Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಧಾರವಾಡ ಹೊರವಲಯದಲ್ಲಿ ಬೌದ್ಧ ಸನ್ಯಾಸಿ ರಹಸ್ಯ ಮರಣ: ತನಿಖೆಯಲ್ಲಿ ಕೊಲೆ ಸತ್ಯ ಬಯಲು

---Advertisement---

ಧಾರವಾಡ ನಗರದ ಹೊರವಲಯದಲ್ಲಿ ಟಿಬೆಟಿಯನ್ ಮೂಲದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಸಂಚಲನ ಮೂಡಿಸಿದೆ. ಹಳಿಯಾಳ ರಸ್ತೆಯಲ್ಲಿ ತಾಶಿ ಧೋಂಡು (39) ಎಂಬ ಬೌದ್ಧ ಸನ್ಯಾಸಿಯ ಮೃತದೇಹ ಪತ್ತೆಯಾಗಿದ್ದು, ಪ್ರಾಥಮಿಕವಾಗಿ ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿತ್ತು.ರಸ್ತೆ ಪಕ್ಕದಲ್ಲಿ ಶವ ಕಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಮೊದಲಿಗೆ ರಸ್ತೆ ಅಪಘಾತವೆಂದು ಭಾವಿಸಿದ್ದರು. ಆದರೆ, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಪರಿಶೀಲನೆ ನಡೆಸಿದ ಬಳಿಕ ಇದು ಕೊಲೆ ಪ್ರಕರಣ ಎಂದು ದೃಢಪಟ್ಟಿದೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ನಿವಾಸಿಯಾಗಿದ್ದ ತಾಶಿ ಧೋಂಡು ಅವರನ್ನು ಬೇರೆಡೆ ಕೊಲೆ ಮಾಡಿ, ನಂತರ ಧಾರವಾಡ ಹೊರವಲಯದ ಹಳಿಯಾಳ ರಸ್ತೆಗೆ ಶವವನ್ನು ತಂದು ಎಸೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ತೀವ್ರಗೊಳಿಸಲಾಗಿದೆ.

ಕೊಲೆಯ ಹಿಂದಿನ ಉದ್ದೇಶ ಏನು? ಇದರಲ್ಲಿ ಭಾಗಿಯಾಗಿರುವವರು ಯಾರು? ಮೃತ ಸನ್ಯಾಸಿಯ ಹಿನ್ನೆಲೆ ಏನು? ಎಂಬ ಹಲವು ಪ್ರಶ್ನೆಗಳ ಉತ್ತರ ಹುಡುಕಲು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಈ ಘಟನೆ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...