಿಳಿಸಿದ್ದಾರೆ.
ಮೊದಲಿನಿಂದಲೂ ಮುತ್ತಪ್ಪ ರೈ ಮಗ ಎಂಬ ಕಾರಣಕ್ಕೆ ರಿಕ್ಕಿ ರೈಗೂ ಬೆದರಿಕೆ ಇತ್ತು. ಹೀಗಾಗಿಯೇ ಸೆಕ್ಯೂರಿಟಿ ಇಟ್ಟುಕೊಂಡು ಓಡಾಡ್ತಾ ಇದ್ರು. ರಿಕ್ಕಿ ರೈ, ಮುತ್ತಪ್ಪ ರೈ ಆಸ್ತಿ, ವ್ಯವಹಾರ ನೋಡಿಕೊಂಡು ಹೋಗ್ತಾ ಇದ್ರು. ಸದ್ಯ ಕೆಲವೊಬ್ಬರ ಮೇಲೆ ಅನುಮಾನ ಇದೆ ಅಂತ ದೂರು ನೀಡಲಾಗಿದೆ. ಡ್ರೈವರ್ ರಾಜು ಅನುಮಾನ ಇರುವ ವ್ಯಕ್ತಿಗಳ ಮೇಲೆ ದೂರು ಕೊಟ್ಟಿದ್ದಾರೆ. ಕಳೆದ ಎರಡು ದಿನಗಳ ಹಿಂದಷ್ಟೇ ವಿದೇಶದಿಂದ ಬಂದಿದ್ದರು.
ಬೆಂಗಳೂರಿನಿಂದ ಅವರು ನಿನ್ನೆ ಬಿಡದಿಗೆ ಬಂದಿದ್ದರು. ಇಲ್ಲಿದ್ದಾಗ ಹೆಚ್ಚಾಗಿ ಬಿಡದಿ ಮನೆಗೆ ಬರ್ತಾ ಇದ್ದರು. ಮುತ್ತಪ್ಪ ರೈ ಎರಡನೇ ಹೆಂಡತಿಗೆ ಸಂಬಂಧಪಟ್ಟಂತೆ ಪ್ರಾಪರ್ಟಿ ಇಶ್ಯೂ ಇತ್ತು. ಹಲವು ಕೇಸ್ ಗಳು ಇನ್ನೂ ವಿಚಾರಣಾ ಹಂತದಲ್ಲಿದೆ. ತುಂಬಾ ದಿನಗಳಿಂದ ವಾಚ್ ಮಾಡಿ ಪ್ಲ್ಯಾನ್ ಮಾಡಿಕೊಂಡು ದಾಳಿ ಮಾಡಿದ್ದಾರೆ. ಆಸ್ತಿ ವಿಚಾರಕ್ಕೆ ಸಾಕಷ್ಟು ವಾದ ಇತ್ತು. ಅವರಿಗೆ ಸಾಕಷ್ಟು ವಿರೋಧಿಗಳು ಇದ್ದರು. ಪೊಲೀಸ್ ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ವಕೀಲರು ಹೇಳಿದ್ದಾರೆ.

