Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನರ ಸೇವೆಗಾಗಿಯೇ ನನ್ನ ಅಧಿಕಾರ ಮುಡುಪು : ಶಾಸಕ ಎಂ.ಚಂದ್ರಪ್ಪ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ  ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ನ.01): ರಾಷ್ಟ್ರನಾಯಕ ದಿವಂಗತ ಎಸ್.ನಿಜಲಿಂಗಪ್ಪ ಕರ್ನಾಟಕದ ಏಕೀಕರಣಕ್ಕಾಗಿ ದೊಡ್ಡ ಹೋರಾಟ ಮಾಡಿ ಕನ್ನಡ ನಾಡಿಗೆ ಗೌರವ ತಂದು ಕೊಟ್ಟಿದ್ದರಿಂದ ಇಂದು ನಾವುಗಳೆಲ್ಲಾ 67 ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತಿದ್ದೇವೆಂದು ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಹರ್ಷ ವ್ಯಕ್ತಪಡಿಸಿದರು.

ಹೊಳಲ್ಕೆರೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಉರ್ದು ಶಾಲೆ ವತಿಯಿಂದ ಮಂಗಳವಾರ ಆಚರಿಸಲಾದ 67 ನೇ ಕನ್ನಡ ರಾಜ್ಯೋತ್ಸವದಲ್ಲಿ ತಾಯಿ ಭುವನೇಶ್ವರಿ ಫೋಟೋಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಹಿಂದುಳಿದ ವರ್ಗಗಳ ಹರಿಕಾರ ಎನಿಸಿಕೊಂಡಿದ್ದ ದಿವಂಗತ ಡಿ.ದೇವರಾಜ್ ಅರಸ್‍ರವರು ಮೈಸೂರು ರಾಜ್ಯವನ್ನು ಕರ್ನಾಟಕವೆಂದು ನಾಮಕರಣ ಮಾಡಿದರು. ಹಲವಾರು ಮಹನೀಯರು ಸೇರಿ ಕಟ್ಟಿರುವ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಿರುವುದು ನಮ್ಮೆಲ್ಲರ ಭಾಗ್ಯ. ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪವರ್ ಸ್ಟಾರ್ ಪುನಿತ್‍ರಾಜ್‍ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿರುವುದು ನನಗಂತೂ ಅತ್ಯಂತ ಖುಷಿ ತಂದಿದೆ.

ಅಧಿಕಾರ ಯಾರಿಗೂ ಶಾಶ್ವತವಲ್ಲ. ಜನಪ್ರತಿನಿಧಿಗಳು ಚಿಕ್ಕವರಾಗಿರಲಿ, ದೊಡ್ಡವರಾಗಿರಲಿ ಎಲ್ಲರಿಗೂ ಸೂಕ್ತ ಸ್ಥಾನಮಾನ ಕೊಡುವುದು ಅಧಿಕಾರಿಗಳ ಕರ್ತವ್ಯ. ಸಣ್ಣಪುಟ್ಟ ಲೋಪಗಳಾಗಿದೆ. ಇನ್ನು ಮುಂದೆ ಇಂತಹ ತಪ್ಪುಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲರೂ ಈ ಮಣ್ಣಿನಲ್ಲಿ ಹುಟ್ಟಿರುವವರು. ರಾಜಕೀಯ ಮುಖ್ಯವಲ್ಲ. ಕ್ಷೇತ್ರದ ಜನರ ಹಿತಕಾಯಬೇಕೆನ್ನುವುದನ್ನು ಅರ್ಥಮಾಡಿಕೊಂಡು ಮತದಾರರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಯಾವುದೇ ರಾಜಕೀಯ ಮಾಡದೆ ಜನಸಾಮಾನ್ಯರ ಜೊತೆ ಬೆರೆತು ಜನ ಮೆಚ್ಚುವ ರೀತಿಯಲ್ಲಿ ಅತ್ಯುತ್ತಮವಾದ ಅಭಿವೃದ್ದಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದೇನೆ. ಹೊಳಲ್ಕೆರೆ ಕ್ಷೇತ್ರದಿಂದ ಗೆದ್ದು ಶಾಸಕನಾದಾಗ ಪಟ್ಟಣ ಹಳ್ಳಿಯಂತೆ ಇತ್ತು. ಉತ್ತಮ ರಸ್ತೆ, ಆಸ್ಪತ್ರೆ, ಕೆ.ಎಸ್.ಆರ್.ಟಿ.ಸಿ.ಬಸ್‍ನಿಲ್ದಾಣ, ಎ.ಪಿ.ಎಂ.ಸಿ.ಮಾರ್ಕೆಟ್, ಕಂದಾಯ ಭವನ, ಪಿ.ಯು.ಹಾಗೂ ಪ್ರಥಮ ದರ್ಜೆ ಕಾಲೇಜು ಕಟ್ಟಿಸಿ ಕಾಯಕಲ್ಪ ನೀಡಿದ್ದರಿಂದ ಈಗ ನೋಡಲು ಹೊಳಲ್ಕೆರೆ ಸುಂದರವಾಗಿ ಕಾಣುತ್ತಿದೆ.

28 ವರ್ಷಗಳ ಹಿಂದೆ ಭರಮಸಾಗರ ಕ್ಷೇತ್ರದಿಂದ ಚುನಾವಣೆಯಲ್ಲಿ ಗೆದ್ದು ಮೊದಲ ಬಾರಿಗೆ ಶಾಸಕನಾದಾಗ 386 ಹಳ್ಳಿಗಳಲ್ಲಿಯೂ ಕಾಂಕ್ರಿಟ್ ರಸ್ತೆ ಮಾಡಿಸಿದ್ದರಿಂದ ರಸ್ತೆರಾಜ ಎನ್ನುವ ಬಿರುದು ಕೊಟ್ಟು ಜನ ಎರಡನೆ ಬಾರಿಗೂ ನನ್ನನ್ನು ಗೆಲ್ಲಿಸಿದರು. ಅದಕ್ಕಾಗಿ ಜನರ ಸೇವೆಗಾಗಿಯೇ ನನ್ನ ಅಧಿಕಾರವನ್ನು ಮುಡುಪಾಗಿಡುತ್ತೇನೆಂದು ಜನತೆಗೆ ಆಶ್ವಾಸನೆ ನೀಡಿದರು.

ತಾಲ್ಲೂಕಿನಾದ್ಯಂತ ಎಲ್ಲಾ ಕೆರೆಗಳನ್ನು ಅಭಿವೃದ್ದಿಪಡಿಸಿ ಚೆಕ್‍ಡ್ಯಾಂಗಳನ್ನು ಕಟ್ಟಿಸಿದ್ದೇನೆ. ಗಣಪತಿ ದೇವಸ್ಥಾನಕ್ಕೆ ಹೋಗುವ ರಸ್ತೆ ಅಗಲೀಕರಣವಾಗಿಸಿದ್ದರಿಂದ ಸಂಚಾರ ದಟ್ಟಣೆ ಇಲ್ಲದಂತಾಗಿದೆ. ಊರಿನ ಗಲೀಜೆಲ್ಲಾ ಸೇರುತ್ತಿದ್ದ ಹೊಳಲ್ಕೆರೆ ಪಟ್ಟಣದ ಹೊಸದುರ್ಗ ರಸ್ತೆಯಲ್ಲಿನ ಕೆರೆಯನ್ನು ಸ್ವಚ್ಚಗೊಳಿಸಿದ್ದೇನೆ ಎಂದು ಹೇಳಿದರು.

ಪುರಸಭೆ ಅಧ್ಯಕ್ಷ ಆರ್.ಎ.ಅಶೋಕ್, ಉಪಾಧ್ಯಕ್ಷ ಕೆ.ಸಿ.ರಮೇಶ್, ಸರ್ಕಾರಿ ನೌಕರರ ಸಂಘದ ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಲೋಕೇಶ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಶಿವಮೂರ್ತಿ, ಹೊಳಲ್ಕೆರೆ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಪಿ.ಹನುಮಂತಪ್ಪ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಕುಬೇರಪ್ಪ, ತಹಶೀಲ್ದಾರ್ ಶ್ರೀಮತಿ ರೇಖಾ ಟಿ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಂಜನ್‍ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಶ್ರೀನಿವಾಸ್, ವಿವಿಧ ಕನ್ನಡಪರ ಸಂಘಟನೆಗಳು ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Vastu Tips : ಮನೆಯಲ್ಲಿ ಗಡಿಯಾರವನ್ನು ಯಾವ ದಿಕ್ಕಿಗೆ ಇಟ್ಟರೆ ಒಳ್ಳೆಯದು ಗೊತ್ತಾ ?

ಸುದ್ದಿಒನ್ : ವಾಸ್ತು ಎಂದರೆ ಮನೆಗೆ ಮಾತ್ರವಲ್ಲದೇ ಮನೆಯಲ್ಲಿ ಇರುವ  ವಸ್ತುಗಳಿಗೂ ಕೂಡ ಅನ್ವಯಿಸುತ್ತದೆ.  ವಸ್ತುಗಳನ್ನು ಇರಿಸುವ ದಿಕ್ಕನ್ನು ಅವಲಂಬಿಸಿ, ಮನೆಗೆ ನಷ್ಟ ಮತ್ತು ಲಾಭವನ್ನು ಅಂದಾಜಿಸುತ್ತಾರೆ. ವಾಸ್ತು ಪ್ರಕಾರ, ಅನೇಕ ರೀತಿಯ ವಸ್ತುಗಳನ್ನು

ದಿನಕ್ಕೆ 2 ಬಾರಿ ಈ ಪಾನೀಯವನ್ನು ಕುಡಿದರೆ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ…!

ಸುದ್ದಿಒನ್ : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಧಿಕ ದೇಹದ ತೂಕದ ಬಗ್ಗೆ ಚಿಂತಿಸುತ್ತಿದ್ದಾರೆ. ತೂಕವು ನಿಯಂತ್ರಣದಲ್ಲಿದ್ದರೂ, ಜನರು ಸಾಮಾನ್ಯವಾಗಿ ಬೊಜ್ಜಿನ ಬಗ್ಗೆ ಚಿಂತಿಸುತ್ತಾರೆ. ಅಧಿಕ ತೂಕ ಅಥವಾ ಸ್ಥೂಲಕಾಯತೆಯು ಅಸಹ್ಯವಾಗಿ ಕಾಣುವುದಲ್ಲದೆ, ನಡೆಯಲು ಕಷ್ಟವಾಗುತ್ತದೆ.

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….   ಬುಧವಾರ ರಾಶಿ ಭವಿಷ್ಯ -ಮೇ-8,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರಮಾಸ,

error: Content is protected !!