Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮೈಲಾರ ಕಾರ್ಣಿಕ ನಿಜವಾಯಿತು : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿಯಿತು : ಅಂದಿನ ಭವಿಷ್ಯವೇನಿತ್ತು..?

---Advertisement---

 

 

ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಸರ್ಕಾರವನ್ನು ರಚನೆ ಮಾಡುತ್ತೆ. ಆದರೆ ಈ ಬಾರಿಯ ಸರ್ಕಾರ ರಚನೆ ಬಗ್ಗೆ ನುಡಿದ ಕಾರ್ಣಿಕ ನಿಜವಾಗಿದೆ. ಈ ಹಿಂದೆ ಸಾಕಷ್ಟು ಜ್ಯೋತಿಷಿಗಳು ಸರ್ಕಾರ ರಚನೆ ಬಗ್ಗೆ ಹಲವು ರೀತಿಯಲ್ಲಿ ಭವಿಷ್ಯ ನುಡಿದಿದ್ದರು. ಇದೀಗ ಮೈಲಾರಲಿಂಗ ಕಾರ್ಣಿಕ ನುಡಿದಿದ್ದ ಭವಿಷ್ಯ ನಿಜವಾಗಿದೆ.

ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಮೇ 20ರಂದು ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೋಡಿಮಠದ ಶ್ರೀಗಳು ಕೂಡ ರಾಜ್ಯ ರಾಜಕೀಯದ ಬಗ್ಗೆ ಭವಿಷ್ಯ ನುಡಿದಿದ್ದರು. ಹಲವು ದೊಡ್ಡ ತಲೆಗಳು ಉರುಳಲಿವೆ, ಪಕ್ಷಾಂತರ ನಡೆಯಲಿವೆ, ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದರು‌‌. ಅವರ ಭವಿಷ್ಯವೂ ಕೂಡ ಬಹುತೇಕ ಸತ್ಯವಾಗಿದೆ.

ಮೈಲಾಲಿಂಗೇಶ್ವರ ಕಾರ್ಣಿಕ ಕೂಡ ಭವಿಷ್ಯ ನುಡಿದಿದ್ದರು. ಒಂದೇ ಸಾಲಿನಲ್ಲಿ ಕಾರ್ಣಿಕವನ್ನು ನುಡಿದರೂ ಸಹ ಅದು ಅರ್ಥವಾಗುವುದಿಲ್ಲ. ಆದರೆ ಅಲ್ಲಿ‌ನ ಹಿರಿಯರೇ ಅದರ ಅರ್ಥವನ್ನು ಹೇಳುತ್ತಾರೆ. ಈ ಬಾರಿ ಗೊರವಯ್ಯ ರಾಮಪ್ಪಜ್ಜ 11 ದಿನಗಳ ಕಾಲ ಉಪವಾಸವಿದ್ದು, 14 ಅಡಿ ಎತ್ತರದ ಮೈಲಾರದ ಡಂಕಣಮರಡಿಯಲ್ಲಿ ಬಿಲ್ಲನ್ನೇರಿ ಕಾರ್ಣಿಕ ನುಡಿದಿದ್ದರು. ಒಂದೇ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಪ್ರಾಮಾಣಿಕವಾಗಿ, ನಿಷ್ಠೆಯಿಂದ ಇರುವ ವ್ಯಕ್ತಿಯೂ ರಾಜ್ಯವನ್ನಾಳುತ್ತಾನೆ‌ ಎಂದು ಕಾರ್ಣಿಕ ನುಡಿದಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment