Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನ ಪಾತ್ರವೇ ಇಲ್ಲ ಸಿದ್ದರಾಮಯ್ಯರ ಪಾತ್ರ ಹೇಗೆ ಬರುತ್ತದೆ..? ತನಿಖೆಯ ಅನುಭವ ಹಂಚಿಕೊಂಡ ನಾಗೇಂದ್ರ..!

Facebook
Twitter
Telegram
WhatsApp

 

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರು ಜೈಲು ಸೇರಿದ್ದರು. ನಿನ್ನೆಯಷ್ಟೇ ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ. ಜೈಲಿನಿಂದ ಬಿಡುಗಡೆಯಾದ ಬಳಿಕ ಮಾತನಾಡಿದ್ದು, ತನಿಖೆಯ ವೇಳೆ ಆಗಿದ್ದನ್ನು ನೆನೆದಿದ್ದಾರೆ. ಷರತ್ತು ಬದ್ಧ ಜಾಮೀನು ಪಡೆದು ಈಗ ಹೊರ ಬಂದಿದ್ದಾರೆ.

ನಾಗೇಂದ್ರ ಅವರು ಮಾತನಾಡಿ, ಇಡಿ ಅಧಿಕಾರಿಗಳು ಸಂಚು ರೂಪಿಸಿ ನನ್ನನ್ನು ಬಂಧಿಸಿದ್ದರು. ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಹೇಳುವಂತೆ ಒತ್ತಾಯಿಸಿದರು. ಕಿರುಕುಳವನ್ನು ನೀಡಿದರು. ಅವರನ್ನು ಬಂಧನ ಮಾಡುವ ಸಲುವಾಗಿ ಈ ರೀತಿ ಮಾಡಲಾಗಿದೆ. ಅದರಲ್ಲಿ ನನ್ನ ಪಾತ್ರವೇ ಇಲ್ಲ. ಸಿದ್ದರಾಮಯ್ಯ ಅವರ ಪಾತ್ರ ಹೇಗೆ ಬರುತ್ತದೆ. ಮುಂದಿನ ದಿನಗಳಲ್ಲಿ ಈ ಕುರಿತು ಕಾನೂನು ಹೋರಾಟ ಮಾಡುತ್ತೇನೆ. ನ್ಯಾಯಾಲಯಕ್ಕೆ ನಾನು ಧನ್ಯವಾದ ಹೇಳುತ್ತೇನೆ.

ನ್ಯಾಯಾಲಯ ಸದ್ಯ ನನಗೆ ಜಾಮೀನು ಮಂಜೂರು ಮಾಡಿದೆ. ಇದಕ್ಕೆ ನಾನು ಧನ್ಯ. ಸಚಿವ ಸ್ಥಾನ ನೀಡುವುದು ಬಿಡುವುದು ಕಾಂಗ್ರೆಸ್ ಹೈಕಮಾಂಡ್ ಗೆ ಬಿಟ್ಟ ಬಿಟ್ಟ ವಿಚಾರ ಎಂದಿದ್ದಾರೆ. ಇನ್ನು ವಾಲ್ಮೀಕಿ ಹಗರಣ ಬೆಳಕಿಗೆ ಬಂದಾಗ ಇಡೀ ರಾಜ್ಯವೇ ಶಾಕ್ ಆಗಿತ್ತು. ನೂರಾರು ಕೋಟಿ ಹಗರಣ ಇದಾಗಿತ್ತು. ಇದರಲ್ಲಿ ಸಚಿವರಾಗಿದ್ದ ನಾಗೇಂದ್ರ ಅವರ ಪಾತ್ರವೂ ಇದೆ ಎನ್ನಲಾಗಿತ್ತು. ಆಗ ತಮ್ಮ ಸಚಿವ ಸ್ಥಾನಕ್ಕೆ ನಾಗೇಂದ್ರ ಅವರು ರಾಜೀನಾಮೆಯನ್ನು ನೀಡಿದ್ದರು. ಬಳಿಕ ರಾಜ್ಯ ಸರ್ಕಾರ ಲೋಕಾಯುಕ್ತರನ್ನು ನೇಮಿಸಲಾಗಿತ್ತು. ಬಳಿಕ ಇಡಿ ಕೂಡ ಇದರ ಮಧ್ಯ ಪ್ರವೇಶಿಸಿ, ತನಿಖೆ ಶುರು ಮಾಡಿತ್ತು. ಇಬ್ಬರು ಕೂಡ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಸದ್ಯ ನಾಗೇಂದ್ರ ಅವರು ಜಾಮೀನು ಪಡೆದು ಹೊರ ಬಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!