Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅಕ್ಟೋಬರ್ 13 ರಂದು ನಾಡದೊರೆ  ರಾಜವೀರ ಮದಕರಿನಾಯಕರ ಜಯಂತ್ಯೋತ್ಸವ : ಎಲ್ಲಾ ಸಮಾಜದವರನ್ನು ಪರಿಗಣನೆಗೆ ತೆಗೆದುಕೊಂಡು ಆಚರಿಸಿ : ಸಿ.ಟಿ.ಕೃಷ್ಣಮೂರ್ತಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 11 : ‌ಅಕ್ಟೋಬರ್ 13 ರಂದು ನಡೆಯಲಿರುವ ಮದಕರಿ ನಾಯಕರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಎಲ್ಲಾ ಸಮಾಜದವರನ್ನು ಪರಿಗಣನೆಗೆ ತೆಗೆದುಕೊಂಡು ಆಚರಣೆಯನ್ನು ಮಾಡುವಂತೆ ನಗರಸಭೆಯ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಸಮಾಜದ ಮುಖಂಡರನ್ನು ಆಗ್ರಹಿಸಿದ್ದಾರೆ.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗವನ್ನಾಳಿದವರಲ್ಲಿ ಮದಕರಿ ನಾಯಕರು ಪ್ರಮುಖರಾಗಿದ್ದಾರೆ. ಇಂತಹ ಜನ್ಮ ದಿನೋತ್ಸವವನ್ನು ಕಾಂತರಾಜ್ ಬಳದವರು ಆಚರಣೆ ಮಾಡುತ್ತಿರುವುದು ಶ್ಲಾಘನೀಯವಾದದು, ನಾನು 1988 ರಿಂದಲೂ ಕೋಟೆಯ ಸಂಪರ್ಕದಲ್ಲಿದ್ದೇನೆ, ಮದಕರಿನಾಯಕರು ಚಿತ್ರದುರ್ಗಕ್ಕೆ ಉತ್ತಮವಾದ ಕಾರ್ಯವನ್ನು ಮಾಡಿದ್ದಾರೆ. ಮಠವನ್ನು ಕಟ್ಟಿಸಿದ್ದಾರೆ. ಕೆರಯನ್ನು ನಿರ್ಮಾಣ ಮಾಡಿದ್ದಾರೆ. ಏಕನಾಥೇಶ್ವರಿ ಅಮ್ಮನವರ ದೇವಾಲಯವನ್ನು ಸಹಾ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು ಚಿತ್ರದುರ್ಗವನ್ನು ಸುಮಾರು 211 ವರ್ಷ ವಿವಿಧ ರಾಜರು ಸಾಮಂತರು ಆಳ್ವಿಕೆಯನ್ನು ನಡೆಸಿದ್ದಾರೆ ಎಂದರು.

ಮದಕರಿನಾಯಕರು ಯುದ್ದ ಪ್ರಿಯರಾಗಿದ್ದರು. ತಮ್ಮ ಆಡಳಿತದ ಸಮಯದಲ್ಲಿ ರಾಜ್ಯವನ್ನು ವಿಸ್ತರಣೆ ಮಾಡಿದ್ದರು, ಮದಕರಿನಾಯಕರು ಯಾವ ಜನಾಂಗಕ್ಕೂ ಸಹಾ ಸೇರಿದವರಲ್ಲ ಎಲ್ಲಾ ಜನಾಂಗದವರನ್ನು ಸ್ನೇಹದಿಂದ ನೋಡುವುದರ ಮೂಲಕ ಆಡಳಿತವನ್ನು ನಡೆಸುತ್ತಿದ್ದರು. ಅವರ ಜಯಂತಿಯನ್ನು ಎಲ್ಲರು ಸೇರಿ ಆಚರಣೆ ಮಾಡಬೇಕಿದೆ. ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಈ ಜಯಂತಿಯನ್ನು ಆಚರಣೆ ಮಾಡಬೇಕಿದೆ ಎಂದು ಕೃಷ್ಣಮೂರ್ತಿ ತಿಳಿಸಿದರು.

ನಗರಸಭೆಯ ಮಾಜಿ ಅಧ್ಯಕ್ಷರಾದ ನಿರಂಜನ ಮೂರ್ತಿ ಮಾತನಾಡಿ, ಚಿತ್ರದುರ್ಗವನ್ನು ಆಳ್ವಿಕೆ ನಡೆಸಿದವರಲ್ಲಿ ಮದಕರಿ ನಾಯಕರಷ್ಠೇ ಪ್ರಮುಖರಾದವರು ಬಿಚ್ಚುಗತ್ತಿ ಭರವಣ್ಣ ನಾಯಕ ಸಹಾ ಚಿತ್ರದುರ್ಗದಲ್ಲಿ ಇವರ ಪ್ರತಿಮೆ ಎಲ್ಲಿಯೂ ಸಹಾ ಇಲ್ಲ ಇವರ ಪ್ರತಿಮೆಯನ್ನು ಚಿತ್ರದುರ್ಗದಲ್ಲಿ ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿದರು.
ಗೋಷ್ಟಿಯಲ್ಲಿ ನಗರಸಭೆ ಮಾಜಿ ಅಧ್ಯಕ್ಷರಾದ ಮಂಜಪ್ಪ, ಮಾಜಿ ಸದಸ್ಯರಾದ ಗಾಡಿ ಮಂಜಣ್ಣ, ಮಾಜಿ ಉಪಾಧ್ಯಕ್ಷರಾದ ದುರುಗೇಶಪ್ಪ, ಜಯ್ಯಣ್ಣ ,ಆನಂದ್, ಮಹಾಂತೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...