Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ : ಈ ಆದೇಶಕ್ಕೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ ಏನು..?

---Advertisement---

 

ಬೆಂಗಳೂರು: ಇತ್ತಿಚೆಗೆ ಶಾಲೆಗಳ ವಿಚಾರದಲ್ಲಿ ಸರ್ಕಾರದ ಆದೇಶಗಳು ವಿರೋಧಕ್ಕೆ ಕಾರಣವಾಗುತ್ತಿದೆ. ನಿನ್ನೆಯಷ್ಟೇ ವಸತಿ ಶಾಲೆಗಳಲ್ಲಿ ಧ್ಯೇಯ ವಾಕ್ಯವೇ ಬದಲಾಗಿದ್ದರ ಸುದ್ದಿಯಾಗಿತ್ತು. ಈ ಬೆನ್ನಲ್ಲೇ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂಬ ಆದೇಶ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಸರ್ಕಾರ ಫೆಬ್ರವರಿ 16ಕ್ಕೆ ಹೊರಡಿಸಿರುವ ಆದೇಶದಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ಅರ್ಥದಲ್ಲಿ ಆದೇಶ ಹೊರಡಿಸಲಾಗಿದೆ. ಇದೀಗ ಇದು ಬಾರೀ ಚರ್ಚೆಗೆ ಗ್ರಾಸವಾಗಿದೆ.

ಈ ಬಗ್ಗೆ ಮಾತನಾಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ, ಇದರಲ್ಲಿ ಒಂದು ಸಣ್ಣ ಪ್ರಿಂಟ್ ಸಮಸ್ಯೆ ಆಗಿದೆ. ನಮಗೆ ಎಲ್ಲಾ ಶಾಲೆಗಳು ಒಂದೇ. ಆದೇಶ ಮಾಡುವಾಗ ಸರ್ಕಾರಿ ಶಾಲೆ, ಅನುದಾನಿತ ಶಾಲೆ ಎಂದು ಪ್ರಿಂಟ್ ಮಿಸ್ಟೇಕ್ ಆಗಿದೆ. ಅದನ್ನು ಎಲ್ಲಾ ಶಾಲೆಗಳು ಎಂಬುದಾಗಿ ಪ್ರಿಂಟ್ ಮಾಡಿಸುತ್ತೇವೆ. ನಮ್ಮ ಸರ್ಕಾರಕ್ಕೆ ಕನ್ನಡದ ಬಗ್ಗೆ ಕಾಳಜಿ ಇದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯದ ಬಗ್ಗೆಯೂ ಮಾತನಾಡಿದ್ದು, ಈ ಸಂಬಂಧ ಈಗಾಗಲೇ ಸದನದಲ್ಲಿ ಚರ್ಚೆಯಾಗಿದೆ. ಕೈಗಾರಿಕೆಗಳಿಗೆ ಹೆಸರು ಹಾಕುವ ಪದ್ಧತಿ ಬರುತ್ತದೆ ಎಂದಿದ್ದಾರೆ. ಶಿಕ್ಷಣ ಇಲಾಖೆ ಕಳೆದ ಕೆಲವು ದಿನಗಳಿಂದ ಎಡವಟ್ಟು ಮಾಡಿಕೊಳ್ಳುತ್ತಲೆ ಇದೆ.

ನಾಡಗೀತೆಯ ವಿಚಾರಕ್ಕೆ ಹೊರಡಿಸಿರುವ ಆದೇಶದಿಂದಾಗಿ ವಿರೋಧಕ್ಕೆ ಗುರಿಯಾಗಿತ್ತು. ಈಗ ಅದನ್ನು ಸರಿ ಮಾಡುವ ಭರವಸೆಯನ್ನು ನೀಡಿದೆ. ಕುವೆಂಪು ಅವರ ಕೈ ಮುಗಿದು ಒಳಗೆ ಬಾ ಎಂಬ ಘೋಷ ವಾಕ್ಯವನ್ನು ಬದಲಿಸಿ, ಧೈರ್ಯವಾಗಿ ಪ್ರಶ್ನಿಸಿ ಎಂಬ ಪದವನ್ನು ಸೇರಿಸಲಾಗಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment