Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

2028ರ ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರು ಇದೆ : ಆರ್. ಅಶೋಕ್

---Advertisement---

ಮಂಡ್ಯ: 2028ರ ಚುನಾವಣೆಗೆ ಪಕ್ಷಗಳು ಈಗಿಂದಲೇ ಒಂದಷ್ಟು ಪ್ಲ್ಯಾನ್ ಗಳನ್ನ ಮಾಡಿಕೊಳ್ತಿವೆ. ಅದರಲ್ಲೂ ಬಿಜೆಪಿಯಲ್ಲಿ ಜೆಡಿಎಸ್ ಕೂಡ ಮಿಕ್ಸ್ ಆಗಿದೆ. ಹೀಗಾಗಿ ಸಿಎಂ ಸ್ಥಾನದ ಆಕಾಂಕ್ಷಿ ಕುಮಾರಸ್ವಾಮಿ ಅವರು ಕೂಡ ಆಗಿರ್ತಾರೆ. ಇನ್ನು ಬಿಜೆಪಿಯಲ್ಲೂ ಸಿಎಂ ಆಕಾಂಕ್ಷಿಗಳು ಸಾಕಷ್ಟು ಜನ ಇದ್ದಾರೆ. ಇದೇ ವಿಚಾರಕ್ಕೆ ಇಂದು ವಿಪಕ್ಷ ನಾಯಕ ಆರ್ ಅಶೋಕ್ ಮಾತನ್ನಾಡಿದ್ದಾರೆ. ನಾಳೆ ಪ್ರಧಾನಿ ಮೋದಿ ಅವರು ಆದಿ ಚುಂಚನಗಿರಿಗೆ ಬರ್ತಾ ಇರೋ ಕಾರಣ ಅಲ್ಲಿನ ಸಿದ್ಧತೆಗಳನ್ನ ನೋಡೋದಕ್ಕೆ ಹೋಗಿದ್ದರು. ಈ ವೇಳೆ ಆ ಬಗ್ಗೆ ಮಾತನ್ನಾಡಿದ್ದಾರೆ.

2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ನಮಗೆ ಅಧಿಕಾರಕ್ಕೆ ಬರುವುದು ಮುಖ್ಯವೇ ವಿನಃ ಸಿಎಂ ಯಾರಾಗಬೇಕು ಎಂಬುದು ಮುಖ್ಯವಲ್ಲ. ನಮ್ಮಲ್ಲೂ ಮುಖ್ಯಮಂತ್ರಿ ಆಕಾಂಕ್ಷಿಗಳು ತುಂಬಾ ಜನರಿದ್ದಾರೆ. 2028ಕ್ಕೆ ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರಲಿದೆ. ಇದರಲ್ಲಿ ಯಾವ ಅನುಮಾನವೂ ಇಲ್ಲ.

ಸಂಸತ್ತಿನಲ್ಲೂ ಜೆಡಿಎಸ್ ಗೆ ಮೂರ್ನಾಲ್ಕು ಸ್ಥಾನಗಳನ್ನ ನೀಡಲಾಗಿದೆ. ಅದೇ ರೀತಿ ರಾಜ್ಯದಲ್ಲೂ ಮೈತ್ರಿ ಮುಂದುವರೆಯಲಿದೆ. ಸಿಎಂ ಯಾರಾಗಬೇಕು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ಅಧ್ಯಕ್ಷ ನಿತಿನ್ ನಬೀನ್ ನಿರ್ಧಾರ ಮಾಡ್ತಾರೆ. ನನ್ನನ್ನೂ ಸೇರಿದಂತೆ ಈಗಾಗಲೇ 10 ಮಂದೊಯ ಹೆಸರುಗಳು ಕೇಳಿ ಬಂದಿದೆ. ನಮಗೆ ಅಧಿಕಾರಕ್ಕೆ ಬರುವುದೇ ಮುಖ್ಯ. ಜೊತೆಗೆ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಸರ್ಕಾರ ತೊಲಗುವುದು ಅಷ್ಟೇ ಮುಖ್ಯ ಎಂಬ ಮಾತನ್ನ ಆರ್ ಅಶೋಕ್ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...