Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೈಲಾರ ಕಾರ್ಣಿಕ ನಿಜವಾಯಿತು : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿಯಿತು : ಅಂದಿನ ಭವಿಷ್ಯವೇನಿತ್ತು..?

Facebook
Twitter
Telegram
WhatsApp

 

 

ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಸರ್ಕಾರವನ್ನು ರಚನೆ ಮಾಡುತ್ತೆ. ಆದರೆ ಈ ಬಾರಿಯ ಸರ್ಕಾರ ರಚನೆ ಬಗ್ಗೆ ನುಡಿದ ಕಾರ್ಣಿಕ ನಿಜವಾಗಿದೆ. ಈ ಹಿಂದೆ ಸಾಕಷ್ಟು ಜ್ಯೋತಿಷಿಗಳು ಸರ್ಕಾರ ರಚನೆ ಬಗ್ಗೆ ಹಲವು ರೀತಿಯಲ್ಲಿ ಭವಿಷ್ಯ ನುಡಿದಿದ್ದರು. ಇದೀಗ ಮೈಲಾರಲಿಂಗ ಕಾರ್ಣಿಕ ನುಡಿದಿದ್ದ ಭವಿಷ್ಯ ನಿಜವಾಗಿದೆ.

ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಮೇ 20ರಂದು ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೋಡಿಮಠದ ಶ್ರೀಗಳು ಕೂಡ ರಾಜ್ಯ ರಾಜಕೀಯದ ಬಗ್ಗೆ ಭವಿಷ್ಯ ನುಡಿದಿದ್ದರು. ಹಲವು ದೊಡ್ಡ ತಲೆಗಳು ಉರುಳಲಿವೆ, ಪಕ್ಷಾಂತರ ನಡೆಯಲಿವೆ, ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದರು‌‌. ಅವರ ಭವಿಷ್ಯವೂ ಕೂಡ ಬಹುತೇಕ ಸತ್ಯವಾಗಿದೆ.

ಮೈಲಾಲಿಂಗೇಶ್ವರ ಕಾರ್ಣಿಕ ಕೂಡ ಭವಿಷ್ಯ ನುಡಿದಿದ್ದರು. ಒಂದೇ ಸಾಲಿನಲ್ಲಿ ಕಾರ್ಣಿಕವನ್ನು ನುಡಿದರೂ ಸಹ ಅದು ಅರ್ಥವಾಗುವುದಿಲ್ಲ. ಆದರೆ ಅಲ್ಲಿ‌ನ ಹಿರಿಯರೇ ಅದರ ಅರ್ಥವನ್ನು ಹೇಳುತ್ತಾರೆ. ಈ ಬಾರಿ ಗೊರವಯ್ಯ ರಾಮಪ್ಪಜ್ಜ 11 ದಿನಗಳ ಕಾಲ ಉಪವಾಸವಿದ್ದು, 14 ಅಡಿ ಎತ್ತರದ ಮೈಲಾರದ ಡಂಕಣಮರಡಿಯಲ್ಲಿ ಬಿಲ್ಲನ್ನೇರಿ ಕಾರ್ಣಿಕ ನುಡಿದಿದ್ದರು. ಒಂದೇ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಪ್ರಾಮಾಣಿಕವಾಗಿ, ನಿಷ್ಠೆಯಿಂದ ಇರುವ ವ್ಯಕ್ತಿಯೂ ರಾಜ್ಯವನ್ನಾಳುತ್ತಾನೆ‌ ಎಂದು ಕಾರ್ಣಿಕ ನುಡಿದಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!