Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಕಲಾ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿ ಜೀವನ ಮೆಲುಕು ಹಾಕಿದ ಎನ್. ರವಿಕುಮಾರ್

---Advertisement---

 

ಸುದ್ದಿಒನ್, ಚಿತ್ರದುರ್ಗ, ಜನವರಿ.11 : ಇಂದು ನಗರಕ್ಕೆ ಆಗಮಿಸಿದ್ದ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಎನ್. ರವಿಕುಮಾರ್
ಸರ್ಕಾರಿ ಕಲಾ ಕಾಲೇಜಿಗೆ ಭೇಟಿ ನೀಡಿ ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿ ಭಾವುಕ ಕ್ಷಣಗಳಿಗೆ ಸಾಕ್ಷಿಯಾದರು.

ಕಾಲೇಜಿಗೆ ಭೇಟಿ ನೀಡಿದ ಅವರು ನಾನು ಈ ಕಾಲೇಜಿನಲ್ಲಿ
ಪಿ.ಯು.ಸಿ ಮತ್ತು ಪದವಿ ಅಧ್ಯಯನ ಮಾಡಿದ್ದೆ ಎಂದು ತಮ್ಮ ವಿದ್ಯಾರ್ಥಿಯಾಗಿದ್ದ ದಿನಗಳನ್ನು ಮೆಲುಕು ಹಾಕಿ ಭಾವುಕರಾದರು. ವಿದ್ಯಾರ್ಥಿ ದಿಸೆಯಲ್ಲಿ ಕಾಲೇಜು, ಅಂದಿನ ವಿಧ್ಯಾರ್ಥಿ ಜೀವನ, ಸ್ನೇಹಿತರ ಬಗ್ಗೆ ಮತ್ತು ಅಂದು ಕಾಲೇಜಿನ ಪ್ರಾಂಶುಪಾಲರಾಗಿದ್ದ  ಪ್ರೊ.ಹೂವಯ್ಯ ಗೌಡ ಅವರ ಆಡಳಿತ ದ ಬಗ್ಗೆ ಮೆಲುಕು ಹಾಕಿದರು. ನಾನು ಕಲಿತ ಈ ಕಾಲೇಜಿಗೆ ಶಾಶ್ವತವಾಗಿ ಉಳಿಯುವ ಕೆಲಸ ಮಾಡಲು ನಾನು ಸಿದ್ದನಿದ್ದೇನೆ. ಕಾಲೇಜಿಗೆ ಆಗಬೇಕಾದ ಕೆಲಸಗಳ ಬಗ್ಗೆ ತಿಳಿಸಿ ಎಂದು ಪ್ರಾಂಶುಪಾಲರಿಗೆ ತಿಳಿಸಿದರು. ಈ ವೇಳೆ ಅವರನ್ನು ಕಾಲೇಜು ಆಡಳಿತ ಮಂಡಳಿಯವರು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಪ್ರೊ. ಬಿ.ಟಿ. ತಿಪ್ಪೇರುದ್ರಸ್ವಾಮಿ, ಜಿ.ಎಸ್.ಅನಿತ್ ಕುಮಾರ್, ಬಿಜೆಪಿ ಮುಖಂಡರು, ಡಾ.ಸ.ರಾ.ಲೇಪಾಕ್ಷ, ಪ್ರೊ.ಎಲ್.ನಾಗರಾಜಪ್ಪ,ಅಧ್ಯಾಪಕರ ಸಂಘದ ಕಾರ್ಯದರ್ಶಿ, ಮಲ್ಲಿಕಾರ್ಜುನ, ವಕೀಲರು, ನರೇಂದ್ರ, ಹನುಮಂತೆ ಗೌಡ,ಚಂದ್ರಶೇಖರ್, ಪವನ್, ಮಾಜಿ ಸಿಂಡಿಕೇಟ್ ಸದಸ್ಯರು, ಆದರ್ಶ, ಜಯಪಾಲಯ್ಯ, ರವಿ, ಕಿರಣ್, ಹಾಗೂ ಕಾಲೇಜಿನ ಅಧ್ಯಾಪಕರು ಹಾಗೂ ಭೋದಕೆತರ ಸಿಬ್ಬಂದಿ ಹಾಗೂ ಮುಖಂಡರು ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment