Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುತ್ತಪ್ಪ ರೈ ಆಸ್ತಿ ವಿವಾದ ಇತ್ಯರ್ಥ : ಎರಡನೇ ಪತ್ನಿಗೆ 100 ಕೋಟಿ ಆಸ್ತಿ

Facebook
Twitter
Telegram
WhatsApp

ಬೆಂಗಳೂರು :ಮಾಜಿ ಡಾನ್ ಮುತ್ತಪ್ಪ ರೈ ಸಾವನ್ನಪ್ಪಿದ ಬಳಿಕ ಅವರ ಆಸ್ತಿ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಅದರಲ್ಲೂ ಸಾವಿರಾರು ಕೋಟಿ ಆಸ್ತಿಯನ್ನು ಮುತ್ತಪ್ಪ ರೈ ಸಾಯುವುದಕ್ಕೂ ಮುನ್ನ ಮನೆಕೆಲಸದವರಿಗೂ ಸೇರಿ ಬರೆದಿದ್ದರು. 2019ರಲ್ಲಿ ವಕೀಲ ನಾರಾಯಣಸ್ವಾಮಿಯವರನ್ನು ವಿಲ್ ಎಕ್ಸಿಕ್ಯೂಟರ್ ಆಗಿ ನೇಮಿಸಿದ್ದರು. ಹಾಗೇ ಗೀತಾ ರಾಜ್ ಎಂಬುವವರಿಂದ ವಿಲ್ ಬರೆಸಲಾಗಿತ್ತು. 41 ಪುಟಗಳ ವಿಲ್ ಇದಾಗಿತ್ತು. ಇದರಲ್ಲಿ ಎರಡನೇ ಹೆಂಡತಿಗೂ ಆಸ್ತಿಯ ಬಗ್ಗೆ ಉಲ್ಲೇಖ ಮಾಡಲಾಗಿತ್ತು. ಇದೀಗ ಕೋರ್ಟ್ ಮುಖಾಂತರ ಮುತ್ತಪ್ಪ ರೈ ಎರಡನೇ ಹೆಂಡತಿ ಅನುರಾಧ ರೈ ಅವರಿಗೆ ಆಸ್ತಿ ಹಂಚಿಕೆಯಾಗಿದೆ.

ಮುತ್ತಪ್ಪ ರೈ ಮಕ್ಕಳಾದ ರಿಕ್ಕಿ ರೈ, ರಾಕಿ ರೈ ಅವರಿಂದ ಅನುರಾಧ ರೈ ಅವರಿಗೆ ಆಸ್ತಿ ಸಿಕ್ಕಿದೆ. ಮುತ್ತಪ್ಪ ರೈ ನಿಧನರಾದ ಬಳಿಕ ಅಂದರೆ 202ರಲ್ಲಿ ಆಸ್ತಿಗಾಗಿ ಅನುರಾಧ ರೈ ಕೋರ್ಟ್ ನಲ್ಲಿ ಧಾವೆ ಹೂಡಿದ್ದರು. ಕಾಂಪ್ರೂಮೈಸ್ ಪಿಟೀಷನ್ ಮೂಲಕ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ ರೈ ಅವರಿಗೆ ಆಸ್ತಿ ನೀಡಲಾಗಿದೆ.

ರಿಕ್ಕಿ ರೈ ಹಾಗೂ ರಾಕಿ ರೈ ಹಾಗೂ ಅನುರಾಧ ರೈ ಮೂವರ ನಡುವೆ ಕಾಂಪ್ರೂಮೈಸ್ ಮೂಲಕ ಕೊಡೊಸಿರುವ ಆಸ್ತಿ ಸುಮಾರು 100 ಕೋಟಿ ಬೆಲೆ ಬಾಳುತ್ತೆ ಎನ್ನಲಾಗಿದೆ. ಏಳು ಕೋಟಿ ಹಣ, ಮಂಡ್ಯದ ಪಾಂಡವಪುರದಲ್ಲಿ 22 ಎಕರೆ ಜಮೀನು, ಮೈಸೂರಿನಲ್ಲಿ 4,800 ಚದುರಡಿ ನಿವೇಶನ ಹಾಗೂ ನಿವೇಶನದಲ್ಲಿರುವ ಮನೆ. ನಂದಿಬೆಟ್ಟದ ಬಳಿ ಇರುವ ಕೆಂಪತಿಮ್ಮನಹಳ್ಳಿ ಬಳಿ ಇರುವ ಐದೂವರೆ ಎಕರೆ ಜಮೀನನ್ನು ಅನುರಾಧ ರೈ ಅವರಿಗೆ ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಗ್ ಬಾಸ್ ನಿಂದ ಹೊರ ಬಂದ ಮೇಲೆ ಜಗದೀಶ್ ಕ್ಷಮೆಯಾಚನೆ : ಯಾಕೆ ಗೊತ್ತಾ..?

  ಬೆಂಗಳೂರು : ಕಳೆದ ಸೀಸನ್ ನಿಂದ ಬಿಗ್ ಬಾಸ್ ರೀತಿ ನೀತಿಯೇ ಬದಲಾಗಿದೆ‌. ಮೊದಲೆಲ್ಲಾ ಬಿಗ್ ಬಾಸ್ ಮನೆಯಲ್ಲಿ ಒಂದಷ್ಟು ಭಾವನೆಗಳಿಗೂ ಜಾಗ ಇರುತ್ತಾ ಇತ್ತು. ಆದರೆ ಈಗ ಓನ್ಲಿ ಸ್ಪರ್ಧೆ. ಗೆಲ್ಬೇಕು

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

error: Content is protected !!