Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೈಸೂರು ದಸರಾಗೆ ಚಾಲನೆ ಕೊಟ್ಟ ನಾದಬ್ರಹ್ಮ ಹಂಸಲೇಖ

---Advertisement---

ಮೈಸೂರು: ಇಂದಿನಿಂದ ನಾಡಹಬ್ಬ ಮೈಸೂರು ದಸರಾ ಶುರುವಾಗಿದೆ. ನಾದಬ್ರಹ್ಮ ಹಂಸಲೇಖ ಅವರು ದಸರಾಗೆ ಚಾಲನೆ ನೀಡಿದ್ದಾರೆ. ನಾಡ ಅಧಿದೇವತೆ ಚಾಮುಂಡಿ ತಾಯಿ ವಿಗ್ರಹಕ್ಕೆ‌ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾಗೆ ಚಾಲನೆ ನೀಡಲಾಗಿದೆ.

ಈ ಅದ್ದೂರಿ ಸಂಭ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಹೆಚ್ ಸಿ ಮಹದೇವಪ್ಪ, ಕೆ ಹೆಚ್ ಮುನಿಯಪ್ಪ, ವೆಂಕಟೇಶ್, ಕೆಜೆ ಜಾರ್ಜ್ ಸೇರಿದಂತೆ ಹಲವರು ಭಾಗಿಯಾಗಿದ್ದರು‌. ಅಷ್ಟೇ ಅಲ್ಲದೆ ದಸರಾ ಚಾಲನೆ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ, ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ರನ್ನು ತಬ್ಬಿಕೊಂಡು ಶುಭಾಶಯಕೋರಿದರು.

ಮೈಸೂರು ದಸರಾ ಉತ್ಸವದ ಹಿನ್ನೆಲೆ ಇಡೀ ಮೈಸೂರು ಮದುವಣಗಿತ್ತಿಯಂತೆ ಅಲಂಕಾರಗೊಂಡಿದೆ. ಎಲ್ಲೆಡೆ ಕಲರ್ ಫುಲ್ ಲೈಟ್ ಗಳು ಕಾಣಿಸುತ್ತಿವೆ. ಇಂದು ದಸರಾಗೆ ಅಧಿಕೃತ ಚಾಲನೆ ಸಿಕ್ಕಿದ್ದು ಅಕ್ಟೋಬರ್ 24ರವರೆಗೆ ಹಲವು ಕಾರ್ಯಕ್ರಮಗಳು ನಡೆಯಲಿವೆ. ಜಂಬೂ ಸವಾರಿಯೊಂದಿಗೆ ಮೈಸೂರು ದಸರಾ ಮುಗಿಯಲಿದೆ. ನಗರದಲ್ಲಿ ಈ ಹತ್ತು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment