Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರಿ ಕಲಾ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿ ಜೀವನ ಮೆಲುಕು ಹಾಕಿದ ಎನ್. ರವಿಕುಮಾರ್

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜನವರಿ.11 : ಇಂದು ನಗರಕ್ಕೆ ಆಗಮಿಸಿದ್ದ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಎನ್. ರವಿಕುಮಾರ್
ಸರ್ಕಾರಿ ಕಲಾ ಕಾಲೇಜಿಗೆ ಭೇಟಿ ನೀಡಿ ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿ ಭಾವುಕ ಕ್ಷಣಗಳಿಗೆ ಸಾಕ್ಷಿಯಾದರು.

ಕಾಲೇಜಿಗೆ ಭೇಟಿ ನೀಡಿದ ಅವರು ನಾನು ಈ ಕಾಲೇಜಿನಲ್ಲಿ
ಪಿ.ಯು.ಸಿ ಮತ್ತು ಪದವಿ ಅಧ್ಯಯನ ಮಾಡಿದ್ದೆ ಎಂದು ತಮ್ಮ ವಿದ್ಯಾರ್ಥಿಯಾಗಿದ್ದ ದಿನಗಳನ್ನು ಮೆಲುಕು ಹಾಕಿ ಭಾವುಕರಾದರು. ವಿದ್ಯಾರ್ಥಿ ದಿಸೆಯಲ್ಲಿ ಕಾಲೇಜು, ಅಂದಿನ ವಿಧ್ಯಾರ್ಥಿ ಜೀವನ, ಸ್ನೇಹಿತರ ಬಗ್ಗೆ ಮತ್ತು ಅಂದು ಕಾಲೇಜಿನ ಪ್ರಾಂಶುಪಾಲರಾಗಿದ್ದ  ಪ್ರೊ.ಹೂವಯ್ಯ ಗೌಡ ಅವರ ಆಡಳಿತ ದ ಬಗ್ಗೆ ಮೆಲುಕು ಹಾಕಿದರು. ನಾನು ಕಲಿತ ಈ ಕಾಲೇಜಿಗೆ ಶಾಶ್ವತವಾಗಿ ಉಳಿಯುವ ಕೆಲಸ ಮಾಡಲು ನಾನು ಸಿದ್ದನಿದ್ದೇನೆ. ಕಾಲೇಜಿಗೆ ಆಗಬೇಕಾದ ಕೆಲಸಗಳ ಬಗ್ಗೆ ತಿಳಿಸಿ ಎಂದು ಪ್ರಾಂಶುಪಾಲರಿಗೆ ತಿಳಿಸಿದರು. ಈ ವೇಳೆ ಅವರನ್ನು ಕಾಲೇಜು ಆಡಳಿತ ಮಂಡಳಿಯವರು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಪ್ರೊ. ಬಿ.ಟಿ. ತಿಪ್ಪೇರುದ್ರಸ್ವಾಮಿ, ಜಿ.ಎಸ್.ಅನಿತ್ ಕುಮಾರ್, ಬಿಜೆಪಿ ಮುಖಂಡರು, ಡಾ.ಸ.ರಾ.ಲೇಪಾಕ್ಷ, ಪ್ರೊ.ಎಲ್.ನಾಗರಾಜಪ್ಪ,ಅಧ್ಯಾಪಕರ ಸಂಘದ ಕಾರ್ಯದರ್ಶಿ, ಮಲ್ಲಿಕಾರ್ಜುನ, ವಕೀಲರು, ನರೇಂದ್ರ, ಹನುಮಂತೆ ಗೌಡ,ಚಂದ್ರಶೇಖರ್, ಪವನ್, ಮಾಜಿ ಸಿಂಡಿಕೇಟ್ ಸದಸ್ಯರು, ಆದರ್ಶ, ಜಯಪಾಲಯ್ಯ, ರವಿ, ಕಿರಣ್, ಹಾಗೂ ಕಾಲೇಜಿನ ಅಧ್ಯಾಪಕರು ಹಾಗೂ ಭೋದಕೆತರ ಸಿಬ್ಬಂದಿ ಹಾಗೂ ಮುಖಂಡರು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!