ಈಚೆಗಂತೂ ಪ್ರಬಲ ಭೂಕಂಪದಿಂದಾಗಿ ಹಲವು ದೇಶಗಳು ನಲುಗುತ್ತಿವೆ. ಇದೀಗ ಮಯನ್ಮಾರ್ ಹಾಗೂ ಥೈಲ್ಯಾಂಡ್ ನಲ್ಲೂ ಭೂಕಂಪನವಾಗಿದೆ. ಈ ಎರಡು ದೇಶಗಳ ನಡುವೆ 735 ಮೈಲಿಯಷ್ಟು ಅಂತರವಿದೆ. ಪ್ರಬಲ ಭೂಕಂಪನದಿಂದ ಸಾವಿನ ಸಂಖ್ಯೆ ಹೆಚ್ಚುತ್ತಲೆ ಇದೆ. ಸದ್ಯದ ಮಾಹಿತಿಯ ಪ್ರಕಾರ ಸಾವಿನ ಸಂಖ್ಯೆ ಸಾವಿರಕ್ಕೂ ಅಧಿಕವಾಗಿದೆ. ಅದರಲ್ಲೂ ಮಯನ್ಮಾರ್ ಗಿಂತಲೂ ಥೈಲ್ಯಾಂಡ್ ನಲ್ಲಿ ಸಂಭವಿಸಿದ ಭೂಕಂಪಕ್ಕೆ ಅಧಿಕ ಅನಾಹುತ ನಡೆದಿದೆ. ಇಲ್ಲಿ ಅವಶೇಷಗಳಡಿ ಸಿಲುಕಿದ್ದವರ ಶವಗಳು ಸಿಕ್ಕಿದ್ದರಿಂದ ಸಾವು – ನೋವಿನ ಸಂಖ್ಯೆ ದಿಢೀರನೇ ಏರಿಕೆಯಾಗಿದೆ.
ಅದರಲ್ಲೂ ಗಾಯಾಳುಗಳಿಗೆ ರಕ್ತದ ಅನಿವಾರ್ಯತೆ ಇರುವ ಕಾರಣ ರಕ್ತ ದಾನ ಮಾಡುವಂತೆ ಮನವಿ ಮಾಡಿದ್ದಾರೆ. ಬದುಕುಳಿದವರ ಚಿಜಿತ್ಸೆಗೆ ಭಾರತ 15 ಟನ್ ರಕ್ಷಣಾ ಸಾಮಗ್ರಿಯನ್ನು ಈಗಾಗಲೇ ಕಳುಹಿಸಿಕೊಡಲಾಗಿದೆ. ಅಲ್ಲಿನವರ ರಕ್ಷಣೆಗೆ ಭಾರತ ಕೂಡ ಜೊತೆಯಾಗಿ ನಿಂತಿದೆ. ಇದರ ನಡುವೆ ಅಲ್ಲಿರುವ ಕನ್ನಡಿಗರದ್ದೇ ಚಿಂತೆಯಾಗಿದೆ. ಆದರೆ ಕನ್ನಡಿಗರಿಗೆ ಏನು ಸಮಸ್ಯೆ ಆಗಿಲ್ಲ ಎಂಬ ಭರವಸೆಯನ್ನು ಸರ್ಕಾರ ನೀಡಿದೆ.
ಪ್ರಬಲ ಭೂಕಂಪದ ಮಧ್ಯೆ ಬ್ಯಾಂಕಾಕ್ ಗೆ ತೆರಳಿದ್ದ ಕನ್ನಡಿಗರು ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ. ಎಂಎಲ್ಸಿ ಮರಿತಿಬ್ಬೆಗೌಡ ಮಗಳು, ಅಳಿಯ ಮತ್ತು ಮೊಮ್ಮಗ ಕಳೆದ ಮೂರು ದಿನಗಳ ಹಿಂದೆ ಬ್ಯಾಂಕಾಕ್ ಪ್ರವಾಸಕ್ಕೆಂದು ಹೋಗಿದ್ದರು. ಸದ್ಯ ಸುರಕ್ಷಿತವಾಗಿ ವಾಪಾಸ್ ಬಂದಿದ್ದಾರೆ. ಇನ್ನು ಕೆಲವು ಕನ್ನಡಿಗರು ಸೇಫ್ ಆಗಿದ್ದಾರೆ ಎಂಬ ಮಾಹಿತಿ ರಾಜ್ಯ ಸರ್ಕಾರಕ್ಕಿದೆ. ಯಾರಿಗೂ ತೊಂದರೆಯಾಗಿರುವ ಮಾಹಿತಿ ಬಂದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಯನ್ಮಾರ್ ಹಾಗೂ ಥೈಲ್ಯಾಂಡ್ ನ ಭೂಕಂಪದ ಬಗ್ಗೆ ಗೃಹ ಸಚಿವರು ಕೂಡ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಸುದ್ದಿಒನ್ : ಖರ್ಜೂರ ತಿನ್ನುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಆದರೆ, ಇದರಿಂದ ಕೇವಲ ಪ್ರಯೋಜನಗಳು ಮಾತ್ರ ಇದೆ ಎಂದು ನೀವು…
ಈ ರಾಶಿಯವರಿಗೆ ಲೇಟ್ ಆದರೂ ಪರವಾಗಿಲ್ಲ ಒಳ್ಳೆ ಸಂಗಾತಿ ಸಿಗುವರು, ಈ ರಾಶಿಯ ದಂಪತಿಗಳಿಗೆ ಸಂತಾನ ಫಲ, ಬುಧವಾರದ ರಾಶಿ…
ಬೆಂಗಳೂರು; ಇಂದಿನಿಂದ ರಾಜ್ಯದಲ್ಲಿ ಹಲವು ಬದಲಾವಣೆಗಳು ಆಗಿವೆ. ಹಲವು ವಸ್ತುಗಳ ದರ ಏರಿಕೆಯೂ ಆಗಿದೆ. ಇದರ ಬೆನ್ನಲ್ಲೇ ಡಿಸೇಲ್ ದರವೂ…
ಬಳ್ಳಾರಿ,ಏ.01 : ಬಳ್ಳಾರಿ ತಾಲ್ಲೂಕಿನ ಕೊಳಗಲ್ ಗ್ರಾಮದಲ್ಲಿ ಏ.04 ರಂದು ನಡೆಯುವ ಶ್ರೀ ಸದ್ಗುರು ಎರ್ರಿತಾತನವರ ವಾರ್ಷಿಕ ಜಾತ್ರೆ/ರಥೋತ್ಸವವನ್ನು ಕರ್ನಾಟಕ…
ಚಿತ್ರದುರ್ಗ.ಎಪ್ರಿಲ್.01: ಮುಂಬರುವ ಅಂಬೇಡ್ಕರ್ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಿಲು ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ…
ಸುದ್ದಿಒನ್ : ಮಂಗಳವಾರ ಭಾರತದಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯನ್ನು ತಲುಪಿದೆ. ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ (ಎಂಸಿಎಕ್ಸ್) ನಲ್ಲಿ ಚಿನ್ನದ…