Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ : ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ..?

---Advertisement---

 

ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಅಂಬಾರಿ ಮೇಲೆ ನಾಡ ಅಧಿದೇವತೆಯನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಅದ್ದೂರಿ ಆಚರಣೆಗಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಬರದ ಸಿದ್ಧತೆ ಮಾಡಿಕೊಂಡಿದೆ. ದಸರಾ ಕಾರ್ಯಕ್ರಮ ಹೇಗೆಲ್ಲಾ ನಡೆಯಲಿದೆ ಎಂಬುದರ ಕುರಿತು ಜಿಲ್ಲಾಡಳಿತ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅಕ್ಟೋಬರ್ 3 ರಂದು ಕಾರ್ಯಕ್ರಮ ಶುರುವಾಗಲಿದೆ‌. ಚಾಮುಂಡಿ ಬೆಟ್ಟದಲ್ಲಿ ಅಂದು ಬೆಳಗ್ಗೆ 9.15ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಮೈಸೂರು ದಸರಾಗೆ ಚಾಲನೆ ಸಿಗಲಿದೆ. ಸಾಹಿತಿ ಹಂಪ ನಾಗರಾಜಯ್ಯ ಅವರು ದಸರಾವನ್ನು ಉದ್ಘಾಟನೆ ಮಾಡಲಿದ್ದಾರೆ. ಇನ್ನು ಅಕ್ಟೋಬರ್ 3 ರಿಂದ 11ರ ವರೆಗೂ ಖಾಸಗಿ ದರ್ಬಾರ್ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ‌.

ಮಧ್ಯಾಹ್ನ 1.41ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ‌ಧ್ವಜ ಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ. ಅಂದು ಸಂಜೆ 7 ಗಂಟೆಗೆ ಬನ್ನಿ ಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತ್ ಅನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ.

ಈಗಾಗಲೇ ಯುವ ದಸರಾ ಕಾರ್ಯಕ್ರಮ ನಡೆಯುತ್ತಿದ್ದು, ಪ್ರತಿದಿನ ಸಂಜೆ 5 ಗಂಟೆಗೆ ಕಾರ್ಯಕ್ರಮಗಳು ಪ್ರಾರಂಭವಾಗುತ್ತವೆ. ಈ ಬಾರಿಯ ದಸರಾವನ್ನು ಅದ್ದೂರಿಯಾಗಿ‌ ನಡೆಸಲು ಈಗಾಗಲೇ ಸರ್ಕಾರ ಪ್ಲ್ಯಾನ್ ಹಾಕಿಕೊಂಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment